ಯದುವೀರ್ ಒಡೆಯರ್  
ರಾಜ್ಯ

'ಮೈಸೂರನ್ನಾಳಿದ ಪ್ರತಿ ಮಹಾರಾಜರೂ ಅಭಿವೃದ್ಧಿಯ ಬೀಜ ಬಿತ್ತಿದ್ದಾರೆ; ಸಿದ್ದರಾಮಯ್ಯ ಕೊಡುಗೆಗೆ 2018ರಲ್ಲಿ ಜನ ತಕ್ಕ ಉತ್ತರ ನೀಡಿದ್ದಾರೆ'

ಮಹನೀಯರ ಸಾಧನೆ ಗೌರವಿಸಿ ಸ್ಮರಿಸಬೇಕೆ ಹೊರತು, ಅದನ್ನು ಅಳೆದು ತೂಗಿ ಹೋಲಿಸಬಾರದು. ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಯಂತೀಂದ್ರ ಅವರು ಏನು ಬೇಕಾದರೂ ಹೇಳಿಕೆ ನೀಡಬಾರದು.

ಮೈಸೂರು: ಇಡಿ ವಿಶ್ವವೇ ಮೈಸೂರು ಸಂಸ್ಥಾನವನ್ನು ತಿರುಗಿ ನೋಡುವಂತೆ ಅಭಿವೃದ್ದಿಗೊಳಿಸಿ, ಜನಪರ ಆಡಳಿತವನ್ನು ನಡೆಸಿ, ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಅಜರಾಮರರಾಗಿರುವ ನಾಲ್ವಡಿ ಕೃಷ್ಣರಾಜ ಒಡೆಯರ್ ಕೊಡುಗೆಗಳು ಏನೆಂಬುದು ನಮ್ಮ ಕಣ್ಣ ಮುಂದೆಯೇ ಇವೆ ಎಂದು ಸಂಸದ ಯದುವೀರ್ ಕೃಷ್ಣರಾಜ ಒಡೆಯರ್ ಹೇಳಿದ್ದಾರೆ.

ಯತೀಂದ್ರ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯೆ ನೀಡಿರುವ ಅವರು, ಮೈಸೂರು ಜಿಲ್ಲೆಯವರಾದ ಸಿದ್ದರಾಮಯ್ಯನವರು 2 ಬಾರಿ ಮುಖ್ಯಮಂತ್ರಿಗಳಾಗಿದ್ದರೂ ಅವರು ಎಷ್ಟು ಅಭಿವೃದ್ಧಿ ಕೆಲಸ ಮಾಡಿದ್ದಾರೆ ಎಂಬುದನ್ನು ಜನತೆ ನೋಡಿದ್ದಾರೆ. ಅದಕ್ಕೆ ಸರಿಯಾದ ಉತ್ತರವಾಗಿ 2018ರಲ್ಲೇ ಮೈಸೂರಿನ ಚಾಮುಂಡೇಶ್ವರಿ ವಿಧಾನಸಭಾ ಕ್ಷೇತ್ರದ ಜನತೆ ತಕ್ಕ ಉತ್ತರ ನೀಡಿದ್ದಾರೆ ಎಂದು ತಿರುಗೇಟು ನೀಡಿದ್ದಾರೆ.

ಅಂದಿನ ಪರಿಸ್ಥಿತಿಯಲ್ಲಿ ನಾಲ್ವಡಿ ಮಹಾರಾಜರು ಈ ಮೈಸೂರು ಪ್ರಾಂತ್ಯದಲ್ಲಿ ಯಾವುದಕ್ಕೂ ಕೊರತೆ ಬಾರದಂತೆ ನೋಡಿಕೊಂಡು ತಮ್ಮ ದೂರದೃಷ್ಟಿಯ ಆಡಳಿತದಿಂದ ಅಕ್ಷರಶಃ ಸುವರ್ಣಯುಗವನ್ನೇ ಸೃಷ್ಟಿಸಿದ್ದರು. ಮಹನೀಯರ ಸಾಧನೆ ಗೌರವಿಸಿ ಸ್ಮರಿಸಬೇಕೆ ಹೊರತು, ಅದನ್ನು ಅಳೆದು ತೂಗಿ ಹೋಲಿಸಬಾರದು.

ಮುಖ್ಯಮಂತ್ರಿಯ ಮಗ ಎಂಬ ಕಾರಣಕ್ಕೆ ಯಂತೀಂದ್ರ ಅವರು ಏನು ಬೇಕಾದರೂ ಹೇಳಿಕೆ ನೀಡಬಾರದು. ಅವರು ಕೊಟ್ಟಿರುವ ಹೇಳಿಕೆಯು ಸತ್ಯಕ್ಕೆ ದೂರವಾದುದು ಎಂದು ಹೇಳಿದ್ದಾರೆ.

ಮೈಸೂರು ಸಂಸ್ಥಾನವನ್ನಾಳಿದ ಪ್ರತಿ ಮಹಾರಾಜರೂ ಈ ನೆಲದಲ್ಲಿ ಅಭಿವೃದ್ಧಿಯ ಬೀಜ ಬಿತ್ತಿದ್ದಾರೆˌ ಅವು ಹೆಮ್ಮರವಾಗಿ ಬೆಳೆದು ಎಲ್ಲರಿಗೂ ಆಸರೆಯಾಗಿವೆ. ಅವುಗಳಿಗೆ, ಕೇವಲ ರಾಜಕೀಯ ಕಾರಣಕ್ಕಾಗಿ ಮಾತಿನ ಕೊಡಲಿ ಪೆಟ್ಟು ನೀಡುವ ಪ್ರಯತ್ನ ಮಾಡಬಾರದು. ಅದು ಎಂದಿಗೂ ಫಲ ಕೊಡುವುದಿಲ್ಲ. ಸಾಂವಿಧಾನಿಕ ಹಾಗೂ ಪ್ರಜಾತಂತ್ರದ ಜವಾಬ್ದಾರಿಯುತ ಹುದ್ದೆಯಲ್ಲಿರುವ ಯತೀಂದ್ರ ಅವರಿಗೂ ಮತ್ತು ಮುಖ್ಯಮಂತ್ರಿಯ ಗೌರವಕ್ಕೂ ಅದು ಶ್ರೇಯಸ್ಸು ತರುವುದಿಲ್ಲ ಎಂದು ತಿಳಿಸಿದ್ದಾರೆ.

ಕನ್ನಡಿಗರ ಹೃದಯ ಸಿಂಹಾಸನದಲ್ಲಿ ಎಂದೆಂದಿಗೂ ಅಜರಾಮರರಾಗಿರುವ ರಾಜರ್ಷಿ ನಾಲ್ವಡಿ ಕೃಷ್ಣರಾಜ ಒಡೆಯರ್‌ ಅವರ ಕೊಡುಗೆಗಳು ನಮ್ಮ ಕಣ್ಣ ಮುಂದೆಯೇ ನಿಂತಿವೆ. ಇಂಥ ಮಹನೀಯರ ಸಾಧನೆಗಳನ್ನು ಗೌರವಿಸಿ ಸ್ಮರಿಸಬೇಕೆ ಹೊರತು ಅದನ್ನು ಅಳೆದು ತೂಗಿ ಹೋಲಿಸಬಾರದು ಎಂದಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಮುಖ್ಯಮಂತ್ರಿ ಬದಲಾವಣೆ: ದೆಹಲಿಯಲ್ಲಿ ಕಾಂಗ್ರೆಸ್‌ ಮ್ಯಾರಥಾನ್‌ ಮೀಟಿಂಗ್ ಬಳಿಕ ಕೆ.ಸಿ ವೇಣುಗೋಪಾಲ್ ಹೇಳಿದ್ದೇನು? Video

IPL 2026 Qualifier 1: GT ವಿರುದ್ದ ಸ್ಫೋಟಕ ಬ್ಯಾಟಿಂಗ್, ಇತಿಹಾಸ ಬರೆದ RCB

IPL 2026 Qualifier 1: ರಜತ್ ಪಟಿದಾರ್ ಸ್ಫೋಟಕ ಬ್ಯಾಟಿಂಗ್, GTಗೆ ಗೆಲ್ಲಲು 255 ರನ್ ಬೃಹತ್ ಗುರಿ ನೀಡಿದ RCB

ಬೆಂಗಳೂರು: ದೃಷ್ಟಿಹೀನ ಸ್ನೇಹಿತೆ ಬಳಿ ಇದ್ದ 49.5 ಲಕ್ಷ ರೂ. ನಗದು, ಚಿನ್ನ ಕದ್ದ ಖದೀಮ ದಂಪತಿ ಬಂಧನ!

IPL 2026 Qualifier 1: ಐಪಿಎಲ್ ಇತಿಹಾಸದ ಅತ್ಯಪರೂಪದ ದಾಖಲೆ ಬರೆದ Virat Kohli; ಡಬಲ್ ಆಘಾತ ಕೊಟ್ಟ Holder

SCROLL FOR NEXT