ಧರ್ಮಸ್ಥಳ ಪ್ರಕರಣದ ದೂರುದಾರ 
ರಾಜ್ಯ

ಧರ್ಮಸ್ಥಳ ನಿಗೂಢ ಸಾವು ಪ್ರಕರಣ: ಬೆಳ್ತಂಗಡಿಯಿಂದ ಎಸ್‌ಐಟಿ ಕಾರ್ಯನಿರ್ವಹಣೆ

ದೂರುದಾರರ ಸುರಕ್ಷತೆ ಮತ್ತು ಸುಗಮ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ.

ಮಂಗಳೂರು: ಧರ್ಮಸ್ಥಳ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿರುವ ನಿಗೂಢ ಸರಣಿ ಸಾವುಗಳ ತನಿಖೆಗಾಗಿ ಕರ್ನಾಟಕ ಸರ್ಕಾರ ರಚಿಸಿರುವ ವಿಶೇಷ ತನಿಖಾ ತಂಡ(ಎಸ್‌ಐಟಿ) ಬೆಳ್ತಂಗಡಿಯಿಂದ ಕಾರ್ಯನಿರ್ವಹಿಸಲು ಆರಂಭಿಸಿದೆ ಎಂದು ಅಧಿಕಾರಿಗಳು ಶುಕ್ರವಾರ ತಿಳಿಸಿದ್ದಾರೆ.

ಧರ್ಮಸ್ಥಳ ಪಟ್ಟಣದ ನಿವಾಸಿಯೊಬ್ಬರು ರಾಜ್ಯ ಪೊಲೀಸ್ ಮಹಾನಿರ್ದೇಶಕರಿಗೆ ಸಲ್ಲಿಸಿದ ದೂರಿನ ಮೇರೆಗೆ ಎಸ್‌ಐಟಿ ರಚಿಸಲಾಗಿದ್ದು, ನಿಗೂಢ ಸರಣಿ ಸಾವು, ಅಕ್ರಮ ಬಂಧನ, ಕಸ್ಟಡಿ ಚಿತ್ರಹಿಂಸೆ, ಸುಲಿಗೆ ಮತ್ತು ಆಸ್ತಿ ಸಂಬಂಧಿತ ಅಕ್ರಮಗಳು ಸೇರಿದಂತೆ ಗಂಭೀರ ಅಪರಾಧಗಳ ಬಗ್ಗೆ ತನಿಖೆ ನಡೆಸಲಿದೆ.

ದೂರುದಾರರ ಸುರಕ್ಷತೆ ಮತ್ತು ಸುಗಮ ತನಿಖೆಯನ್ನು ಖಚಿತಪಡಿಸಿಕೊಳ್ಳಲು, ಎಸ್ಐಟಿ ತನ್ನ ಕಚೇರಿಯನ್ನು ಧರ್ಮಸ್ಥಳದ ಬದಲಿಗೆ ಬೆಳ್ತಂಗಡಿಯಲ್ಲಿ ಆರಂಭಿಸಿದೆ.

ಬೆಳ್ತಂಗಡಿ ಪೊಲೀಸ್ ಠಾಣೆಯ ಸಮೀಪವೇ ನೂತನವಾಗಿ ನಿರ್ಮಾಣಗೊಂಡಿರುವ ಪೊಲೀಸ್ ವಸತಿ ಗೃಹವನ್ನೇ ಎಸ್ಐಟಿ ಕೇಂದ್ರವಾಗಿ ಮಾಡಲಾಗುತ್ತಿದೆ. ಇಂದೇ ಬೆಳ್ತಂಗಡಿಯಲ್ಲಿ ಎಸ್ಐಟಿ ಕಚೇರಿ ಆರಂಭವಾಗಿದೆ.

ಈ ಕಚೇರಿಯಿಂದಲೇ ಎಸ್‌ಐಟಿ ತನಿಖೆ ಆರಂಭಿಸಲಿದ್ದು, ಶವಗಳನ್ನು ಹೂತಿರುವ ಪ್ರಕರಣದೊಂದಿಗೆ ಇನ್ನಷ್ಟು ದೂರುಗಳು ಎಸ್‌ಐಟಿ ಕಚೇರಿಯಲ್ಲಿ ದಾಖಲಾಗುವ ಸಾಧ್ಯತೆ ಇದೆ.

ಮೂಲಗಳ ಪ್ರಕಾರ, ಎಸ್‌ಐಟಿ ಮುಖ್ಯಸ್ಥ ಡಿಜಿಪಿ ಪ್ರಣವ್ ಮೊಹಾಂತಿ ನೇತೃತ್ವದ ಅಧಿಕಾರಿಗಳ ತಂಡ ಈಗಾಗಲೇ ಔಪಚಾರಿಕ ಪ್ರಕ್ರಿಯೆಗಳನ್ನು ಪ್ರಾರಂಭಿಸಿದೆ, ಆರೋಪಗಳಿಗೆ ಸಂಬಂಧಿಸಿದ ಪ್ರಾಥಮಿಕ ಮಾಹಿತಿಯನ್ನು ಸಂಗ್ರಹಿಸುತ್ತಿದೆ ಮತ್ತು ಶೀಘ್ರದಲ್ಲೇ ಹೇಳಿಕೆಗಳನ್ನು ದಾಖಲಿಸಲು ಯೋಜಿಸಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

ಕ್ಷಿಪಣಿ ದಾಳಿ ಆರೋಪ: Iranಗೆ UAE ಶಾಕ್, ಎಲ್ಲಾ ವ್ಯಾಪಾರ-ವಾಣಿಜ್ಯ ವಹಿವಾಟು ಸಂಪೂರ್ಣ ಸ್ಥಗಿತ..!

ಪರಪ್ಪನ ಅಗ್ರಹಾರ ಜೈಲಿನಲ್ಲಿ ಪ್ರಜ್ವಲ್'ಗೆ VIP ಟ್ರೀಟ್‌ಮೆಂಟ್?: ಕಾನೂನಿನ ಮುಂದೆ ಎಲ್ಲರೂ ಒಂದೇ, ಜೈಲಿನಲ್ಲಿ ಯಾರಿಗೂ ವಿಶೇಷ ಸೌಲಭ್ಯವಿಲ್ಲ; ಸರ್ಕಾರ ಸ್ಪಷ್ಟನೆ