ಪೊಂಗಲ್ ನಲ್ಲಿ ಹುಳು ಪತ್ತೆ 
ರಾಜ್ಯ

ರಾಮೇಶ್ವರಂ ಕೆಫೆ ತಿಂಡಿಯಲ್ಲಿ ಹುಳು ಪತ್ತೆ ಕೇಸ್​​ಗೆ ಟ್ವಿಸ್ಟ್: 25 ಲಕ್ಷ ರೂ ಹಣಕ್ಕಾಗಿ ಬ್ಲಾಕ್​ಮೇಲ್; ಗ್ರಾಹಕನ ವಿರುದ್ಧ ದೂರು ದಾಖಲು

ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು.

ಬೆಂಗಳೂರು: ಬೆಂಗಳೂರು ವಿಮಾನ ನಿಲ್ದಾಣದಲ್ಲಿರುವ ತನ್ನ ಹೋಟೆಲ್​ನಲ್ಲಿ ಆಹಾರದಲ್ಲಿ ಹುಳು ಪತ್ತೆಯಾಗಿದೆ ಎಂಬ ಸುಳ್ಳು ಘಟನೆಯನ್ನು ಸೃಷ್ಟಿಸಿ, ಬ್ರ್ಯಾಂಡ್​ಗೆ ಮಸಿ ಬಳಿಯಲು ಮತ್ತು ಹಣ ಸುಲಿಗೆ ಮಾಡಲು ಯತ್ನಿಸಿದ ಗ್ರಾಹಕನ ವಿರುದ್ಧ ದಕ್ಷಿಣ ಭಾರತದ ಜನಪ್ರಿಯ ರೆಸ್ಟೋರೆಂಟ್ ಬ್ರ್ಯಾಂಡ್ ರಾಮೇಶ್ವರ ಕೆಫೆ ಪೊಲೀಸ್ ದೂರು ದಾಖಲಿಸಿದೆ.

ಗುರುವಾರ (ಜುಲೈ 24) ರಾಮೇಶ್ವರಂ ಕೆಫೆಯ ವಿಮಾನ ನಿಲ್ದಾಣದ ಮಾರಾಟ ಮಳಿಗೆಯಲ್ಲಿ ತನಗೆ ಬಡಿಸಿದ ಊಟದಲ್ಲಿ ಹುಳು ಪತ್ತೆಯಾಗಿದೆ ಎಂದು ಗ್ರಾಹಕರೊಬ್ಬರು ಗಂಭೀರ ಆರೋಪ ಮಾಡಿದ್ದರು. ಅಲ್ಲದೆ, ತಮ್ಮ ಆಹಾರದಲ್ಲಿ ಹುಳು ಪತ್ತೆಯಾಗಿರುವ ವಿಡಿಯೋ ಸಹ ಹಂಚಿಕೊಂಡಿದ್ದರು. ಈ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ತಕ್ಷಣ ವೈರಲ್ ಆಗಿ, ರಾಮೇಶ್ವರಂ ಕೆಫೆ ವಿರುದ್ಧ ಟೀಕೆಗಳು ಕೇಳಿಬಂದವು.

ಆದರೆ ರಾಮೇಶ್ವರಂ ಕೆಫೆ ಈ ಆರೋಪವನ್ನು ಬಲವಾಗಿ ನಿರಾಕರಿಸಿದ್ದು ತಮ್ಮ ಬ್ರ್ಯಾಂಡ್ ಅನ್ನು ಬ್ಲ್ಯಾಕ್‌ಮೇಲ್ ಮಾಡಲು ಈ ಘಟನೆಯನ್ನು ರೂಪಿಸಲಾಗಿದೆ ಎಂದು ಹೇಳಿಕೊಂಡಿದೆ. ಐದರಿಂದ ಏಳು ಜನರ ಗುಂಪು ಗುರುವಾರ ಬೆಳಿಗ್ಗೆ ಔಟ್‌ಲೆಟ್‌ನಲ್ಲಿ ಗಲಾಟೆ ಮಾಡಿ ನಂತರ ವೀಡಿಯೊ ಪ್ರಸಾರವಾಗದಂತೆ ತಡೆಯಲು 25 ಲಕ್ಷ ರೂ.ಗಳಿಗೆ ಬೇಡಿಕೆ ಇಟ್ಟಿದೆ ಎಂದು ಕೆಫೆ ತನ್ನ ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದೆ. ಈ ಸಂಬಂಧ ರಾಮೇಶ್ವರಂ ಕೆಫೆ ಪೊಲೀಸ್ ದೂರು ದಾಖಲಿಸಿದ್ದು, ಕರೆ ದಾಖಲೆಗಳು, ಸ್ಕ್ರೀನ್‌ಶಾಟ್‌ಗಳು ಮತ್ತು ಇತರ ಪುರಾವೆಗಳನ್ನು ಸಲ್ಲಿಸಿದೆ.

ರಾಮೇಶ್ವರಂ ಕೆಫೆಯ ಸಂಸ್ಥಾಪಕಿ ದಿವ್ಯಾ ರಾಘವ್ ಈ ಆರೋಪಗಳನ್ನು "ಆಧಾರರಹಿತ" ಎಂದು ಕರೆದರು. ಈ ಹಿಂದೆಯೂ ಇದೇ ರೀತಿಯ ಬ್ಲ್ಯಾಕ್‌ಮೇಲ್ ಪ್ರಯತ್ನಗಳು ನಡೆದಿವೆ ಎಂದು ಹೇಳಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತದ ಚುನಾವಣಾ ವ್ಯವಸ್ಥೆಯ ವಿಶ್ವಾಸಾರ್ಹತೆ ಬಗ್ಗೆ ಜಾಗತಿಕವಾಗಿ ಅತ್ಯುತ್ತಮ ಸ್ಪಷ್ಟ ಅಭಿಪ್ರಾಯ- ಟ್ರಂಪ್ ಹೇಳಿಕೆ ಬೆನ್ನಲ್ಲೇ MEA ಪ್ರತಿಕ್ರಿಯೆ!

ಮಾಜಿ ಸಚಿವ ಬಿ. ಸಿ. ನಾಗೇಶ್ ನಿಧನ: ನಾಳೆ ತಿಪಟೂರಿನಲ್ಲಿ ಅಂತ್ಯಕ್ರಿಯೆ!

ಬೆಂಗಳೂರು ದಕ್ಷಿಣ ಜಿಲ್ಲೆಯಲ್ಲಿ ನಕಲಿ ಔಷಧಿ ಮರುಪ್ಯಾಕಿಂಗ್ ಬೃಹತ್ ಜಾಲ ಪತ್ತೆ: 5 ಕೋಟಿ ರೂ. ಮೌಲ್ಯದ ವಸ್ತುಗಳು ವಶಕ್ಕೆ!

ಪಸಿಂದು ಗೋಲ್ಡನ್ ಡಕೌಟ್: ಆಡಿದ 2ನೇ ಪಂದ್ಯದಲ್ಲೇ ಕುಂಬ್ಳೆ ದಾಖಲೆ ಸರಿಗಟ್ಟಿದ Team India ಯುವ ಸ್ಪಿನ್ನರ್ ಮಾನವ್ ಸುತಾರ್!

ದೇವೇಗೌಡರ ಕೂಸನ್ನು ಹಾದಿ ತಪ್ಪಿಸಿ ಯಾರಪ್ಪನಿಗೆ ಕೊಡಲು ಹೊರಟಿದ್ದೀರಿ ಮಿಸ್ಟರ್ ಡಿ.ಕೆ. ಶಿವಕುಮಾರ್? ತಾಕತ್ ಇದ್ರೆ ಚರ್ಚೆಗೆ ಬನ್ನಿ, ಕುಮಾರಸ್ವಾಮಿ ಸವಾಲು!