ನೀಲಿಕುರುಂಜಿ ಹೂಗಳು 
ರಾಜ್ಯ

ಮುಳ್ಳಯನಗಿರಿ ಸೌಂದರ್ಯ ಹೆಚ್ಚಿಸಿದ ನೀಲಿಕುರವಂಜಿ: ಸಂರಕ್ಷಣಾ ಮೀಸಲು ಪ್ರದೇಶ ಘೊಷಣೆಗೆ ಆಗ್ರಹ

ಮುಳ್ಳಯ್ಯನಗಿರಿಯಲ್ಲಿ ಅರಳುವ ಹೂವುಗಳು ನೀಲಗಿರಿ ಪರ್ವತಗಳಾದ ಸ್ಟ್ರೋಬಿಲಾಂಥೆಸ್ ಕುಂಥಿಯಾನಾದಲ್ಲಿ ಕಂಡುಬರುವ ಹೂವುಗಳಿಗಿಂತ ಭಿನ್ನವಾಗಿದೆ. ಇಲ್ಲಿಯವರೆಗೆ ಸುಮಾರು 32 ನೀಲಕುರಿಂಜಿ ಪ್ರಭೇದಗಳನ್ನು ಕಂಡುಹಿಡಿಯಲಾಗಿದೆ.

ಬೆಂಗಳೂರು: ನೀಲಿಕುರುಂಜಿ ಹೂಗಳು ಚಿಕ್ಕಮಗಳೂರಿನ ಮುಳ್ಳಯ್ಯನಗಿರಿಯ ಸೌಂದರ್ಯವನ್ನು ಮತ್ತಷ್ಟು ಹೆಚ್ಚಿಸಿದ್ದು, ಈ ಪ್ರದೇಶವನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸುವಂತೆ ಕರ್ನಾಟಕ ಅರಣ್ಯ ಇಲಾಖೆಯು ಕಂದಾಯ ಇಲಾಖೆಯನ್ನು ಒತ್ತಾಯಿಸಿದೆ.

ಮುಲ್ಲಯನಗಿರಿಯಲ್ಲಿ ನೀಲಕುರಿಂಜಿ ಹೂಗಳು ಅರಳುವ ಪ್ರದೇಶ 2020 ರಲ್ಲಿ 16,000 ಎಕರೆಗಳಷ್ಟಿತ್ತು. ಈ ನಡುವೆ ರಾಜ್ಯ ವನ್ಯಜೀವಿ ಮಂಡಳಿಯ ಸಭೆಯಲ್ಲಿ ಸಂರಕ್ಷಣಾ ಮೀಸಲು ಪ್ರದೇಶ ಘೊಷಿಸುವ ಪ್ರಸ್ತಾವನೆ ಮುಂದಿಟ್ಟಾಗ ಮರು ಪರಿಶೀಲನೆ ಕುರಿತು ನಿರ್ಧಾರ ಕೈಗೊಳ್ಳಲಾಗಿತ್ತು. ಪರಿಶೀಲನೆ ವೇಳೆ ಈ ಪ್ರದೇಶವನ್ನು 9,000 ಎಕರೆಗಳಿಗೆ ಇಳಿಸಲಾಗಿತ್ತು ಎಂದು ಇಲಾಖೆಯ ಮೂಲಗಳು ತಿಳಿಸಿವೆ.

ಮುಳ್ಳಯ್ಯನಗಿರಿಯಲ್ಲಿ ಅರಳುವ ಹೂವುಗಳು ನೀಲಗಿರಿ ಪರ್ವತಗಳಾದ ಸ್ಟ್ರೋಬಿಲಾಂಥೆಸ್ ಕುಂಥಿಯಾನಾದಲ್ಲಿ ಕಂಡುಬರುವ ಹೂವುಗಳಿಗಿಂತ ಭಿನ್ನವಾಗಿದೆ. ಇಲ್ಲಿಯವರೆಗೆ ಸುಮಾರು 32 ನೀಲಕುರಿಂಜಿ ಪ್ರಭೇದಗಳನ್ನು ಕಂಡುಹಿಡಿಯಲಾಗಿದೆ ಎಂದು ಭಾರತೀಯ ಸಸ್ಯ ಸಮೀಕ್ಷೆಯ (ಬಿಎಸ್‌ಐ) ತಜ್ಞರು ಹೇಳಿದ್ದಾರೆ.

12 ವರ್ಷಗಳಿಗೊಮ್ಮೆ ಈ ಹೂವುಗಳು ಅರಳಲಿದ್ದು, ಇವುಗಳನ್ನು ಪತ್ತೆ ಮಾಡುವುದು ಕಷ್ಟ. ಎತ್ತರದ ಪ್ರದೇಶಗಳಲ್ಲಿ ಕಂಡುಬರುತ್ತಿದ್ದ ಈ ಹೂವುಗಳು ಇದೀಗ ತಪ್ಪಲಿನಲ್ಲಿ ಮತ್ತು ಇತರ ಅರಣ್ಯ ಪ್ರದೇಶಗಳಲ್ಲಿ ಕಂಡುಬರುತ್ತಿರುವುದು ಆಸಕ್ತಿದಾಯಕವಾಗಿದೆ ಎಂದು ದಕ್ಷಿಣ ಪ್ರಾದೇಶಿಕ ಕೇಂದ್ರದ ಬಿಎಸ್‌ಐ ಕಚೇರಿಯ ಮುಖ್ಯಸ್ಥ ಮತ್ತು ಹಿರಿಯ ವಿಜ್ಞಾನಿ ಡಾ. ಸಹೀದ್ ಎಸ್ ಹಮೀದ್ ಹೇಳಿದ್ದಾರೆ.

ರಾಜ್ಯ ವನ್ಯಜೀವಿ ಮಂಡಳಿಯ ಸ್ಥಾಯಿ ಸಮಿತಿಯು ಈ ಪ್ರದೇಶವನ್ನು ಸಂರಕ್ಷಣಾ ಮೀಸಲು ಪ್ರದೇಶವೆಂದು ಘೋಷಿಸುವ ಕಲ್ಪನೆಯನ್ನು ಅನುಮೋದಿಸಿದ ನಂತರ, ಎರಡು ತಿಂಗಳ ಹಿಂದೆ ಕಂದಾಯ ಇಲಾಖೆಗೆ ಪ್ರಸ್ತಾವನೆಯನ್ನು ಕಳುಹಿಸಲಾಗಿದೆ ಎಂದು ವನ್ಯಜೀವಿಗಳ ಪ್ರಧಾನ ಮುಖ್ಯ ಅರಣ್ಯ ಸಂರಕ್ಷಣಾಧಿಕಾರಿ ಪಿಸಿ ರೈ ಹೇಳಿದ್ದಾರೆ.

ಜಿಲ್ಲಾಡಳಿತದಿಂದ ಭೂ ವರದಿಯನ್ನು ಕೋರಲಾಗಿದ್ದು, ಮರು ಸಮೀಕ್ಷೆ ನಡೆಸಲಾಗುತ್ತಿದೆ ಎಂದು ಕಂದಾಯ ಇಲಾಖೆಯ ಪ್ರಧಾನ ಕಾರ್ಯದರ್ಶಿ ರಾಜೇಂದ್ರ ಕಟಾರಿಯಾ ಅವರು ತಿಳಿಸಿದ್ದಾರೆ.

ಗುರುತಿಸಲಾದ ಹಲವು ಪ್ರದೇಶಗಳು ಇನಾಮ್ ಭೂಮಿಗಳಾಗಿವೆ, ಮಾರಾಟ, ಅಭಿವೃದ್ಧಿ ಅಥವಾ ಖಾಸಗಿ ಭೂಮಿಗಳಾಗಿವೆ. ಅಭಿವೃದ್ಧಿ ಹೊಂದಿದ ಅರಣ್ಯ ಭೂಮಿಯನ್ನು ಗುರುತಿಸಲು, ಸಂರಕ್ಷಣಾ ಮೀಸಲು ಪ್ರದೇಶವಾಗಿ ಘೋಷಿಸುವ ಕುರಿತು ಸಮೀಕ್ಷೆ ನಡೆಯುತ್ತಿದೆ ಎಂದು ಮೂಲಗಳು ತಿಳಿಸಿವೆ.

ನೀಲಕುರಿಂಜಿ ಪ್ರಭೇದಗಳನ್ನು ರಕ್ಷಿಸುವ ಮತ್ತು ಅಂತರರಾಷ್ಟ್ರೀಯ ಪ್ರಕೃತಿ ಸಂರಕ್ಷಣಾ ಒಕ್ಕೂಟ (IUCN) ನಿಂದ ಅವುಗಳನ್ನು ರಕ್ಷಿಸಲಾಗಿದೆ ಎಂದು ಘೋಷಿಸುವ ಕುರಿತು ಚೆನ್ನೈನ ರಾಷ್ಟ್ರೀಯ ಹಸಿರು ನ್ಯಾಯಮಂಡಳಿ ಸ್ವಯಂಪ್ರೇರಿತ ವಿಚಾರಣೆ ಕೈಗೆತ್ತಿಕೊಂಡಿದ್ದು, ಇದರ ಮೇಲೆ ಅರಣ್ಯ ಇಲಾಖೆ ಭರವಸೆ ಇಟ್ಟಿದೆ. ಎಲ್ಲಾ ನೀಲಕುರಿಂಜಿ ಪ್ರಭೇದಗಳನ್ನು IUCN ಎಂದು ಘೋಷಿಸಿದರೆ, ನೀಲಗಿರಿ ಮಾತ್ರವಲ್ಲ, ಪಶ್ಚಿಮ ಘಟ್ಟಗಳ ಎಲ್ಲಾ ಭಾಗಗಳನ್ನು ಕೂಡ ರಕ್ಷಿಸಲಾಗುತ್ತದೆ ಎಂದು ಅರಣ್ಯ ಅಧಿಕಾರಿಗಳು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT