ಹುಲಿ ಸಾವು 
ರಾಜ್ಯ

ಹುಲಿಗಳಿಗೆ ವಿಷಪ್ರಾಶನ ಪ್ರಕರಣ: ಮೂವರ ಬಂಧನ

ಎಫ್‌ಎಸ್‌ಎಲ್ ವರದಿಯಲ್ಲಿ ಚಿರತೆ ಹಾಗೂ ಮಂಗಗಳಿಗೆ ವಿಷಪ್ರಾಶನವಾಗಿದೆ ಎಂದು ದೃಢಪಟ್ಟರೆ ಮಾತ್ರ ತನಿಖೆ ನಡೆಸಿ, ಆರೋಪಿಗಳ ಬಂಧಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಹುಲಿಗಳಿಗೆ ವಿಷಪ್ರಾಶನ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಮತ್ತು ಬಂಡೀಪುರ ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಚಿರತೆಗಳು ಮತ್ತು ಮಂಗಗಳ ನಿಗೂಢ ಸಾವಿನ ಪ್ರಕರಣದ ತನಿಖೆ ಕೈಗೆತ್ತಿಕ್ಕೊಂಡಿದ್ದ ಅರಣ್ಯಾಧಿಕಾರಿಗಳು, ತನಖೆಯ ಸಾಕ್ಷ್ಯಾಧಾರಗಳ ಆಧರಿಸಿ 5 ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಿಆರ್‌ಟಿಯ ಕೌಡಹಳ್ಳಿ ಮತ್ತು ಕೊತವಾಡಿ ಗ್ರಾಮಗಳಲ್ಲಿ ಚಿರತೆಗಳ ಸಾವು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ ಕಾಂಡೇಗಾಲದಲ್ಲಿ ಮಂಗಗಳ ಸಾವಿಗೆ ಕಾರಣರಾದ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳು ವಿಧಿವಿಜ್ಞಾನ ವರದಿಗಾಗಿ ಕಾಯುತ್ತಿದ್ದಾರೆ.

ಎಫ್‌ಎಸ್‌ಎಲ್ ವರದಿಯಲ್ಲಿ ಚಿರತೆ ಹಾಗೂ ಮಂಗಗಳಿಗೆ ವಿಷಪ್ರಾಶನವಾಗಿದೆ ಎಂದು ದೃಢಪಟ್ಟರೆ ಮಾತ್ರ ತನಿಖೆ ನಡೆಸಿ, ಆರೋಪಿಗಳ ಬಂಧಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಹುಲಿಗಳ ಮಾದರಿಗಳನ್ನು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿಗಳು ಬಂದಿವೆ. ಮೃತ ಚಿರತೆಗಳು ಮತ್ತು ಮಂಗಗಳ ಮಾದರಿಗಳನ್ನು ಮೈಸೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿಗೆ ಕನಿಷ್ಠ 15 ದಿನಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

'ದೇಶದ ಘನತೆಗೆ ಮಾಡಿದ ಭೀಕರ ದ್ರೋಹ': ಕಾಂಗ್ರೆಸ್ಸಿಗರ ಅರೆಬೆತ್ತಲೆ ಪ್ರತಿಭಟನೆಗೆ ಜಡ್ಜ್‌ಗಳು ಸೇರಿ 270 ನಿವೃತ್ತ ಅಧಿಕಾರಿಗಳ ಖಂಡನೆ!

T20 World Cup 2026: ಬ್ರೂಕ್ ಭರ್ಜರಿ ಶತಕ; ಪಾಕಿಸ್ತಾನ ವಿರುದ್ಧ ಗೆದ್ದು ಬೀಗಿದ ಇಂಗ್ಲೆಂಡ್​

ಪ್ರಧಾನಿ ಮೋದಿ ಇಸ್ರೇಲ್ ಭೇಟಿಗೂ: ಇಸ್ಲಾಮಿಕ್ ಉಗ್ರವಾದದ ವಿರುದ್ಧ ಷಡ್ಭುಜ ಕೂಟ ಘೋಷಿಸಿದ ನೆತನ್ಯಾಹು!

ಎಐಎಡಿಎಂಕೆ ಉಚ್ಚಾಟಿತ ನಾಯಕಿ ವಿಕೆ ಶಶಿಕಲಾರಿಂದ ಹೊಸ ಪಕ್ಷ ಸ್ಥಾಪನೆ; ರಾಮನಾಥಪುರಂನಲ್ಲಿ ಧ್ವಜ ಅನಾವರಣ

SCROLL FOR NEXT