ಕಲಾಸಿಪಾಳ್ಯ ಬಸ್ ನಿಲ್ದಾಣ. 
ರಾಜ್ಯ

ಬೆಂಗಳೂರು: ಕಲಾಸಿಪಾಳ್ಯ ಬಸ್‌ ನಿಲ್ದಾಣ ಹೆಸರು ಬದಲಾವಣೆ; ಹೊಸ ಹೆಸರೇನು ಗೊತ್ತಾ?

ನಗರದ ಕಲಾಸಿಪಾಳ್ಯ ಬಸ್​ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಹೆಸರನ್ನು ಇಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟೇಪ್ ಕತ್ತರಿಸಿ ನಾಮಫಲಕವನ್ನು ಶನಿವಾರ ಅನಾವರಣ ಮಾಡಿದ್ದಾರೆ.

ಬೆಂಗಳೂರು: ನಗರದ ಕಲಾಸಿಪಾಳ್ಯ ಬಸ್​ ನಿಲ್ದಾಣದ ಹೆಸರನ್ನು ಬದಲಾವಣೆ ಮಾಡಲಾಗಿದ್ದು, ಹೊಸ ಹೆಸರನ್ನು ಇಡಲಾಗಿದೆ. ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು ಟೇಪ್ ಕತ್ತರಿಸಿ ನಾಮಫಲಕವನ್ನು ಶನಿವಾರ ಅನಾವರಣ ಮಾಡಿದ್ದಾರೆ.

ಕೆ.ಆರ್​ ಮಾರ್ಕೆಟ್​​​ನ ಕಲಾಸಿಪಾಳ್ಯ ಬಸ್​​ ನಿಲ್ದಾಣಕ್ಕೆ ಜನೋಪಕಾರಿ ದೊಡ್ಡಣ್ಣಶೆಟ್ಟರ ಹೆಸರನ್ನು ಇಡಲಾಗಿದೆ. ಇನ್ನು ಮುಂದೆ ಈ ಬಸ್ ನಿಲ್ದಾಣವನ್ನು ಜನೋಪಕಾರಿ ದೊಡ್ಡಣ್ಣಶೆಟ್ಟರ ಕಲಾಸಿಪಾಳ್ಯ ಬಸ್ ನಿಲ್ದಾಣ ಕರೆಯಲಾಗುತ್ತದೆ.

ಬಿಎಂಟಿಸಿ ಮಂಡಳಿ ಸಭೆಯಲ್ಲಿ ಅನುಮೋದನೆ ಮತ್ತು ಸರ್ಕಾರಿ ಆದೇಶದ ನಂತರ ದೊಡ್ಡಣ್ಣಶೆಟ್ಟರ ಕೊಡುಗೆಗಳನ್ನು ಗುರುತಿಸಿ ಬಸ್ ನಿಲ್ದಾಣಕ್ಕೆ ಇವರ ಹೆಸರನ್ನು ಇಡಲಾಗಿದೆ ಎಂದು ತಿಳಿದುಬಂದಿದೆ.

ತಮ್ಮ ಟ್ರಸ್ಟ್ ಮೂಲಕ, ದೊಡ್ಡಣ್ಣಶೆಟ್ಟರು ಜಾತಿ ಅಥವಾ ಸಾಮಾಜಿಕ ಸ್ಥಾನಮಾನವನ್ನು ಲೆಕ್ಕಿಸದೆ ಎಲ್ಲರಿಗೂ ಶಿಕ್ಷಣವನ್ನು ಒದಗಿಸಿದ್ದರು. ಶಾಲೆಗಳು ಮತ್ತು ಕಾಲೇಜುಗಳನ್ನು ಸ್ಥಾಪಿಸಿದರು, ಸಾಮಾಜಿಕ ಸೇವೆಗೆ ತಮ್ಮನ್ನು ಅರ್ಪಿಸಿಕೊಂಡರು. ಸಮಾಜಕ್ಕೆ ಅವರ ಕೊಡುಗೆಗಳನ್ನು ಗುರುತಿಸಿ, ಅವರಿಗೆ "ಜನೋಪಕಾರಿ" ಎಂಬ ಬಿರುದನ್ನು ನೀಡಿ ಗೌರವಿಸಲಾಗಿದೆ.

ದೊಡ್ಡಣ್ಣಶೆಟ್ಟರು ಕಲಾಸಿಪಾಳ್ಯ ಬಸ್ ನಿಲ್ದಾಣದ ನಿರ್ಮಾಣಕ್ಕೆ ತಮ್ಮ ಜಮೀನನ್ನು ದಾನ ಮಾಡಿದ್ದವರು. ಅವರ ಈ ದಾನಧರ್ಮದ ಕಾರ್ಯವು ಬೆಂಗಳೂರಿನ ಸಾರಿಗೆ ವ್ಯವಸ್ಥೆಯ ಒಂದು ಪ್ರಮುಖ ಕೊಂಡಿಯಾದ ಕಲಾಸಿಪಾಳ್ಯ ಬಸ್ ನಿಲ್ದಾಣದ ಅಸ್ತಿತ್ವಕ್ಕೆ ಕಾರಣವಾಯಿತು. ಈ ನಿಲ್ದಾಣವು ದಕ್ಷಿಣ ಕರ್ನಾಟಕ, ತಮಿಳುನಾಡು, ಆಂಧ್ರಪ್ರದೇಶ, ಮತ್ತು ಕೇರಳದಂತಹ ರಾಜ್ಯಗಳಿಗೆ ಸಂಪರ್ಕ ಕಲ್ಪಿಸುವ ಪ್ರಮುಖ ಕೇಂದ್ರವಾಗಿದೆ.

ದೊಡ್ಡಣ್ಣಶೆಟ್ಟರ ಈ ಕೊಡುಗೆಯನ್ನು ಸ್ಮರಿಸುವ ಸಲುವಾಗಿ, ಕರ್ನಾಟಕ ಸರ್ಕಾರವು ಈ ಬಸ್ ನಿಲ್ದಾಣಕ್ಕೆ ಅವರ ಹೆಸರನ್ನು ನಾಮಕರಣ ಮಾಡುವ ಮೂಲಕ ಗೌರವ ಸಲ್ಲಿಸಿದೆ.

ದೊಡ್ಡಣ್ಣಶೆಟ್ಟರ ಸಮಾಜ ಸೇವೆಯ ಮನೋಭಾವವು ಇಂದಿಗೂ ನಮಗೆ ಸ್ಫೂರ್ತಿಯಾಗಿದೆ. ಅವರ ಜಮೀನು ದಾನದಿಂದಾಗಿ ಲಕ್ಷಾಂತರ ಪ್ರಯಾಣಿಕರಿಗೆ ಸೌಲಭ್ಯವುಳ್ಳ ಬಸ್ ನಿಲ್ದಾಣವೊಂದು ಸಾಧ್ಯವಾಯಿತು. ಈ ನಾಮಕರಣವು ಅವರಿಗೆ ಸರಿಯಾದ ಗೌರವವನ್ನು ಸೂಚಿಸುತ್ತದೆ ಎಂದು ರಾಮಲಿಂಗಾ ರೆಡ್ಡಿಯವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇರಾನ್‌ ಸರ್ಕಾರ ವಿರುದ್ಧ ಪ್ರತಿಭಟನೆ: ಹಿಂಸಾಚಾರದಲ್ಲಿ ಮೃತಪಟ್ಟವರ ಸಂಖ್ಯೆ 116 ಕ್ಕೆ ಏರಿಕೆ

ಕೇಂದ್ರ ಬಜೆಟ್ 2026-27: ರಾಜ್ಯದ ಹಣಕಾಸು ಸಮತೋಲನ ಪುನಃಸ್ಥಾಪಿಸಲು ಹೆಚ್ಚಿನ ಅನುದಾನ ಒದಗಿಸಿ; ಕೇಂದ್ರಕ್ಕೆ ರಾಜ್ಯ ಸರ್ಕಾರ ಆಗ್ರಹ

Grok ಅಶ್ಲೀಲ ಕಂಟೆಂಟ್ ವಿವಾದ: ಕೇಂದ್ರ ಸರ್ಕಾರಕ್ಕೆ ಕೊನೆಗೂ ಮಣಿದ X, 600 ಖಾತೆಗಳ ಡಿಲೀಟ್!

ನೋಂದಣಿ ಇಲ್ಲದೆ 'stock tips': ‘Finfluencers’ಗಳ ಸುಮಾರು 1 ಲಕ್ಷ ವಿಡಿಯೋ ಡಿಲೀಟ್​ ಮಾಡಿದ SEBI

ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಿಂದ ರಿಷಭ್ ಪಂತ್ ಔಟ್; ಭಾರತ ತಂಡ ಸೇರಿದ 24 ವರ್ಷದ ಆಟಗಾರ!

SCROLL FOR NEXT