ಕರ್ನಾಟಕದಲ್ಲಿ ಮಳೆ (ಸಾಂದರ್ಭಿಕ ಚಿತ್ರ) 
ರಾಜ್ಯ

Weather Forecast: ಜುಲೈ 31ರವರೆಗೂ ಭಾರಿ ಮಳೆ; ಕರಾವಳಿ, ಮಲೆನಾಡಿನಲ್ಲಿ ಯೆಲ್ಲೋ, ಆರೆಂಜ್ ಅಲರ್ಟ್ ಘೋಷಣೆ

ರಾಜ್ಯಾದ್ಯಂತ ಮಳೆಯಾರ್ಭಟ ಮುಂದುವರೆದಿದ್ದು, ಇನ್ನೂ 5 ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಮುಖ್ಯವಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ.

ಬೆಂಗಳೂರು: ರಾಜ್ಯಾದ್ಯಂತ ಅಬ್ಬರಿಸುತ್ತಿರುವ ಮಳೆ ಆರ್ಭಟ ತಿಂಗಳಾಂತ್ಯದವರೆಗೂ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಭಾನುವಾರ ಮಾಹಿತಿ ನೀಡಿದೆ.

ರಾಜ್ಯಾದ್ಯಂತ ಮಳೆಯಾರ್ಭಟ ಮುಂದುವರೆದಿದ್ದು, ಇನ್ನೂ 5 ದಿನ ರಾಜ್ಯದಲ್ಲಿ ಮಳೆ ಮುಂದುವರೆಯಲಿದೆ. ಮುಖ್ಯವಾಗಿ ಕರಾವಳಿ, ಮಲೆನಾಡು ಭಾಗದಲ್ಲಿ ಭಾರಿ ಮಳೆಯಾಗುತ್ತಿದ್ದು ಜನಜೀವನ ಅಸ್ತವ್ಯಸ್ಥವಾಗಿದೆ. ಕೊಡಗು, ಚಿಕ್ಕಮಗಳೂರು, ಉಡುಪಿ , ಉತ್ತರ ಕನ್ನಡ ಜಿಲ್ಲೆಗಳಲ್ಲಿ ವರುಣ ಅಬ್ಬರಿಸುತ್ತಿದ್ದು, ಜುಲೈ 31ರ ವರೆಗೂ ಕರ್ನಾಟಕದಲ್ಲಿ (Karnataka )ಮುಂದುವರಿಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.

ಕರಾವಳಿ ಜಿಲ್ಲೆಗಳಿಗೆ ಆರೆಂಜ್ ಅಲರ್ಟ್ ಘೋಷಿಸಲಾಗಿದ್ದು, ಮಲೆನಾಡು ಜಿಲ್ಲೆಗಳಲ್ಲೂ ಮಳೆ ಹೆಚ್ಚಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಉಳಿದಂತೆ ಕರಾವಳಿ ಜಿಲ್ಲೆಗಳಿಗೆ ಮುಂದಿನ 2 ದಿನವೂ ಆರೆಂಜ್ ಅಲರ್ಟ್ ಇದ್ದು, ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಕೊಡಲಾಗಿದೆ. ಮಲೆನಾಡು ಜಿಲ್ಲೆಗಳಿಗೂ ಮಳೆ ಆರ್ಭಟ ಇರಲಿದೆ ಎಂದು ಮುನ್ಸೂಚನೆ ನೀಡಲಾಗಿದೆ.

ಶಿವಮೊಗ್ಗ, ಚಿಕ್ಕಮಗಳೂರು , ಹಾಸನ ಹಾಗೂ ಕೊಡಗು ಜಿಲ್ಲೆಗಳಿಗೂ ಜುಲೈ 30 ರವರೆಗೆ ಭಾರೀ ಮಳೆಯ ಮುನ್ನೆಚ್ಚರಿಕೆ ಕೊಡಲಾಗಿದೆ. ಸೋಮವಾರದವರೆಗೆ ರಾಜ್ಯದ ಇತರ ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಕೊಡಲಾಗಿದ್ದು, ನಂತರ ಮಳೆ ಪ್ರಮಾಣದಲ್ಲಿ ಇಳಿಕೆ ಆಗಲಿದೆ. ದಕ್ಷಿಣ ಕನ್ನಡ , ಉತ್ತರಕನ್ನಡ ಹಾಗೂ ಉಡುಪಿ ಜಿಲ್ಲೆಗಳಿಗೆ ಜುಲೈ 29 ರವರೆಗೆ ಆರೆಂಜ್ ಅಲರ್ಟ್ ಘೋಷಿಸಿದ್ದು, ಜುಲೈ 30 ಹಾಗೂ ಜುಲೈ 31 ರವರೆಗೆ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರಿನಲ್ಲೂ ಮಳೆ ಮುಂದುವರಿಕೆ

ಅಂತೆಯೇ ರಾಜಧಾನಿ ಬೆಂಗಳೂರಿನಲ್ಲಿ ಮೋಡ ಕವಿದ ವಾತಾವರಣ ಮುಂದುವರೆದಿದ್ದು, ಹವಾಮಾನ ತಂಪಾಗಿದೆ. ವಾರಾಂತ್ಯ ಮತ್ತು ಮುಂದಿನ ವಾರದವರೆಗೂ ಇದೇ ಪ್ರವೃತ್ತಿ ಮುಂದುವರಿಯುವ ಸಾಧ್ಯತೆ ಇದೆ. ಬೆಂಗಳೂರಿನಲ್ಲಿ ಬೆಳಗಿನ ತಾಪಮಾನ 22°C ಆಗಿದ್ದು, 78% ಆರ್ದ್ರತೆ ದಾಖಲಾಗಿದೆ. ಪಶ್ಚಿಮ-ನೈಋತ್ಯ ದಿಕ್ಕಿನಿಂದ ಗಂಟೆಗೆ 17 mph ವೇಗದಲ್ಲಿ ಗಾಳಿ ಬೀಸುತ್ತಿದ್ದು, ಮೋಡ ಕವಿದ ವಾತಾವರಣ 100% ರಷ್ಟಿದ್ದು, ನಗರವು ಮೋಡ ಕವಿದ ವಾತಾವರಣದಲ್ಲಿದೆ.

ಭಾರತೀಯ ಹವಾಮಾನ ಇಲಾಖೆ (IMD) ಪ್ರಕಾರ, ಬೆಂಗಳೂರು ನಗರ ಮತ್ತು ಗ್ರಾಮೀಣ ಜಿಲ್ಲೆಗಳ ನಿವಾಸಿಗಳು ಮುಂದಿನ ಕೆಲವು ದಿನಗಳಲ್ಲಿ ಗಂಟೆಗೆ 30-40 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಮೂಲಕ ಹಗುರದಿಂದ ಮಧ್ಯಮ ಮಳೆಯನ್ನು ನಿರೀಕ್ಷಿಸಬಹುದು. ಹಗಲಿನ ಗರಿಷ್ಠ ತಾಪಮಾನವು 24 ರಿಂದ 26°C ವರೆಗೆ ಉಳಿಯುವ ಸಾಧ್ಯತೆಯಿದೆ, ಆದರೆ ರಾತ್ರಿಯ ತಾಪಮಾನವು 20°C ರಷ್ಟಿರಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT