ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ 25 ಬೃಹತ್ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮಂಜೂರಾತಿ! ರಾಜ್ಯ ಸರ್ಕಾರದ ಇಚ್ಚಾಶಕ್ತಿ ಪ್ರಶ್ನಿಸಿದ ಬಿಜೆಪಿ

ಬರೋಬ್ಬರಿ 42,517 ಕೋಟಿ ರೂಪಾಯಿ ವೆಚ್ಚದ 3264 ಕಿ.ಮೀ. ಉದ್ದದ 25 ಬೃಹತ್ ರೈಲ್ವೆ ಯೋಜನೆಗಳಿಗೆ ಪಿಎಂ ಮೋದಿ ಅವರ ಸರ್ಕಾರ ಮಂಜೂರಾತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ರೈಲ್ವೆ ಸಮಗ್ರ ಅಭಿವೃದ್ಧಿಗೆ ಹೊಸ ವೇಗ ನೀಡುವುದಕ್ಕೆ ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕರುನಾಡಲ್ಲಿ ರೈಲ್ವೆ ಸಂಪರ್ಕ ಜಾಲವನ್ನು ಮತ್ತಷ್ಟು ಹೆಚ್ಚಿಸುವ ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ.

ಬರೋಬ್ಬರಿ 42,517 ಕೋಟಿ ರೂಪಾಯಿ ವೆಚ್ಚದ 3264 ಕಿ.ಮೀ. ಉದ್ದದ 25 ಬೃಹತ್ ರೈಲ್ವೆ ಯೋಜನೆಗಳಿಗೆ ಪಿಎಂ ಮೋದಿ ಅವರ ಸರ್ಕಾರ ಮಂಜೂರಾತಿ ನೀಡಿದೆ.

ಬೃಹತ್‌ ಯೋಜನೆಗಳ ಮೂಲಕ ರಾಜ್ಯದ ಮೂಲೆ ಮೂಲೆಗೂ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಕನಸು ನನಸಾಗಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದರೂ ಅಭಿವೃದ್ಧಿ ಶೂನ್ಯ ರಾಜ್ಯ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ, ಹೆಜ್ಜಾಲ-ಚಾಮರಾಜನಗರ ಹೊಸಮಾರ್ಗ ಯೋಜನೆಗೆ ಕೇಂದ್ರ ಅನುಮೋದನೆ ನೀಡಿದೆ. ಆದರೆ, ಸಿಎಂ ಸಿದ್ದರಾಮಯ್ಯ ನವರ ಸರ್ಕಾರ ಮಾತ್ರ ಒಪ್ಪಿಗೆ ಕೊಡುತ್ತಿಲ್ಲ. ಹಾಗೇ ಮೈಸೂರು– ಕುಶಾಲನಗರ, ಬೆಂಗಳೂರು– ಸತ್ಯಮಂಗಲ ರೈಲು ಯೋಜನೆಗಳಿಗೂ ರೆಡ್‌ ಸಿಗ್ನಲ್‌ ನೀಡಿದೆ ಕಾಂಗ್ರೆಸ್. ರಾಜ್ಯದ ಪಾಲಿನ ಹಣಕಾಸು, ಭೂಮಿ ನೀಡದ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ರೈಲ್ವೆ ಕನಸಿಗೆ ಮಣ್ಣೆರಚಿದೆ ಎಂದು ಟೀಕಿಸಿದೆ.

ಕೇಂದ್ರದ ಅನುದಾನದ ವಿಷಯದಲ್ಲಿ ಸದಾ ಕೊಂಕು ಮಾತನಾಡುವ ಸಿಎಂ ಸಿದ್ದರಾಮಯ್ಯನವರೇ, ಮೋದಿ ಅವರ ಸರ್ಕಾರ ಮಂಜೂರು ಮಾಡಿರುವ 25 ರೈಲ್ವೆ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಇಚ್ಛಾಶಕ್ತಿ ಇದೆಯಾ.? ಅಥವಾ ಭೂಮಿ, ರಾಜ್ಯದ ಪಾಲಿನ ಹಣ ಒದಗಿಸಲಾಗದೆ ಕನ್ನಡಿಗರ ರೈಲ್ವೆ ಕನಸಿಗೆ ಕೊಳ್ಳಿಯಿಡುವ ಸಂಚು ಮನಸ್ಸಿನಲ್ಲಿ ಸಿದ್ಧವಾಗಿದೆಯಾ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT