ಸಾಂದರ್ಭಿಕ ಚಿತ್ರ  
ರಾಜ್ಯ

ಹಾವೇರಿ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು, ಮತ್ತಿಬ್ಬರಿಗೆ ತೀವ್ರ ಗಾಯ

ವಿದ್ಯುತ್ ತಂತಿ ಮೊಹಮ್ಮದ್ ಶಾ ಮೈಮೇಲೆ ಬಿದ್ದಿತು. ಇದೇ ವೇಳೆ ಪಕ್ಕದಲ್ಲಿದ್ದ ವಿದ್ಯಾರ್ಥಿಗಳಿಗೂ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾರೆ.

ಹಾವೇರಿ: ಜಿಲ್ಲೆಯ ಹಂಸಬಾವಿಯ ಶಿವಯೋಗೋಶ್ವರ ಪ್ರೌಢಶಾಲೆ ಆವರಣದಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ಮೊಹಮ್ಮದ್ ಶಾ ಕಲಂದರ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

4ನೇ ತರಗತಿಯಲ್ಲಿ ಓದುತ್ತಿದ್ದ ಮೊಹಮ್ಮದ್ ಶಾ ನಿನ್ನೆ ಮಧ್ಯಾಹ್ನ ಊಟದ ವಿರಾಮ ಸಮಯದಲ್ಲಿ ಹೊರಗೆ ಹೋಗಿದ್ದ ವೇಳೆ ವಿದ್ಯುತ್ ತಂತಿ ಕಡಿದುಬಿದ್ದು ಮೊಹಮ್ಮದ್ ಮೈಮೇಲೆ ಬಿದ್ದಿತ್ತು.

ಶಾಲೆ ಆವರಣದಲ್ಲಿದ್ದ ತೆಂಗಿನ ಮರಕ್ಕೆ ತಾಗಿಕೊಂಡು ವಿದ್ಯುತ್ ತಂತಿ ಹಾದುಹೋಗಿದೆ. ವಿದ್ಯಾರ್ಥಿಗಳಾದ ಮೊಹಮ್ಮದ್ ಶಾ ಮತ್ತು ಆತನ ಇನ್ನಿಬ್ಬರು ಸ್ನೇಹಿತರು ಮಧ್ಯಾಹ್ನ ಊಟದ ಸಮಯದಲ್ಲಿ ಆವರಣದಲ್ಲಿದ್ದಾಗ ವಿದ್ಯುತ್ ತಂತಿ ಸಮೇತ ತೆಂಗಿನ ಮರ ಬಿದ್ದಿತು.

ವಿದ್ಯುತ್ ತಂತಿ ಮೊಹಮ್ಮದ್ ಶಾ ಮೈಮೇಲೆ ಬಿದ್ದಿತು. ಇದೇ ವೇಳೆ ಪಕ್ಕದಲ್ಲಿದ್ದ ವಿದ್ಯಾರ್ಥಿಗಳಿಗೂ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾರೆ.

ತಕ್ಷಣವೇ ಶಾಲೆಯಲ್ಲಿ ಶಿಕ್ಷಕರಿಗೆ ವಿಷಯ ತಿಳಿದು ಹಾವೇರಿ ಜಿಲ್ಲಾಸ್ಪತ್ರೆಗೆ ಮೂವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದಾಗ ಮೊಹಮ್ಮದ್ ಶಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಮತ್ತಿಬ್ಬರು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕನ ಸಾವಿಗೆ ಪೋಷಕರು ದೂರು ನೀಡಿಲ್ಲ, ಪೊಲೀಸರು ಆಕಸ್ಮಿಕ ಅವಘಡದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಕೋಲ್ಕತ್ತಾದ ಹೊಟೇಲ್ ನಲ್ಲಿ ಭೀಕರ ಅಗ್ನಿ ಅವಘಡ: 9 ಮಂದಿ ಸಾವು, 6 ಜನರಿಗೆ ಗಾಯ-Video

Pak ಬಣ್ಣ ಬಯಲು: ಕಾಶ್ಮೀರ ರಕ್ತದೋಕುಳಿಗೆ 10,000 ಉಗ್ರರ ರವಾನಿಸಿದ್ದ: Hafiz Saeed ಪಾಪಕೃತ್ಯ ಬಹಿರಂಗಪಡಿಸಿದ ಮೌಲ್ವಿ, Video ವೈರಲ್

ಸಾಮಾಜಿಕ ಭದ್ರತಾ ಪಿಂಚಣಿ ಯೋಜನೆ: ನಕಲಿ ಪಿಂಚಣಿದಾರರಿಗೆ ಸರ್ಕಾರ ಶಾಕ್; 18 ಲಕ್ಷ ಖಾತೆಗಳು ತಾತ್ಕಾಲಿಕ ಸ್ಥಗಿತ, ವಂಚನೆಯಲ್ಲಿ ಬೆಂಗಳೂರೇ ನಂ.1..!

ತಮಿಳುನಾಡು ಜನತೆಗೆ CM ವಿಜಯ್ ಬಂಪರ್‌ ಗಿಫ್ಟ್;‌ ಸರ್ಕಾರಿ ನೌಕರರಿಗೆ 3ನೇ ಮಗುವಿಗೂ 1 ವರ್ಷ ಮಾತೃತ್ವ ರಜೆ; ಆರೋಗ್ಯ ವಿಮೆ 25 ಲಕ್ಷ ರೂ.ಗೆ ಹೆಚ್ಚಳ!

ಪುಣೆಯಲ್ಲಿ ಘೋರ ಕೃತ್ಯ: 9 ವರ್ಷದ ಬಾಲಕಿ ಮೇಲೆ ಅತ್ಯಾಚಾರ ಎಸಗಿ ಕೊಲೆ; ಯುವಕನ ಬಂಧನ!