ಸಂಗ್ರಹ ಚಿತ್ರ 
ರಾಜ್ಯ

ಪ್ರಿಯಕರನೊಂದಿಗೆ ಮೋಜು-ಮಸ್ತಿ: ಚಿಕ್ಕಪ್ಪನ ಮನೆಯಲ್ಲಿ 1 ಕೆಜಿಗೂ ಹೆಚ್ಚು ಚಿನ್ನಾಭರಣ ಕಳ್ಳತನ; ವಿದ್ಯಾರ್ಥಿನಿ ಸೇರಿ ನಾಲ್ವರ ಬಂಧನ

ಜೂನ್ ಮೊದಲ ವಾರದಲ್ಲಿ, ಸಚಿತಾ ತನ್ನ ಚಿಕ್ಕಪ್ಪ ಬಿ ಎನ್ ಶ್ರೀನಿವಾಸ್ ಅವರ ಮನೆಗೆ ತೆರಳಿದ್ದು, ಅವರ ಮನೆಯ ಲಾಕರ್‌ನಲ್ಲಿ ಇರಿಸಲಾಗಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಳು.

ಬೆಂಗಳೂರು: ಪ್ರಿಯಕರನೊಂದಿಗೆ ಮೋಜು-ಮಸ್ತಿ ಮಾಡುವ ಸಲುವಾಗಿ ಚಿಕ್ಕಪ್ಪನ ಮನೆಯಿಂದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ಕಳವು ಮಾಡಿದ್ದ ಆರೋಪದ ಮೇಲೆ ಬಿಕಾಂ ವಿದ್ಯಾರ್ಥಿನಿ ಸೇರಿ ನಾಲ್ವರು ಆರೋಪಿಗಳನ್ನು ಕೊತ್ತನೂರು ಪೊಲೀಸರು ಬಂಧನಕ್ಕೊಳಪಡಿಸಿದ್ದಾರೆ.

ಬಂಧಿತನ್ನು ಸಚಿತಾ, ಈಕೆಯ ಗೆಳೆಯ ಮತ್ತು ಸಹಪಾಠಿಗಳಾದ ತನುಷ್. ಯಶವಂತ್, ರಾಮಪ್ರಕಾಶ್ ಎಂದು ಗುರ್ತಿಸಲಾಗಿದೆ.

ಜೂನ್ ಮೊದಲ ವಾರದಲ್ಲಿ, ಸಚಿತಾ ತನ್ನ ಚಿಕ್ಕಪ್ಪ ಬಿ ಎನ್ ಶ್ರೀನಿವಾಸ್ ಅವರ ಮನೆಗೆ ತೆರಳಿದ್ದು, ಅವರ ಮನೆಯ ಲಾಕರ್‌ನಲ್ಲಿ ಇರಿಸಲಾಗಿದ್ದ 1 ಕೆಜಿಗೂ ಹೆಚ್ಚು ಚಿನ್ನಾಭರಣಗಳನ್ನು ಕಳ್ಳತನ ಮಾಡಿದ್ದಳು.

ಈ ನಡುವೆ ಕಳ್ಳತನ ಕುರಿತು ಶ್ರೀನಿವಾಸ್ ಅವರು ದೂರು ನೀಡಿದ್ದರು. ಆರಂಭದಲ್ಲಿ ಮನೆ ಕೆಲಸಗಾರರು ಕಳ್ಳತನದಲ್ಲಿ ಭಾಗಿಯಾಗಿರಬಹುದು ಎಂದು ಅನುಮಾನಿಸಿದರು, ನಂತರ ಅವರ ಪಾತ್ರವಿಲ್ಲ ಎಂಬುದು ಖಚಿತವಾಗಿತ್ತು.

ಬಳಿಕ ನಿಧಾನಗತಿಯಲ್ಲಿ ಚಿಂತನೆ ನಡೆಸಿದಾಗ ಅಪರಾಧ ನಡೆಯುವುದಕ್ಕೂ ಆರು ತಿಂಗಳ ಮೊದಲು ಸಚಿತಾ ನಿಯಮಿತವಾಗಿ ತಮ್ಮ ಮನೆಗೆ ಭೇಟಿ ನೀಡುತ್ತಿದ್ದು, ಹಲವು ಅನುಮಾನಕ್ಕೆ ಎಡೆಮಾಡಿಕೊಟ್ಟಿದೆ.

ಬಳಿಕ ಸಚಿತಾಳನ್ನು ವಶಕ್ಕೆ ಪಡೆದ ಪೊಲೀಸರು, ವಿಚಾರಣೆಗೊಳಪಡಿಸಿದಾಗ ಸತ್ಯ ಬಾಯ್ಬಿಟ್ಟಿದ್ದಾಳೆ. ಚಿಕ್ಕಪ್ಪನ ಮನೆಯಲ್ಲಿ ದೊಡ್ಡ ಪ್ರಮಾಣದ ಚಿನ್ನವನ್ನು ಇರುವುದು ತಿಳಿದುಬಂದಿತ್ತು. ಜನವರಿಯಿಂದ ಹಂತ ಹಂತವಾಗಿ ಆಭರಣಗಳನ್ನು ಕದಿಯಲು ಪ್ರಾರಂಭಿಸಿದ್ದೆ ಎಂದು ಸಚಿತಾ ಹೇಳಿಕೊಂಡಿದ್ದಾಳೆ.

ಆಭರಣಗಳನ್ನು ಯಶವಂತ್‌ಗೆ ನೀಡಿದ್ದೆ. ಆತ ತನ್ನ ಸ್ನೇಹಿತ ತನುಷ್ ಹಾಗೂ ರಾಮಪ್ರಕಾಶ್'ಗೆ ನೀಡುತ್ತಿದ್ದ. ಮೂವರು ಸೇರಿ ಚಿನ್ನವನ್ನು ಕರಗಸಿ ಚಿನ್ನದ ಗಟ್ಟಿಗಳಾಗಿ ಪರಿವರ್ತಿಸಿ ಮಾರಾಟ ಮಾಡುತ್ತಿದ್ದರು ಎಂದು ಸಚಿತಾ ತಿಳಿಸಿದ್ದಾಳೆ.

ಇದೀಗ ಆರೋಪಿಗಳಿಂದ 65 ಲಕ್ಷ ರೂಪಾಯಿ ಮೌಲ್ಯದ ಆಭರಣಗಳು ಮತ್ತು 10 ಲಕ್ಷ ರೂಪಾಯಿ ನಗದನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

Tariff ಬೆನ್ನಲ್ಲೇ ಅಮೆರಿಕ ಅಧ್ಯಕ್ಷರಿಗೆ ಯುದ್ಧೋನ್ಮಾದ: "ಯುದ್ಧ ಇಲಾಖೆ" ಬಗ್ಗೆ ಟ್ರಂಪ್ ಒಲವು!

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

ಸ್ಟಾಲಿನ್ ಶ್ಲಾಘಿಸಿದ ಭಗವಂತ್ ಮಾನ್, ಪಂಜಾಬ್ ನಲ್ಲೂ ಉಪಾಹಾರ ಯೋಜನೆ ಜಾರಿ ಬಗ್ಗೆ ಚಿಂತನೆ

Ragigudda Metro ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

SCROLL FOR NEXT