ಕಬಿನಿಯಲ್ಲಿ ನೀರಿನ ಮಟ್ಟ ಏರಿಕೆಯಾಗಿ ನಂಜನಗೂಡಿನ ಹದಿನಾರು ಕಾಲು ಮಂಟಪ ಮುಳುಗಡೆಯಾಗಿರುವುದು. 
ರಾಜ್ಯ

ಭಾರೀ ಮಳೆ: ವಿರಾಜಪೇಟೆ, ಕರಡಿಗೋಡುವಿನಲ್ಲಿ ನೆರವು ಕೇಂದ್ರ ತೆರೆದ ಅಧಿಕಾರಿಗಳು

ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವಾರು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಪರಿಣಾಮ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ.

ಮಡಿಕೇರಿ: ಕೊಡಗಿನ ಹಲವು ಭಾಗಗಳಲ್ಲಿ ಭಾರೀ ಮಳೆಯಾಗುತ್ತಿದ್ದು, ಮಡಿಕೇರಿಯಲ್ಲಿ ಚಳಿ ಹೆಚ್ಚಾಗಿದೆ. ಈ ಹಿನ್ನೆಲೆಯಲ್ಲಿ ವಿರಾಜಪೇಟೆ ಮತ್ತು ಕರಡಿಗೋಡು ಸೇರಿದಂತೆ ದುರ್ಬಲ ಪ್ರದೇಶಗಳಲ್ಲಿ ನೆರವು ಕೇಂದ್ರಗಳನ್ನು ತೆರೆಯಲಾಗಿದೆ.

ಕೊಡಗಿನಲ್ಲಿ ಬಿರುಗಾಳಿ ಸಹಿತ ಭಾರಿ ಮಳೆಯಾಗುತ್ತಿದ್ದು, ಹಲವಾರು ವಿದ್ಯುತ್ ಕಂಬಗಳು ಉರುಳಿಬಿದ್ದಿವೆ. ಪರಿಣಾಮ ಜಿಲ್ಲೆಯ ಗ್ರಾಮೀಣ ಪ್ರದೇಶಗಳಲ್ಲಿ ಕಳೆದ ನಾಲ್ಕು ದಿನಗಳಿಂದ ವಿದ್ಯುತ್ ಕಡಿತಗೊಂಡಿದೆ.

ಮಳೆಯ ಪರಿಣಾಮ ಸುರ್ಲಬ್ಬಿ ಸರ್ಕಾರಿ ಶಾಲೆಯ ಅಂಗಳದ ಛಾವಣಿಯ ಹೆಂಚು ಕುಸಿದುಬಿದ್ದಿದೆ. ಅದೇ ರೀತಿ, ಡಿ ಚೆನ್ನಮ್ಮ ಕಾಲೇಜು ಕಟ್ಟಡದ ಛಾವಣಿಯ ಮೇಲೆ ಮರ ಉರುಳಿಬಿದ್ದ ಪರಿಣಾಮ ಕಟ್ಟಡಕ್ಕೂ ಹಾನಿಯಾಗಿದೆ.

ಜಿಲ್ಲೆಯಾದ್ಯಂತ ಹಲವಾರು ಅಂಗನವಾಡಿಗಳು ದುರ್ಬಲ ಸ್ಥಿತಿಯಲ್ಲಿದ್ದು, ಪರಿಹಾರ ಕಾರ್ಯಗಳ ನಂತರವೇ ಅವುಗಳನ್ನು ತೆರೆಯುವ ಸಾಧ್ಯತೆಗಳಿವೆ ಎಂದು ಮೂಲಗಳು ತಿಳಿಸಿವೆ.

ವಿರಾಜಪೇಟೆ ತಾಲ್ಲೂಕಿನ ಹಲವಾರು ಪ್ರದೇಶಗಳಲ್ಲಿ ಪ್ರವಾಹ ಎಚ್ಚರಿಕೆ ಘೋಷಿಸಲಾಗಿದ್ದು, ಶಾಸಕ ಎ ಎಸ್ ಪೊನ್ನಣ್ಣ ಅವರು, ಸ್ಥಳೀಯ ನಿವಾಸಿಗಳು ಸುರಕ್ಷಿತ ಸ್ಥಳಗಳಿಗೆ ತೆರಳುವಂತೆ ವಿನಂತಿಸಿದ್ದಾರೆ. ವಿರಾಜಪೇಟೆಯಲ್ಲಿ ಪರಿಹಾರ ಕೇಂದ್ರವನ್ನು ತೆರೆಯಲಾಗಿದೆ ಎಂದೂ ತಿಳಿಸಿದ್ದಾರೆ.

ತಗ್ಗು ಪ್ರದೇಶಗಳಲ್ಲಿ ಮತ್ತು ಭೂಕುಸಿತ ಪೀಡಿತ ಪ್ರದೇಶಗಳಲ್ಲಿ ವಾಸಿಸುವ ಗ್ರಾಮಸ್ಥರು ನೆರವು ಕೇಂದ್ರಕ್ಕೆ ತೆರಳುವಂತೆ ಮನವಿ ಮಾಡಿದ್ದಾರೆ. ಎಲ್ಲೆಡೆ ಮುನ್ನೆಚ್ಚರಿಕಾ ಕ್ರಮಗಳ ಕೈಗೊಳ್ಳಲಾಗುತ್ತಿದ್ದು, ಕಾರ್ಯಪಡೆಗಳು ನಿವಾಸಿಗಳ ಸುರಕ್ಷತೆಯನ್ನು ಖಚಿತಪಡಿಸುತ್ತಿವೆ ಎಂದು ಹೇಳಿದ್ದಾರೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT