ಬಾಡಿಗೆದಾರ ಉದಯ್ ಹಾಗೂ ಪಿಎಸ್ ಐ ಪುನೀತ್ 
ರಾಜ್ಯ

ಬೆಂಗಳೂರು: PSI ದರ್ಪಕ್ಕೆ ಶಾಶ್ವತ ಕಿವುಡನಾದ ಬಾಡಿಗೆದಾರ! ಪೊಲೀಸ್ ಆಯುಕ್ತರಿಗೆ ದೂರು

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಬೆಂಗಳೂರು: ನಗರದ ಪೊಲೀಸ್ ಸಬ್ ಇನ್ಸ್ ಪೆಕ್ಟರ್ ಒಬ್ಬರ ದರ್ಪಕ್ಕೆ ಬಾಡಿಗೆದಾರ ವ್ಯಕ್ತಿಯೋರ್ವ ಶಾಶ್ವತವಾಗಿ ಕಿವುಡನಾಗಿರುವ ಆರೋಪ ಕೇಳಿಬಂದಿದೆ.

ಬೇಗೂರಿನಲ್ಲಿ ಈ ಘಟನೆ ನಡೆದಿದ್ದು, PSI ಪುನೀತ್ ವಿರುದ್ಧ ಗಂಭೀರ ಆರೋಪ ಕೇಳಿಬಂದಿದೆ. ಮನೆ ಖಾಲಿ ಮಾಡುವ ವಿಚಾರಕ್ಕೆ ಬಾಡಿಗೆದಾರ ಉದಯ್‌ ಮೇಲೆ ಪುನೀತ್ ಹಲ್ಲೆ ನಡೆಸಿದ್ದಾರೆ ಎನ್ನಲಾಗಿದೆ.

ಪಿಎಸ್‌ಐ ಕಪಾಳ ಮೋಕ್ಷಕ್ಕೆ ಉದಯ್‌ಗೆ ಕಿವಿ ಕೇಳಿಸದೆ ಶ್ರವಣ ದೋಷವಾಗಿದೆ ಎಂಬುದು ವೈದ್ಯಕೀಯ ವರದಿಯಲ್ಲಿ ದೃಢವಾಗಿದೆ. ಉದಯ್ ಪರ ವಕೀಲರು ನಗರ ಪೊಲೀಸ್ ಆಯುಕ್ತರಿಗೆ ದೂರು ನೀಡಿದ್ದಾರೆ.

ಸಿವಿಲ್ ವ್ಯಾಜ್ಯದಲ್ಲಿ ಪೊಲೀಸರು ಮದ್ಯ ಪ್ರವೇಶ ಮಾಡಿದ್ದು, ಉದಯ್‌ಗೆ ಅವಾಚ್ಯ ಶಬ್ದಗಳಿಂದ ನಿಂದಿಸಿ ಹಲ್ಲೆ ಮಾಡಲಾಗಿದೆ ಎಂದು ಆರೋಪಿಸಿ ದೂರು ನೀಡಲಾಗಿದೆ. ವೈದ್ಯಕೀಯ ಪರೀಕ್ಷೆ ವೇಳೆ ಎಡಕಿವಿ ಸಂಪೂರ್ಣ ಶ್ರವಣ ದೋಷವಾಗಿರುವ ವರದಿ ಕೂಡ ದೂರಿನ ಜೊತೆ ಸಲ್ಲಿಸಲಾಗಿದೆ.

ಹಿರಿಯ ಅಧಿಕಾರಿಗಳಿಗೆ ದೂರು ನೀಡಿದರೂ ಪಿಎಸ್‌ಐ ಮೇಲೆ ಕ್ರಮ ಆಗದ ಹಿನ್ನೆಲೆಯಲ್ಲಿ ಉದಯ್ ನ್ಯಾಯಕ್ಕಾಗಿ ಕೋರ್ಟ್ ಮೆಟ್ಟಿಲೇರಲು ಮುಂದಾಗಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಉದ್ಯೋಗಾಕಾಂಕ್ಷಿಗಳ ಪ್ರತಿಭಟನೆ: ವಯೋಮಿತಿ 5 ವರ್ಷ ಸಡಿಲಿಕೆ; ಸಮಸ್ಯೆಗೆ ಬಿಜೆಪಿಯೇ ಕಾರಣ ಎಂದ CM

Ranji Trophy final: ಮೊದಲ ದಿನ ಬಲಿಷ್ಠ ಕರ್ನಾಟಕ ವಿರುದ್ಧ ಪ್ರಾಬಲ್ಯ ಸಾಧಿಸಿದ ಜಮ್ಮು ಕಾಶ್ಮೀರ!

ಸರ್ಕಾರಿ ಉದ್ಯೋಗ ಭರ್ತಿ ಆಗ್ತಿಲ್ಲ, ಅದಕ್ಕೆ ನಿರುದ್ಯೋಗಿಗಳಿಗೆ 3 ಸಾವಿರ ಕೊಡ್ತೀರೋದು: ಡಿಕೆ ಶಿವಕುಮಾರ್

AIADMKಯಿಂದ ಮತ್ತಷ್ಟು ಫ್ರೀಬೀಸ್ ಘೋಷಣೆ; ಪ್ರತಿ ಕುಟುಂಬಕ್ಕೆ 10,000 ರೂ. ನೆರವು!

ಶಿವಮೊಗ್ಗದಲ್ಲಿ ಶಾಲಾ ಬಾಲಕನ ಹತ್ಯೆ, 7 ಅಪ್ರಾಪ್ತರ ಬಂಧನ; 15 ಲಕ್ಷ ರೂ ಪರಿಹಾರ ಘೋಷಣೆ

SCROLL FOR NEXT