ಧರ್ಮಸ್ಥಳ ಪ್ರಕರಣದ ದೂರುದಾರ 
ರಾಜ್ಯ

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಬೆಳ್ತಂಗಡಿಯಿಂದ ಎಸ್‌ಐಟಿ ಕಾರ್ಯನಿರ್ವಹಣೆ

ದೂರುದಾರರ ಸುರಕ್ಷತೆ ಮತ್ತು ಸುಗಮ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬೆಳ್ತಂಗಡಿಯಿಂದ ಕಾರ್ಯನಿರ್ವಹಿಸಲು ಆರಂಭಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಧರ್ಮಸ್ಥಳ ಪಟ್ಟಣದ ನಿವಾಸಿಯೊಬ್ಬರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಿದ ದೂರಿನ ಮೇರೆಗೆ ಎಸ್‌ಐಟಿ ರಚಿಸಲಾಗಿದ್ದು, ನಿಗೂಢ ಸರಣಿ ಸಾವು, ಅಕ್ರಮ ಬಂಧನ, ಕಸ್ಟಡಿ ಚಿತ್ರಹಿಂಸೆ, ಸುಲಿಗೆ ಮತ್ತು ಆಸ್ತಿ ಸಂಬಂಧಿತ ಅಕ್ರಮಗಳು ಸೇರಿದಂತೆ ಗಂಭೀರ ಅಪರಾಧಗಳ ಬಗ್ಗೆ ತನಿಖೆ ನಡೆಸಲಿದೆ.

ದೂರುದಾರರ ಸುರಕ್ಷತೆ ಮತ್ತು ಸುಗಮ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪವೇ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹವನ್ನೇ ಎಸ್ಐಟಿ ಕೇಂದ್ರವಾಗಿ ಮಾಡಲಾಗುತ್ತಿದೆ. ಇಂದೇ ಬೆಳ್ತಂಗಡಿಯಲ್ಲಿ ಎಸ್ಐಟಿ ಕಚೇರಿ ಆರಂಭವಾಗಿದೆ.

ಈ ಕಚೇರಿಯಿಂದಲೇ ಎಸ್‌ಐಟಿ ತನಿಖೆ ಆರಂಭಿಸಲಿದ್ದು, ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡ ಈಗಾಗಲೇ ಔಪಚಾರಿಕ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಆರೋಪಗಳಿಗೆ ಸಂಬಂಧಿಸಿದ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಮತ್ತು ಶೀಘ್ರದಲ್ಲೇ ಹೇಳಿಕೆಗಳನ್ನು ದಾಖಲಿಸಲು ಯೋಜಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'Grok ರಚಿಸಿದ ಅಸಭ್ಯ, ಕಾನೂನುಬಾಹಿರ ವಿಷಯಗಳ ತೆಗೆದುಹಾಕಿ': Elon Musk ಎಕ್ಸ್‌ಗೆ ಕೇಂದ್ರ ಸರ್ಕಾರ ಖಡಕ್ ಎಚ್ಚರಿಕೆ!

Ramnath Goenka Sahithya Samman 2025: ಸಾಹಿತಿ ಚಂದ್ರಶೇಖರ ಕಂಬಾರರಿಗೆ ಜೀವಮಾನ ಸಾಧನೆ ಪ್ರಶಸ್ತಿ ಪ್ರದಾನ

ಬಳ್ಳಾರಿ ಫೈರಿಂಗ್: ನಿನ್ನೆಯಷ್ಟೇ ಎಸ್ಪಿಯಾಗಿ ಅಧಿಕಾರ ವಹಿಸಿಕೊಂಡಿದ್ದ ಪವನ್ ನೆಜ್ಜೂರ್ ಅಮಾನತು

ಭಾರತ ತಂಡಕ್ಕೆ ಭಾರಿ ಆಘಾತ; ಸ್ಟಾರ್ ಆಟಗಾರನ ಮೂಳೆ ಮುರಿತ, ದೀರ್ಘಕಾಲ ಕ್ರಿಕೆಟ್‌ನಿಂದ ದೂರ!

EVM Survey: ಹಳೆಯ ಸಮೀಕ್ಷೆ ಬಳಸಿಕೊಂಡು ಜನರ ದಾರಿತಪ್ಪಿಸುತ್ತಿರುವುದು ವಿಷಾದನೀಯ - ಸಿಎಂ ಸಿದ್ದರಾಮಯ್ಯ

SCROLL FOR NEXT