ಜೆಸಿಬಿ ಕಾರ್ಯಾಚರಣೆ 
ರಾಜ್ಯ

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.

ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿ ಗುರುತಿಸಿದ್ದ ಸಮಾಧಿ ಸ್ಥಳವನ್ನು ಅಗೆಯಲಾಗಿತ್ತು. ಆದರೆ ಮೊದಲ ಪ್ರಯತ್ನದಲ್ಲೇ ಎಸ್ಐಟಿ ತಂಡಕ್ಕೆ ಹಿನ್ನಡೆಯಾಗಿದೆ.

ಮೊದಲಿಗೆ ಕಾರ್ಮಿಕರ ಮೂಲಕ 4 ಅಡಿ ಅಗೆಯಲಾಗಿತ್ತು. ನಂತರ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಹೀಗಾಗಿ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ದೂರದಾರ ವ್ಯಕ್ತಿ 6 ಅಡಿಯಲ್ಲಿ ಶವ ಹೂತಿಟ್ಟಿರುವುದಾಗಿ ಹೇಳಿದ್ದನು. ಆದರೆ 6 ಅಡಿಯಲ್ಲೂ ಸಿಗದ ಕಾರಣ 8 ಅಡಿ ಅಗೆಯಲಾಗಿತ್ತು. ಹೀಗಾಗಿ ಸಮಾಧಿ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಇದೀಗ ದೂರುದಾರ ಗುರುತಿಸಿದ 2ನೇ ಸಮಾಧಿ ಸ್ಥಳ ಅಗೆಯುವ ಕಾರ್ಯ ನಾಳೆ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT