ಆರ್. ಅಶೋಕ್  
ರಾಜ್ಯ

'ಗ್ಯಾರಂಟಿ' ಗಳಿಗಾಗಿ ಪರಿಶಿಷ್ಟರ 11.8 ಸಾವಿರ ಕೋಟಿ ರೂ ಅನುದಾನ ದೋಚಲು ಕಾಂಗ್ರೆಸ್ ಮುಂದು: ಅಶೋಕ್

ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ.

ಬೆಂಗಳೂರು: ಎಸ್‌ಸಿಎಸ್‌ಪಿ/ಟಿಎಸ್‌ಪಿ ಅನುದಾನವನ್ನು ಪಂಚ ಗ್ಯಾರಂಟಿಗಾಗಿ ಬಳಸುವ ಮೂಲಕ ಪರಿಶಿಷ್ಟರ ಹಣವನ್ನ ದೋಚಲು ರಾಜ್ಯ ಕಾಂಗ್ರೆಸ್ ಸರ್ಕಾರ ಮುಂದಾಗಿದೆ ಎಂದು ಆರ್.ಅಶೋಕ್ ಕಿಡಿಕಾರಿದ್ದಾರೆ.

ಈ ಕುರಿತು ಎಕ್ಸ್‌ನಲ್ಲಿ ಹಂಚಿಕೊಂಡಿರುವ ಅವರು, ರಾಜ್ಯ ಕಾಂಗ್ರೆಸ್ ಸರ್ಕಾರ ಪರಿಶಿಷ್ಟರ 11.8 ಸಾವಿರ ಕೋಟಿ ರೂ. ಹಣವನ್ನು ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳಲು ಮುಂದಾಗಿದೆ. ಈ ಮೂಲಕ ಕಾಂಗ್ರೆಸ್‌ನವರು ಮತ್ತೊಮ್ಮೆ ಪರಿಶಿಷ್ಟ ಸಮುದಾಯಗಳಿಗೆ ದ್ರೋಹ ಬಗೆಯಲು ಹೊರಟಿದ್ದಾರೆ. ಇದು ದಲಿತ ವಿರೋಧಿ ಕಾಂಗ್ರೆಸ್ ಸರ್ಕಾರ ಎಂದು ಆಕ್ರೋಶ ಹೊರಹಾಕಿದರು.

ಸಿದ್ದರಾಮಯ್ಯನವರೇ, ಅನುದಾನ ಹಂಚಿಕೆ ಮಾಡಲು ಹಣವಿಲ್ಲದ ಮೇಲೆ ಬಜೆಟ್‌ನಲ್ಲಿ ಸುಮ್ಮನೆ ಕಾಟಾಚಾರಕ್ಕೆ ಘೋಷಣೆ ಮಾಡುತ್ತೀರಾ? ಬಜೆಟ್‌ನಲ್ಲಿ ಅವಾಸ್ತವಿಕ ಘೋಷಣೆಗಳನ್ನು ಮಾಡಿ, ಪರಿಶಿಷ್ಟರ ಮೂಗಿಗೆ ತುಪ್ಪ ಸವರಿದ್ದೀರಿ. ಈ ಮೂಲಕ ಬಿಟ್ಟಿ ಪ್ರಚಾರ ಪಡೆದುಕೊಂಡರೆ ಪರಿಶಿಷ್ಟ ಸಮುದಾಯಗಳ ಕಲ್ಯಾಣ ಆಗುತ್ತಾ? ಇದೇನಾ ತಮಗೆ ಪರಿಶಿಷ್ಟ ಸಮುದಾಯಗಳ ಬಗ್ಗೆ ಇರುವ ಬದ್ಧತೆ? ಇದೇನಾ ತಾವು ಭಾಷಣ ಬಿಗಿಯುವ ಸಾಮಾಜಿಕ ನ್ಯಾಯ? ಎಂದು ವಾಗ್ದಾಳಿ ನಡೆಸಿದ್ದಾರೆ.

ಒಂದು ಕಡೆ ಬಿಡುಗಡೆ ಮಾಡಿರುವ ಅಲ್ಪ ಸ್ವಲ್ಪ ಅನುದಾನವನ್ನು ಭ್ರಷ್ಟಾಚಾರಕ್ಕೆ ಮತ್ತೊಂದು ಕಡೆ ಘೋಷಣೆ ಮಾಡಿದ ಅನುದಾನವನ್ನ ಹಂಚಿಕೆ ಮಾಡದೆ ಬಾಕಿ ಉಳಿಸಿಕೊಳ್ಳುತ್ತೀರಿ. ನಿಮ್ಮ ಕಾಂಗ್ರೆಸ್ ಸರ್ಕಾರಕ್ಕೆ ನಾಚಿಕೆಯಾಗಬೇಕು. ತಮಗೆ ಕಿಂಚಿತ್ತಾದರೂ ಆತ್ಮಸಾಕ್ಷಿ ಎನ್ನುವುದು ಇದ್ದರೆ ಇನ್ನೆಂದೂ ಅಹಿಂದ ಹೆಸರಿನಲ್ಲಿ ರಾಜಕೀಯ ಮಾಡಬೇಡಿ ಎಂದು ಆಗ್ರಹಿಸಿದರು.

ಪರಿಶಿಷ್ಟ ಜಾತಿ ಉಪಯೋಜನೆ (ಎಸ್‌ಸಿಎಸ್‌ಪಿ) ಮತ್ತು ಟಿಎಸ್‌ಪಿ (ಬುಡಕಟ್ಟು ಉಪಯೋಜನೆ) ಅಡಿ ಪರಿಶಿಷ್ಟರ ಅಭಿವೃದ್ಧಿಗೆ ಪ್ರಸಕ್ತ ಸಾಲಿನಲ್ಲಿ (2025-26) ಒದಗಿಸಿದ ಒಟ್ಟು 42,017.51 ಕೋಟಿ ರೂ. ಅನುದಾನದಲ್ಲಿ 11,896.84 ಕೋಟಿ ರೂ.ಯನ್ನು ಪಂಚ `ಗ್ಯಾರಂಟಿ’ ಯೋಜನೆಗಳ ಅನುಷ್ಠಾನಕ್ಕೆ ಹಂಚಿಕೆ ಮಾಡಲು ರಾಜ್ಯ ಸರ್ಕಾರ ಮುಂದಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT