ಹುಲಿ ಸಾವು 
ರಾಜ್ಯ

ಹುಲಿಗಳಿಗೆ ವಿಷಪ್ರಾಶನ ಪ್ರಕರಣ: ಮೂವರ ಬಂಧನ

ಎಫ್‌ಎಸ್‌ಎಲ್ ವರದಿಯಲ್ಲಿ ಚಿರತೆ ಹಾಗೂ ಮಂಗಗಳಿಗೆ ವಿಷಪ್ರಾಶನವಾಗಿದೆ ಎಂದು ದೃಢಪಟ್ಟರೆ ಮಾತ್ರ ತನಿಖೆ ನಡೆಸಿ, ಆರೋಪಿಗಳ ಬಂಧಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೈಸೂರು: ಹುಲಿಗಳಿಗೆ ವಿಷಪ್ರಾಶನ ಮಾಡಿಸಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಅರಣ್ಯಾಧಿಕಾರಿಗಳು ಮೂವರು ಆರೋಪಿಗಳನ್ನು ಗುರುವಾರ ಬಂಧನಕ್ಕೊಳಪಡಿಸಿದ್ದಾರೆ.

ಮಲೆ ಮಹದೇಶ್ವರ ಬೆಟ್ಟ, ಬಿಳಿಗಿರಿರಂಗನ ಬೆಟ್ಟ ಮತ್ತು ಬಂಡೀಪುರ ಅರಣ್ಯ ಸಂರಕ್ಷಿತ ಪ್ರದೇಶಗಳಲ್ಲಿ ಚಿರತೆಗಳು ಮತ್ತು ಮಂಗಗಳ ನಿಗೂಢ ಸಾವಿನ ಪ್ರಕರಣದ ತನಿಖೆ ಕೈಗೆತ್ತಿಕ್ಕೊಂಡಿದ್ದ ಅರಣ್ಯಾಧಿಕಾರಿಗಳು, ತನಖೆಯ ಸಾಕ್ಷ್ಯಾಧಾರಗಳ ಆಧರಿಸಿ 5 ಹುಲಿಗಳ ಸಾವಿಗೆ ಕಾರಣರಾಗಿದ್ದ ಮೂವರನ್ನು ಬಂಧನಕ್ಕೊಳಪಡಿಸಿದ್ದಾರೆಂದು ತಿಳಿದುಬಂದಿದೆ.

ಬಿಆರ್‌ಟಿಯ ಕೌಡಹಳ್ಳಿ ಮತ್ತು ಕೊತವಾಡಿ ಗ್ರಾಮಗಳಲ್ಲಿ ಚಿರತೆಗಳ ಸಾವು ಮತ್ತು ಗುಂಡ್ಲುಪೇಟೆ ತಾಲ್ಲೂಕಿನ ಕಾಂಡೇಗಾಲದಲ್ಲಿ ಮಂಗಗಳ ಸಾವಿಗೆ ಕಾರಣರಾದ ಅಪರಾಧಿಗಳ ವಿರುದ್ಧ ಕ್ರಮ ಕೈಗೊಳ್ಳಲು ಅರಣ್ಯಾಧಿಕಾರಿಗಳು ವಿಧಿವಿಜ್ಞಾನ ವರದಿಗಾಗಿ ಕಾಯುತ್ತಿದ್ದಾರೆ.

ಎಫ್‌ಎಸ್‌ಎಲ್ ವರದಿಯಲ್ಲಿ ಚಿರತೆ ಹಾಗೂ ಮಂಗಗಳಿಗೆ ವಿಷಪ್ರಾಶನವಾಗಿದೆ ಎಂದು ದೃಢಪಟ್ಟರೆ ಮಾತ್ರ ತನಿಖೆ ನಡೆಸಿ, ಆರೋಪಿಗಳ ಬಂಧಿಸಲಾಗುವುದು ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

ಮೃತ ಹುಲಿಗಳ ಮಾದರಿಗಳನ್ನು ಹೈದರಾಬಾದ್‌ನ ಪ್ರಯೋಗಾಲಯಕ್ಕೆ ಕಳುಹಿಸಲಾಗಿತ್ತು. ಇದರ ವರದಿಗಳು ಬಂದಿವೆ. ಮೃತ ಚಿರತೆಗಳು ಮತ್ತು ಮಂಗಗಳ ಮಾದರಿಗಳನ್ನು ಮೈಸೂರಿನ ಪ್ರಯೋಗಾಲಯಕ್ಕೆ ರವಾನಿಸಲಾಗಿದ್ದು, ವರದಿಗೆ ಕನಿಷ್ಠ 15 ದಿನಗಳ ಅಗತ್ಯವಿದೆ ಎಂದು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಕರ್ನಾಟಕ ಜಾಗತಿಕ ನಾವೀನ್ಯತೆ ತಾಣವಾಗಿ ಪರಿವರ್ತಿಸಲು ಮೂರು ನೀತಿ ಅನಾವರಣಗೊಳಿಸಿದ ಸಿಎಂ

'Glad Was In Audience': ಮತ್ತೆ ಪ್ರಧಾನಿಯನ್ನು ಹಾಡಿ ಹೊಗಳಿದ ಶಶಿ ತರೂರ್, ಗುಲಾಮ ಮನಸ್ಥಿತಿ ಕುರಿತ ಹೇಳಿಕೆ, ಕಾಂಗ್ರೆಸ್ ಕೆಂಡ!

'ವಾರಕ್ಕೆ 72 ಗಂಟೆ ಕೆಲಸ, ಮನಸ್ಥಿತಿ ಬದಲಾಗಬೇಕು, ಪ್ರಧಾನಿ ಮೋದಿ ಆದರ್ಶ': ಚೀನಾ ಹಿಂದಿಕ್ಕಲು ಇನ್ಫೋಸಿಸ್ ನಾರಾಯಣ ಮೂರ್ತಿ '9,9,6' ಸೂತ್ರ!

Delhi blast: ಸ್ಫೋಟಕ್ಕೂ ಮುನ್ನ 'ಆತ್ಮಾಹುತಿ ಬಾಂಬ್ ದಾಳಿ' ಬಗ್ಗೆ ಮಾತಾಡಿದ ಡಾ. ಉಮರ್; ವಿಡಿಯೋದಲ್ಲಿ ಉಗ್ರ ಹೇಳಿದ್ದೇನು?

'ಬೆಂಗಳೂರು ಟೆಕ್ ಸಮ್ಮಿಟ್ 2025'ಕ್ಕೆ ಸಿಎಂ ಸಿದ್ದರಾಮಯ್ಯ ಚಾಲನೆ

SCROLL FOR NEXT