ಸಿಎಂ ಸಿದ್ದರಾಮಯ್ಯ ಸಾಂದರ್ಭಿಕ ಚಿತ್ರ 
ರಾಜ್ಯ

ಕರ್ನಾಟಕದಲ್ಲಿ 25 ಬೃಹತ್ ರೈಲ್ವೆ ಯೋಜನೆಗಳಿಗೆ ಕೇಂದ್ರ ಸರ್ಕಾರದ ಮಂಜೂರಾತಿ! ರಾಜ್ಯ ಸರ್ಕಾರದ ಇಚ್ಚಾಶಕ್ತಿ ಪ್ರಶ್ನಿಸಿದ ಬಿಜೆಪಿ

ಬರೋಬ್ಬರಿ 42,517 ಕೋಟಿ ರೂಪಾಯಿ ವೆಚ್ಚದ 3264 ಕಿ.ಮೀ. ಉದ್ದದ 25 ಬೃಹತ್ ರೈಲ್ವೆ ಯೋಜನೆಗಳಿಗೆ ಪಿಎಂ ಮೋದಿ ಅವರ ಸರ್ಕಾರ ಮಂಜೂರಾತಿ ನೀಡಿದೆ.

ಬೆಂಗಳೂರು: ರಾಜ್ಯದಲ್ಲಿ ರೈಲ್ವೆ ಸಮಗ್ರ ಅಭಿವೃದ್ಧಿಗೆ ಹೊಸ ವೇಗ ನೀಡುವುದಕ್ಕೆ ನಿರ್ಧರಿಸಿರುವ ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಸರ್ಕಾರ, ಕರುನಾಡಲ್ಲಿ ರೈಲ್ವೆ ಸಂಪರ್ಕ ಜಾಲವನ್ನು ಮತ್ತಷ್ಟು ಹೆಚ್ಚಿಸುವ ಯೋಜನೆಗಳಿಗೆ ಹಸಿರು ನಿಶಾನೆ ತೋರಿದೆ.

ಬರೋಬ್ಬರಿ 42,517 ಕೋಟಿ ರೂಪಾಯಿ ವೆಚ್ಚದ 3264 ಕಿ.ಮೀ. ಉದ್ದದ 25 ಬೃಹತ್ ರೈಲ್ವೆ ಯೋಜನೆಗಳಿಗೆ ಪಿಎಂ ಮೋದಿ ಅವರ ಸರ್ಕಾರ ಮಂಜೂರಾತಿ ನೀಡಿದೆ.

ಬೃಹತ್‌ ಯೋಜನೆಗಳ ಮೂಲಕ ರಾಜ್ಯದ ಮೂಲೆ ಮೂಲೆಗೂ ರೈಲು ಸಂಪರ್ಕ ಕಲ್ಪಿಸುವ ದಶಕಗಳ ಕನಸು ನನಸಾಗಿಸುವ ಕಾರ್ಯಕ್ಕೆ ಕೇಂದ್ರ ಸರ್ಕಾರ ಮುಂದಾಗಿದ್ದರೂ ಅಭಿವೃದ್ಧಿ ಶೂನ್ಯ ರಾಜ್ಯ ಸರ್ಕಾರ ಮಾತ್ರ ಸ್ಪಂದಿಸುತ್ತಿಲ್ಲ ಎಂದು ರಾಜ್ಯ ಬಿಜೆಪಿ ಆರೋಪಿಸಿದೆ.

ಈ ಸಂಬಂಧ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಮಾಹಿತಿ ಹಂಚಿಕೊಂಡಿರುವ ಬಿಜೆಪಿ, ಹೆಜ್ಜಾಲ-ಚಾಮರಾಜನಗರ ಹೊಸಮಾರ್ಗ ಯೋಜನೆಗೆ ಕೇಂದ್ರ ಅನುಮೋದನೆ ನೀಡಿದೆ. ಆದರೆ, ಸಿಎಂ ಸಿದ್ದರಾಮಯ್ಯ ನವರ ಸರ್ಕಾರ ಮಾತ್ರ ಒಪ್ಪಿಗೆ ಕೊಡುತ್ತಿಲ್ಲ. ಹಾಗೇ ಮೈಸೂರು– ಕುಶಾಲನಗರ, ಬೆಂಗಳೂರು– ಸತ್ಯಮಂಗಲ ರೈಲು ಯೋಜನೆಗಳಿಗೂ ರೆಡ್‌ ಸಿಗ್ನಲ್‌ ನೀಡಿದೆ ಕಾಂಗ್ರೆಸ್. ರಾಜ್ಯದ ಪಾಲಿನ ಹಣಕಾಸು, ಭೂಮಿ ನೀಡದ ಕಾಂಗ್ರೆಸ್‌ ಸರ್ಕಾರ ಕನ್ನಡಿಗರ ರೈಲ್ವೆ ಕನಸಿಗೆ ಮಣ್ಣೆರಚಿದೆ ಎಂದು ಟೀಕಿಸಿದೆ.

ಕೇಂದ್ರದ ಅನುದಾನದ ವಿಷಯದಲ್ಲಿ ಸದಾ ಕೊಂಕು ಮಾತನಾಡುವ ಸಿಎಂ ಸಿದ್ದರಾಮಯ್ಯನವರೇ, ಮೋದಿ ಅವರ ಸರ್ಕಾರ ಮಂಜೂರು ಮಾಡಿರುವ 25 ರೈಲ್ವೆ ಯೋಜನೆಗಳನ್ನು ಪೂರ್ಣ ಪ್ರಮಾಣದಲ್ಲಿ ಬಳಸಿಕೊಳ್ಳುವ ಇಚ್ಛಾಶಕ್ತಿ ಇದೆಯಾ.? ಅಥವಾ ಭೂಮಿ, ರಾಜ್ಯದ ಪಾಲಿನ ಹಣ ಒದಗಿಸಲಾಗದೆ ಕನ್ನಡಿಗರ ರೈಲ್ವೆ ಕನಸಿಗೆ ಕೊಳ್ಳಿಯಿಡುವ ಸಂಚು ಮನಸ್ಸಿನಲ್ಲಿ ಸಿದ್ಧವಾಗಿದೆಯಾ? ಎಂದು ಪ್ರಶ್ನಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಇತಿಹಾಸ ಕಲಿಯಬೇಕಿದ್ದರೆ ಕಾಲೇಜಿಗೆ ಹೋಗುತ್ತಾರೆ, ನಿಮ್ಮ ಬೋಧನೆಯ ಅಗತ್ಯವಿಲ್ಲ: ಪ್ರಧಾನಿ ಮೋದಿ ವಿರುದ್ಧ ಪ್ರಿಯಾಂಕ್ ಖರ್ಗೆ ವಾಗ್ದಾಳಿ

MGNREGA Row: ಯಾವಾಗ-ಎಲ್ಲಿ ಬೇಕಾದರೂ ಚರ್ಚೆಗೆ ಸಿದ್ಧ, ಡೈಲಾಗ್‌ ವೀರ HDK ಬಂದರೆ ಒಳ್ಳೆಯದು; ಡಿ.ಕೆ.ಶಿವಕುಮಾರ್

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

SCROLL FOR NEXT