ಶಕ್ತಿ ಯೋಜನೆ ಫಲಾನುಭವಿಗಳೊಂದಿಗೆ ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಕ್ತಿ ಯೋಜನೆ: ಬೆಂಗಳೂರು, ಹುಬ್ಬಳ್ಳಿ- ಧಾರವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಳ; ಸಮೀಕ್ಷಾ ವರದಿ

ಸಸ್ಟೈನೇಬಲ್‌ ಮೊಬಿಲಿಟಿ ನೆಟ್‌ವರ್ಕ್‌ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ' ಯೋಜನೆ ಕುರಿತು ವಿಪಕ್ಷಗಳು ಸೇರಿದಂತೆ ಕೆಲವರು ಟೀಕೆ ವ್ಯಕ್ತಪಡಿಸುತ್ತಾ ಬಂದಿದ್ದರೂ ಅದು ಅನೇಕ ಕಾರಣಗಳಿಂದ ಪ್ರಯೋಜನಕಾರಿಯಾಗಿದೆ ಎಂಬುದನ್ನು ವಿವಿಧ ಸಮೀಕ್ಷಾ ವರದಿಗಳು ದೃಢಪಡಿಸಿವೆ.

ಇದೀಗ ಸಸ್ಟೈನೇಬಲ್‌ ಮೊಬಿಲಿಟಿ ನೆಟ್‌ವರ್ಕ್‌ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ - ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ.

ಈ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

ನಮ್ಮ ಯೋಜನೆಯೊಂದು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದರೆ ನನಗೆ ಅದಕ್ಕಿಂತ ಹೆಚ್ಚು ಸಂತಸದ ವಿಷಯ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ದೆಹಲಿ ಸ್ಫೋಟ ಪ್ರಕರಣದಲ್ಲಿ ಮೊದಲ ಬಂಧನ: i20 ಕಾರಿನ ಮಾಲೀಕ ಆಮಿರ್ Arrest; ಡಾ. ಉಮರ್ ಜೊತೆ ಸೇರಿ ದಾಳಿಗೆ ಸಂಚು!

KPCC ಅಧ್ಯಕ್ಷ ಸ್ಥಾನಕ್ಕೆ ರಾಜಿನಾಮೆ?: ದೆಹಲಿಯಲ್ಲಿ ಡಿಸಿಎಂ ಡಿ.ಕೆ ಶಿವಕುಮಾರ್ ಪ್ರತಿಕ್ರಿಯೆ!

ಹೂಕೋಸು ಫೋಟೋ ಹಾಕಿ ಬಿಹಾರದ NDA ಗೆಲುವು ಸಂಭ್ರಮಿಸಿದ ಅಸ್ಸಾಂ ಬಿಜೆಪಿ ಸಚಿವ!: ಮುಸ್ಲಿಮ್ ನರಮೇಧ ನೆನಪಿಸಿದ್ದಕ್ಕೆ ಕಾಂಗ್ರೆಸ್ ಕೆಂಡ!

ಕುಟುಂಬದ ಮೇಲೆ ದಾಳಿ ಮಾಡುವವರನ್ನು...: ಸಹೋದರಿ ರೋಹಿಣಿಗೆ ಆದ ಅಪಮಾನಕ್ಕೆ ಸಿಡಿದ ತೇಜ್ ಪ್ರತಾಪ್ ಯಾದವ್; ತಂದೆ ಲಾಲು ಪ್ರಸಾದ್ ಗೆ ಹೇಳಿದ್ದೇನು?

ಬೆಂಗಳೂರಿನಲ್ಲಿ ಲೈವ್ ಕಾರ್ಯಕ್ರಮದ ವೇಳೆ ಗಾಯಕನ ಪ್ಯಾಂಟ್ ಎಳೆದು ಅವಮಾನ, Video Viral!

SCROLL FOR NEXT