ಸಾಂದರ್ಭಿಕ ಚಿತ್ರ  
ರಾಜ್ಯ

ಹಾವೇರಿ: ವಿದ್ಯುತ್ ತಂತಿ ತಗುಲಿ ವಿದ್ಯಾರ್ಥಿ ಸಾವು, ಮತ್ತಿಬ್ಬರಿಗೆ ತೀವ್ರ ಗಾಯ

ವಿದ್ಯುತ್ ತಂತಿ ಮೊಹಮ್ಮದ್ ಶಾ ಮೈಮೇಲೆ ಬಿದ್ದಿತು. ಇದೇ ವೇಳೆ ಪಕ್ಕದಲ್ಲಿದ್ದ ವಿದ್ಯಾರ್ಥಿಗಳಿಗೂ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾರೆ.

ಹಾವೇರಿ: ಜಿಲ್ಲೆಯ ಹಂಸಬಾವಿಯ ಶಿವಯೋಗೋಶ್ವರ ಪ್ರೌಢಶಾಲೆ ಆವರಣದಲ್ಲಿ ವಿದ್ಯುತ್ ತಂತಿ ಕಡಿದು ಬಿದ್ದು ಮೊಹಮ್ಮದ್ ಶಾ ಕಲಂದರ್ ಎಂಬ ವಿದ್ಯಾರ್ಥಿ ಮೃತಪಟ್ಟಿದ್ದಾನೆ.

4ನೇ ತರಗತಿಯಲ್ಲಿ ಓದುತ್ತಿದ್ದ ಮೊಹಮ್ಮದ್ ಶಾ ನಿನ್ನೆ ಮಧ್ಯಾಹ್ನ ಊಟದ ವಿರಾಮ ಸಮಯದಲ್ಲಿ ಹೊರಗೆ ಹೋಗಿದ್ದ ವೇಳೆ ವಿದ್ಯುತ್ ತಂತಿ ಕಡಿದುಬಿದ್ದು ಮೊಹಮ್ಮದ್ ಮೈಮೇಲೆ ಬಿದ್ದಿತ್ತು.

ಶಾಲೆ ಆವರಣದಲ್ಲಿದ್ದ ತೆಂಗಿನ ಮರಕ್ಕೆ ತಾಗಿಕೊಂಡು ವಿದ್ಯುತ್ ತಂತಿ ಹಾದುಹೋಗಿದೆ. ವಿದ್ಯಾರ್ಥಿಗಳಾದ ಮೊಹಮ್ಮದ್ ಶಾ ಮತ್ತು ಆತನ ಇನ್ನಿಬ್ಬರು ಸ್ನೇಹಿತರು ಮಧ್ಯಾಹ್ನ ಊಟದ ಸಮಯದಲ್ಲಿ ಆವರಣದಲ್ಲಿದ್ದಾಗ ವಿದ್ಯುತ್ ತಂತಿ ಸಮೇತ ತೆಂಗಿನ ಮರ ಬಿದ್ದಿತು.

ವಿದ್ಯುತ್ ತಂತಿ ಮೊಹಮ್ಮದ್ ಶಾ ಮೈಮೇಲೆ ಬಿದ್ದಿತು. ಇದೇ ವೇಳೆ ಪಕ್ಕದಲ್ಲಿದ್ದ ವಿದ್ಯಾರ್ಥಿಗಳಿಗೂ ವಿದ್ಯುತ್ ತಂತಿ ತಗುಲಿ ತೀವ್ರ ಗಾಯಗೊಂಡಿದ್ದಾರೆ.

ತಕ್ಷಣವೇ ಶಾಲೆಯಲ್ಲಿ ಶಿಕ್ಷಕರಿಗೆ ವಿಷಯ ತಿಳಿದು ಹಾವೇರಿ ಜಿಲ್ಲಾಸ್ಪತ್ರೆಗೆ ಮೂವರು ವಿದ್ಯಾರ್ಥಿಗಳನ್ನು ಕರೆದುಕೊಂಡು ಹೋದಾಗ ಮೊಹಮ್ಮದ್ ಶಾ ಮೃತಪಟ್ಟಿರುವುದಾಗಿ ವೈದ್ಯರು ದೃಢಪಡಿಸಿದರು. ಮತ್ತಿಬ್ಬರು ವಿದ್ಯಾರ್ಥಿಗಳು ಚೇತರಿಸಿಕೊಳ್ಳುತ್ತಿದ್ದಾರೆ ಎಂದು ತಿಳಿದುಬಂದಿದೆ.

ಬಾಲಕನ ಸಾವಿಗೆ ಪೋಷಕರು ದೂರು ನೀಡಿಲ್ಲ, ಪೊಲೀಸರು ಆಕಸ್ಮಿಕ ಅವಘಡದ ಸಾವು ಎಂದು ಕೇಸು ದಾಖಲಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

Delhi Red Fort blast- UAPA ಕೇಸು ದಾಖಲು, ಇಬ್ಬರ ಬಂಧನ, ಬೆಂಗಳೂರು ಸೇರಿ ಪ್ರಮುಖ ನಗರಗಳಲ್ಲಿ ಕಟ್ಟೆಚ್ಚರ

ಬಾಲಿವುಡ್ ಹಿರಿಯ ನಟ ಧರ್ಮೇಂದ್ರ ವಿಧಿವಶ: ಗಣ್ಯರ ಸಂತಾಪ

ಸ್ಫೋಟಕ್ಕೂ ಮುನ್ನ ಮಸೀದಿ ಬಳಿ 3 ಗಂಟೆ ಪಾರ್ಕ್‌: ನಿರ್ಗಮಿಸಿದ ಕೆಲ ನಿಮಿಷದಲ್ಲೇ ಕಾರ್‌ ಬ್ಲಾಸ್ಟ್‌, ಶಂಕಿತ ಆತ್ಮಹತ್ಯಾ ಬಾಂಬರ್ ಚಿತ್ರ ಬಹಿರಂಗ..!

Bihar elections 2025: ಎರಡನೇ ಮತ್ತು ಕೊನೆಯ ಸುತ್ತಿನ ಮತದಾನ ಪ್ರಗತಿಯಲ್ಲಿ, ದೆಹಲಿ ಸ್ಫೋಟ ನಂತರ ಬಿಹಾರದಲ್ಲಿ ಕಟ್ಟೆಚ್ಚರ

Delhi Red Fort Blast: ಸ್ಥಳಕ್ಕೆ NIA-NSG ಭೇಟಿ; ಸಮಗ್ರ ತನಿಖೆ ಆರಂಭ, ಉನ್ನತ ಮಟ್ಟದ ಸಭೆ ಕರೆದ ಅಮಿತ್ ಶಾ

SCROLL FOR NEXT