ಸಂಗ್ರಹ ಚಿತ್ರ 
ರಾಜ್ಯ

Rain Alert: ಗಂಟೆಗೆ 50-60 ಕಿಮೀ ವೇಗದ ಬಿರುಗಾಳಿ ಸಹಿತ ಭಾರೀ ಮಳೆ; IMD ಎಚ್ಚರಿಕೆ..!

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ.

ಬೆಂಗಳೂರು: ಜುಲೈ ಅಂತ್ಯದ ವೇಳೆಗೆ ರಾಜ್ಯದ ಹೆಚ್ಚಿನ ಭಾಗಗಳಲ್ಲಿ ಬಲವಾದ ಗಾಳಿ ಮತ್ತು ಮಧ್ಯಮ ಮಳೆಯಾಗುವ ಮುನ್ಸೂಚನೆಯನ್ನು ಭಾರತ ಹವಾಮಾನ ಇಲಾಖೆ (ಐಎಂಡಿ) ನೀಡಿದೆ.

ಇದೇ ವೇಳೆ ದಕ್ಷಿಣ ಒಳನಾಡಿನ (ಎಸ್‌ಐಕೆ) ಹೆಚ್ಚಿನ ಭಾಗಗಳಲ್ಲಿ ಮಳೆಯ ಕೊರತೆ ದಾಖಲಾಗಿದೆ ಎಂದು ಸಂಸ್ಥೆಯ ದತ್ತಾಂಶಗಳಿಂದ ತಿಳಿದುಬಂದಿದೆ.

ರಾಜ್ಯದ ಹಲವೆಡೆ ಬಿರುಗಾಳಿ ಸಹಿತ ಭಾರೀ ಮಳೆಯಾಗಲಿದ್ದು, ಗಂಟೆಗೆ 50-60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಕಾರವಾರ, ಮಂಗಳೂರು, ಪಣಂಬೂರು, ಹೊನ್ನಾವರ, ಭಟ್ಕಳ, ಗಂಗೊಳ್ಳಿ, ಮಲ್ಪೆ ಬಂದರು ಮತ್ತು ಮೀನುಗಾರರಿಗೆ ಹವಾಮಾನ ಇಲಾಖೆ ಎಚ್ಚರಿಕೆ ನೀಡಿದೆ.

ಹವಾಮಾನ ಇಲಾಖೆಯ ದತ್ತಾಂಶದ ಪ್ರಕಾರ, ಜುಲೈ 29 ರವರೆಗೆ ಕರಾವಳಿ ಕರ್ನಾಟಕದ ಎಲ್ಲಾ ಪ್ರದೇಶಗಳಲ್ಲಿ ಹೆಚ್ಚಿನ ಮಳೆಯಾಗಿದ್ದರೆ, ಉತ್ತರ ಒಳನಾಡಿನ (ಬೆಳಗಾವಿ (-36%), ಬೀದರ್ (-68%), ಧಾರವಾಡ (-7%), ಕಲಬುರಗಿ (-34%) ಮತ್ತು ಕೊಪ್ಪಳ (-85%)) ಐದು ಪ್ರದೇಶಗಳಲ್ಲಿ ಮಳೆಯ ಕೊರತೆ ಕಂಡುಬಂದಿದೆ ಎಂದು ತಿಳಿದುಬಂದಿದೆ.

ಬೆಂಗಳೂರಿನ ಹೆಚ್ಎಎಲ್ ವಿಮಾನ ನಿಲ್ದಾಣದಲ್ಲಿ ಶೇ.29ರಷ್ಟು ಮಳೆ ಕೊರತೆ ಕಂಡು ಬಂದಿದ್ದರೆ, ಬೆಂಗಳೂರು ನಗರದಲ್ಲಿ ಶೇ.42, ಚಾಮರಾಜನಗ ಶೇ.52, ಹಾಸನ ಶೇ.208, ಚಿಂತಾಮಣಿ ಶೇ.66, ಮೈಸೂರು ಶೇ.99 ಮತ್ತು ಶಿವಮೊಗ್ಗ ಶೇ.31ರಷ್ಟು ಮಳೆ ಕೊರತೆಯಾಗಿದೆ ಎಂದು ತಿಳಿಸಿದೆ.

ಕಳೆದ ವರ್ಷವೂ ದಕ್ಷಿಣ ಒಳನಾಡಿನ ಹೆಚ್ಚಿನ ಭಾಗಗಳಲ್ಲಿ ಮಳೆಯ ಕೊರತೆ ದಾಖಲಾಗಿತ್ತು ಎಂದು ಬೆಂಗಳೂರಿನ ಐಎಂಡಿಯ ಹಿರಿಯ ವಿಜ್ಞಾನಿ ಸಿ.ಎಸ್. ಪಾಟೀಲ್ ಹೇಳಿದ್ದಾರೆ.

ಮಳೆ ಕೊರತೆ ನಗರ ಪ್ರದೇಶಗಳಿಗೆ ಪ್ರಯೋಜನವಾಗಿದ್ದರೂ ಕೃಷಿ ವಲಯಕ್ಕೆ ಇದು ಆತಂಕಕಾರಿ ವಿಚಾರವಾಗಿದೆ. ಇದು ಬೆಳೆ ಮತ್ತು ಕೊಯ್ಲಿನ ಮೇಲೆ ಪರಿಣಾಮ ಬೀರುತ್ತದೆ ಎಂದು ತಿಳಿಸಿದ್ದಾರೆ.

ಕಳೆದ ಕೆಲವು ದಿನಗಳಿಂದ ಬೆಂಗಳೂರಿನ ಗರಿಷ್ಠ ತಾಪಮಾನದಲ್ಲಿ ಕುಸಿತ ಕಂಡು ಬಂದಿದ್ದು, ಜುಲೈ 28 ರಂದು ನಗರದಲ್ಲಿ ಗರಿಷ್ಠ 26.6 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಇದರೊಂದಿಗೆ 1.4 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಮಂಗಳವಾರ ಸಂಜೆ 5.30 ರವರೆಗೆ ನಗರದಲ್ಲಿ ಗರಿಷ್ಠ 27 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿತ್ತು.

ಕನಿಷ್ಠ ತಾಪಮಾನದಲ್ಲೂ ಇಳಿಕೆಯಾಗಿದ್ದು, ಮಂಗಳವಾರ ಬೆಳಿಗ್ಗೆ 8.30ಕ್ಕೆ ಕನಿಷ್ಠ ತಾಪಮಾನ 19.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದ್ದು, ಸಾಮಾನ್ಯ ಕನಿಷ್ಠ ತಾಪಮಾನಕ್ಕಿಂತ 0.7 ಡಿಗ್ರಿ ಸೆಲ್ಸಿಯಸ್ ಇಳಿಕೆಯಾಗಿದೆ. ಸೋಮವಾರವೂ ಇದೇ ರೀತಿಯ ಹವಾಮಾನ ದಾಖಲಾಗಿದ್ದು, 19 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬಾಂಗ್ಲಾದೇಶ ಚುನಾವಣೆಯಲ್ಲಿ BNP ಭರ್ಜರಿ ಗೆಲುವು: ತಾರಿಕ್ ರೆಹಮಾನ್ ಗೆ ಪ್ರಧಾನಿ ಮೋದಿ ಅಭಿನಂದನೆ; ಹೇಳಿದ್ದೇನು?

ಅಣೆಕಟ್ಟು ಸುರಕ್ಷತೆಯಲ್ಲಿ ಕರ್ನಾಟಕ ದೇಶಕ್ಕೆ ಮಾದರಿ: ಕೇಂದ್ರ ಅನುಮತಿ ಕೊಟ್ಟರೆ ಮೇಕೆದಾಟು,UKP ಯೋಜನೆ ಜಾರಿ; ಡಿ.ಕೆ. ಶಿವಕುಮಾರ್

ಮಹಾ ಶಿವರಾತ್ರಿ ಮಹತ್ವ: ಆಧ್ಯಾತ್ಮಿಕ ಶುದ್ಧೀಕರಣ, ಪಾಪಗಳ ನಿವಾರಣೆ; ಕಡ್ಡಾಯವಾಗಿ ಮಾಡಿ ಉಪವಾಸ- ಜಾಗರಣೆ, ಪಂಚಾಕ್ಷರಿ ಮಂತ್ರ ಪಠಣೆ!

ಎಪ್ಸ್ಟೀನ್ ಜೊತೆಗಿನ 'ಸಂಬಂಧ': ಹರ್ದೀಪ್ ಪುರಿ ರಾಜೀನಾಮೆಗೆ ಸಂಸದರ ಒತ್ತಾಯ

Karnataka Budget 2026: ಮಾರ್ಚ್ 6ರಂದು ರಾಜ್ಯ ಬಜೆಟ್ ಮಂಡನೆ; ಸಂಪುಟ ಸಭೆಯಲ್ಲಿ ಕೈಗೊಂಡ ನಿರ್ಧಾರಗಳಿವು...

SCROLL FOR NEXT