ಸಾಂದರ್ಭಿಕ ಚಿತ್ರ 
ರಾಜ್ಯ

ಉಡುಪಿ: 3.84 ಲಕ್ಷ ರೂ ಮೌಲ್ಯದ ಕಟ್ಟಡ ಸಾಮಾಗ್ರಿ ಕಳ್ಳತನ ಆರೋಪ, ಇಂಜಿನಿಯರ್ ವಿರುದ್ಧ ದೂರು!

ಈ ಸಂಬಂಧ ಪುಣೆ ಮೂಲದ ಶ್ರೀ ಎಂಟರ್‌ಪ್ರೈಸಸ್‌ನ ಸುರಕ್ಷತಾ ಉಸ್ತುವಾರಿ ಕುಶಾಲಾ ದೂರು ದಾಖಲಿಸಿದ್ದಾರೆ. ಜೂನ್ 12 ರಂದು ದಾಸ್ತಾನು ಪರಿಶೀಲನೆ ವೇಳೆ ಕಳ್ಳತನ ಪತ್ತೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಉಡುಪಿ: ಖಾಸಗಿ ಆಸ್ಪತ್ರೆಯೊಂದನ್ನು ನಿರ್ಮಾಣ ಮಾಡಲಾಗುತ್ತಿದ್ದ ಸ್ಥಳದಿಂದ ರೂ. 3.84 ಲಕ್ಷ ಮೌಲ್ಯದ ಅಲ್ಯೂಮಿನಿಯಂ ಮತ್ತಿತರ ಸಾಮಗ್ರಿಗಳನ್ನು ಕಳವು ಮಾಡಿದ ಆರೋಪದ ಮೇಲೆ ಇಂಜಿನಿಯರ್ ವಿರುದ್ಧ ಪ್ರಕರಣ ದಾಖಲಾಗಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಈ ಸಂಬಂಧ ಪುಣೆ ಮೂಲದ ಶ್ರೀ ಎಂಟರ್‌ಪ್ರೈಸಸ್‌ನ ಸುರಕ್ಷತಾ ಉಸ್ತುವಾರಿ ಕುಶಾಲಾ ದೂರು ದಾಖಲಿಸಿದ್ದಾರೆ. ಜೂನ್ 12 ರಂದು ದಾಸ್ತಾನು ಪರಿಶೀಲನೆ ವೇಳೆ ಕಳ್ಳತನ ಪತ್ತೆಯಾಗಿದೆ ಎಂದು ಅವರು ದೂರಿನಲ್ಲಿ ತಿಳಿಸಿದ್ದಾರೆ.

ಕಟ್ಟಡ ಸಾಮಾಗ್ರಿಗಳನ್ನು ಮಾರ್ಚ್ ಮತ್ತು ಏಪ್ರಿಲ್‌ನಲ್ಲಿ ಸ್ಥಳಕ್ಕೆ ತಲುಪಿಸಲಾಗಿತ್ತು. ಏಪ್ರಿಲ್ 21 ನಂತರ ಬಿಹಾರದ ಇಂಜಿನಿಯರ್ ಅನುರಾಗ್ ಕುಮಾರ್, ಕಾಮಗಾರಿ ಕುರಿತು ವರದಿಯನ್ನು ನಿಲ್ಲಿಸಿದ ನಂತರ ಅವರ ಮೇಲೆ ಅನುಮಾನ ಉಂಟಾಗಿರುವುದಾಗಿ ದೂರಿನಲ್ಲಿ ಹೇಳಲಾಗಿತ್ತು.

ಆತ ಕಳ್ಳತನ ಮಾಡಿರುವುದಾಗಿ ಒಪ್ಪಿಕೊಂಡಿದ್ದಾನೆ ಆದರೆ ಇನ್ನೂ ಸಾಮಗ್ರಿಗಳನ್ನು ಹಿಂದಿರುಗಿಸಿಲ್ಲ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಈ ಸಂಬಂಧ ಮಲ್ಪೆ ಪೊಲೀಸರು ಕಳ್ಳತನ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT