ಜೆಸಿಬಿ ಕಾರ್ಯಾಚರಣೆ 
ರಾಜ್ಯ

ಧರ್ಮಸ್ಥಳ ಪ್ರಕರಣ: 8 ಅಡಿ ಅಗೆದರೂ ಸಿಕ್ಕಿಲ್ಲ ಕಳೇಬರ; ಮೊದಲ ಸಮಾಧಿ ಕಾರ್ಯಾಚರಣೆ ಅಂತ್ಯ, ಬರಿಗೈಯಲ್ಲಿ SIT ವಾಪಸ್!

ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ.

ಧರ್ಮಸ್ಥಳ: ಧರ್ಮಸ್ಥಳ ರಹಸ್ಯ ಸಮಾಧಿ ಪ್ರಕರಣದ ತನಿಖೆ ನಿರ್ಣಾಯಕ ಹಂತ ತಲುಪಿದ್ದು, ಪ್ರಕರಣದ ಸಾಕ್ಷಿ-ದೂರುದಾರನಾಗಿರುವ ವ್ಯಕ್ತಿ ಶವಗಳನ್ನು ಹೂತಿದ್ದ 13 ಸ್ಥಳಗಳನ್ನು ಅಧಿಕಾರಿಗಳಿಗೆ ತೋರಿಸಿದ್ದನು. ಹೀಗಾಗಿ ಎಸ್ಐಟಿ ಅಧಿಕಾರಿಗಳು ಎಲ್ಲಾ ಕಾನೂನು ಪ್ರಕ್ರಿಯೆ ಮೂಲಕ ಸಮಾಧಿ ಅಗೆದಿದ್ದಾರೆ. ನೇತ್ರಾವತಿ ಸ್ನಾನಘಟ್ಟದ ಪಕ್ಕದಲ್ಲಿ ಗುರುತಿಸಿದ್ದ ಸಮಾಧಿ ಸ್ಥಳವನ್ನು ಅಗೆಯಲಾಗಿತ್ತು. ಆದರೆ ಮೊದಲ ಪ್ರಯತ್ನದಲ್ಲೇ ಎಸ್ಐಟಿ ತಂಡಕ್ಕೆ ಹಿನ್ನಡೆಯಾಗಿದೆ.

ಮೊದಲಿಗೆ ಕಾರ್ಮಿಕರ ಮೂಲಕ 4 ಅಡಿ ಅಗೆಯಲಾಗಿತ್ತು. ನಂತರ ಜೆಸಿಬಿ ಮೂಲಕ 8 ಅಡಿ ಅಗೆದರೂ ಯಾವುದೇ ಅಸ್ಥಿಪಂಜರ ಪತ್ತೆಯಾಗಿಲ್ಲ. ಹೀಗಾಗಿ ಮೊದಲ ಸಮಾಧಿ ಸ್ಥಳದ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ದೂರದಾರ ವ್ಯಕ್ತಿ 6 ಅಡಿಯಲ್ಲಿ ಶವ ಹೂತಿಟ್ಟಿರುವುದಾಗಿ ಹೇಳಿದ್ದನು. ಆದರೆ 6 ಅಡಿಯಲ್ಲೂ ಸಿಗದ ಕಾರಣ 8 ಅಡಿ ಅಗೆಯಲಾಗಿತ್ತು. ಹೀಗಾಗಿ ಸಮಾಧಿ ಕಾರ್ಯಾಚರಣೆ ಅಂತ್ಯಗೊಳಿಸಲಾಗಿದೆ. ಇದೀಗ ದೂರುದಾರ ಗುರುತಿಸಿದ 2ನೇ ಸಮಾಧಿ ಸ್ಥಳ ಅಗೆಯುವ ಕಾರ್ಯ ನಾಳೆ ಆರಂಭಗೊಳ್ಳಲಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

9 ದಿನಗಳಿಂದ ಉಪವಾಸ: ದೇವೇಂದ್ರ ಮಹ್ತೊ ಆಸ್ಪತ್ರೆಗೆ ದಾಖಲು; ಪೊಲೀಸರ ಲಾಠಿಚಾರ್ಚ್ ಖಂಡಿಸಿ ನಾಳೆ ಬಂದ್ ಗೆ BJP ಕರೆ!

ಶಾರುಖ್ ನಟನೆಯ 'ಕಭಿ ಅಲ್ವಿದಾ ನಾ ಕೆಹನಾ' ಚಿತ್ರ ಅಕ್ರಮ ಸಂಬಂಧ ಬೆಂಬಲಿಸಿಲ್ಲ: ಕರಣ್ ಜೋಹರ್ ಪೋಸ್ಟ್ ವೈರಲ್!

ಖಾತೆ ಹಂಚಿಕೆ ಕಸರತ್ತು: ವರಿಷ್ಠರಿಗೆ ಪಟ್ಟಿ ನೀಡಿ ಬೆಂಗಳೂರಿಗೆ CM ಡಿ.ಕೆ ಶಿವಕುಮಾರ್ ವಾಪಸ್; ಹೇಳಿದ್ದೇನು?

ನಾವು ಹಿಂಸಾಚಾರನ ಬೆಂಬಲಿಸಲ್ಲ; ವಿದ್ಯಾರ್ಥಿಗಳ ಮೇಲೆ ಲಾಠಿ ಚಾರ್ಜ್‌ ಸರಿಯಲ್ಲ: ಜಾರ್ಖಂಡ್ ನಡೆ ಖಂಡಿಸಿದ ರಾಹುಲ್!

ಕೊಲಂಬಿಯಾದಲ್ಲಿ 7.4 ತೀವ್ರತೆಯ ಪ್ರಬಲ ಭೂಕಂಪ: ಕನಿಷ್ಠ 47 ಮಂದಿ ಸಾವು, ಡಜನ್ಗಟ್ಟಲೆ ಕಟ್ಟಡಗಳು ಕುಸಿತ!