ಶಕ್ತಿ ಯೋಜನೆ ಫಲಾನುಭವಿಗಳೊಂದಿಗೆ ಸಿಎಂ ಸಿದ್ದರಾಮಯ್ಯ 
ರಾಜ್ಯ

ಶಕ್ತಿ ಯೋಜನೆ: ಬೆಂಗಳೂರು, ಹುಬ್ಬಳ್ಳಿ- ಧಾರವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಳ; ಸಮೀಕ್ಷಾ ವರದಿ

ಸಸ್ಟೈನೇಬಲ್‌ ಮೊಬಿಲಿಟಿ ನೆಟ್‌ವರ್ಕ್‌ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.

ಬೆಂಗಳೂರು: ರಾಜ್ಯ ಕಾಂಗ್ರೆಸ್ ಸರ್ಕಾರದ ಐದು ಗ್ಯಾರಂಟಿ ಯೋಜನೆಗಳಲ್ಲಿ ಒಂದಾದ 'ಶಕ್ತಿ' ಯೋಜನೆ ಕುರಿತು ವಿಪಕ್ಷಗಳು ಸೇರಿದಂತೆ ಕೆಲವರು ಟೀಕೆ ವ್ಯಕ್ತಪಡಿಸುತ್ತಾ ಬಂದಿದ್ದರೂ ಅದು ಅನೇಕ ಕಾರಣಗಳಿಂದ ಪ್ರಯೋಜನಕಾರಿಯಾಗಿದೆ ಎಂಬುದನ್ನು ವಿವಿಧ ಸಮೀಕ್ಷಾ ವರದಿಗಳು ದೃಢಪಡಿಸಿವೆ.

ಇದೀಗ ಸಸ್ಟೈನೇಬಲ್‌ ಮೊಬಿಲಿಟಿ ನೆಟ್‌ವರ್ಕ್‌ ನಡೆಸಿದ ಸಮೀಕ್ಷಾ ವರದಿ ಪ್ರಕಾರ, ಶಕ್ತಿ ಯೋಜನೆಯಡಿ ಮಹಿಳೆಯರು ಬಸ್‌ಗಳಲ್ಲಿ ಉಚಿತವಾಗಿ ಓಡಾಡಲು ಆರಂಭಿಸಿದ ಬಳಿಕ ಬೆಂಗಳೂರು, ಹುಬ್ಬಳ್ಳಿ- ಧಾರಾವಾಡದಲ್ಲಿ ಉದ್ಯೋಗಸ್ಥ ಮಹಿಳೆಯರ ಪ್ರಮಾಣ ಹೆಚ್ಚಾಗಿರುವುದು ಕಂಡುಬಂದಿದೆ.

ಶಕ್ತಿ ಯೋಜನೆಯಿಂದಾಗಿ ಮಹಿಳೆಯರ ಔದ್ಯೋಗಿಕ ದರವು ಬೆಂಗಳೂರಿನಲ್ಲಿ ಶೇ.23 ಮತ್ತು ಹುಬ್ಬಳ್ಳಿ - ಧಾರಾವಾಡದಲ್ಲಿ ಶೇ.21 ರಷ್ಟು ಏರಿಕೆಯಾಗಿರುವುದು ಅಧ್ಯಯನದಿಂದ ಬಹಿರಂಗವಾಗಿದೆ. ಮಹಿಳೆಯರಿಗೆ ಈ ಯೋಜನೆಯಿಂದಾಗಿ ಶೇ.30 ರಿಂದ ಶೇ.50 ರಷ್ಟು ಖರ್ಚು ಕಡಿಮೆಯಾಗುತ್ತಿರುವುದಾಗಿ ಸ್ವತಃ ಅವರೇ ಸಮೀಕ್ಷೆಯ ವೇಳೆ ಹೇಳಿಕೊಂಡಿದ್ದಾರೆ.

ಈ ವರದಿಯನ್ನು ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಹಂಚಿಕೊಂಡಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ, ಮಹಿಳೆಯರಿಗೆ ಆರ್ಥಿಕ ಬಲ ತುಂಬಿ, ಅವರನ್ನು ಸ್ವಾವಲಂಬಿಯಾಗಿಸುವ ಉದ್ದೇಶದ ಈ ಯೋಜನೆಯ ಬಗೆಗೆ ಕೇಳಿಬಂದ ಟೀಕೆಗಳು, ವ್ಯವಸ್ಥಿತ ಅಪಪ್ರಚಾರ ಎಲ್ಲವೂ ಸಾಧನೆಯ ಮುಂದೆ ಮಂಡಿಯೂರಿದೆ. ಅಂತಾರಾಷ್ಟ್ರೀಯ ಮಟ್ಟದಲ್ಲಿಯೂ ವ್ಯಾಪಕ ಪ್ರಶಂಸೆಗೆ ಒಳಗಾಗಿರುವ ನಮ್ಮ ಗ್ಯಾರಂಟಿ ಯೋಜನೆಗಳು ಇಂದು ನಾಡಿನ ಜನರ ತಲಾದಾಯ ಹೆಚ್ಚಿಸಿ, ಅವರ ಬದುಕಿಗೆ ಆರ್ಥಿಕ ಭದ್ರತೆ ಕಲ್ಪಿಸಿದೆ ಎಂದು ತಿಳಿಸಿದ್ದಾರೆ.

ನಮ್ಮ ಯೋಜನೆಯೊಂದು ನಿರೀಕ್ಷೆಗೂ ಮೀರಿ ಸಾಧನೆ ಮಾಡಿದರೆ ನನಗೆ ಅದಕ್ಕಿಂತ ಹೆಚ್ಚು ಸಂತಸದ ವಿಷಯ ಬೇರೆ ಇಲ್ಲ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಳ್ಳಾರಿ ಫೈರಿಂಗ್: ಮೃತ ಕಾಂಗ್ರೆಸ್ ಕಾರ್ಯಕರ್ತನ ಕುಟುಂಬಕ್ಕೆ 25 ಲಕ್ಷ ಪರಿಹಾರ

ಆಗ Navy Seal.. ಈಗ ಡೆಲ್ಟಾ ಫೋರ್ಸ್: Venezuela ಅಧ್ಯಕ್ಷರ ಹೆಡೆಮುರಿ ಕಟ್ಟಿದ ಅಮೆರಿಕದ ಸೀಕ್ರೆಟ್ ಸೇನೆ! Video

ಹಾವೇರಿ: ಸುಂಟರಗಾಳಿಗೆ ಕುಸಿದ ಬೃಹತ್ ಪೆಂಡಾಲ್‌; ಸತೀಶ್ ಜಾರಕಿಹೊಳಿ ಸ್ವಲ್ಪದರಲ್ಲೇ ಪಾರು! Video

ʻರಿಪಬ್ಲಿಕ್ ಆಫ್ ಬಳ್ಳಾರಿʼಗೆ ಮತ್ತೆ ಅವಕಾಶ ನೀಡಲ್ಲ; ರೆಡ್ಡಿ ಕೋಟೆ ನಿರ್ಮಿಸಿಕೊಂಡಿದ್ದಾರೆ, ಅವರನ್ನು ಕೊಲ್ಲಲು ಸಾಧ್ಯವೇ?

ಕಾಂಗ್ರೆಸ್​​ನಿಂದ G RAM G ಕಾಯ್ದೆ ವಿರುದ್ಧ ದೇಶಾದ್ಯಂತ 'MGNREGA ಬಚಾವೋ ಸಂಗ್ರಾಮ್'

SCROLL FOR NEXT