ಕ್ರಿಪ್ಟೋ ಕರೆನ್ಸಿ 
ರಾಜ್ಯ

ಬೆಂಗಳೂರು: ಕ್ರಿಪ್ಟೋ ಕಂಪನಿಗೆ 384 ಕೋಟಿ ರೂ ವಂಚನೆ; ಉದ್ಯೋಗಿ ಬಂಧನ

ಜುಲೈ 19 ರಂದು ಅಪರಿಚಿತ ವ್ಯಕ್ತಿಯೊಬ್ಬ ಕಂಪನಿಯ ಕ್ರಿಪ್ಟೋ ವ್ಯಾಲೆಟ್‌ ಹ್ಯಾಕ್ ಮಾಡಿ 44 ಮಿಲಿಯನ್ ಯುಎಸ್ ಡಾಲರ್(ಸುಮಾರು 384 ಕೋಟಿ ರೂ.) ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಅಪರಿಚಿತ ವ್ಯಾಲೆಟ್‌ಗೆ ವರ್ಗಾಯಿಸಿದ್ದಾರೆ.

ಬೆಂಗಳೂರು: ಬೆಂಗಳೂರಿನ ಬೆಳ್ಳಂದೂರಿನಲ್ಲಿರುವ ಕ್ರಿಪ್ಟೋ ಕರೆನ್ಸಿ ಟ್ರೇಡಿಂಗ್ ಕಂಪನಿ ನೆಬಿಲೋ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್​ನ ವ್ಯಾಲೆಟ್​​ ಹ್ಯಾಕ್​ ಮಾಡಿ ಸುಮಾರು 384 ಕೋಟಿ ರೂ. ದೋಚಿದ ಆರೋಪದ ಮೇಲೆ 28 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ಬುಧವಾರ ತಿಳಿಸಿದ್ದಾರೆ.

ಜುಲೈ 19 ರಂದು ಅಪರಿಚಿತ ವ್ಯಕ್ತಿಯೊಬ್ಬ ಕಂಪನಿಯ ಕ್ರಿಪ್ಟೋ ವ್ಯಾಲೆಟ್‌ ಹ್ಯಾಕ್ ಮಾಡಿ 44 ಮಿಲಿಯನ್ ಯುಎಸ್ ಡಾಲರ್(ಸುಮಾರು 384 ಕೋಟಿ ರೂ.) ಮೌಲ್ಯದ ಕ್ರಿಪ್ಟೋಕರೆನ್ಸಿಯನ್ನು ಅಪರಿಚಿತ ವ್ಯಾಲೆಟ್‌ಗೆ ವರ್ಗಾಯಿಸಿದ್ದಾರೆ ಎಂದು ಆರೋಪಿಸಿ ನೆಬ್ಲಿಯೊ ಟೆಕ್ನಾಲಜೀಸ್ ಪ್ರೈವೇಟ್ ಲಿಮಿಟೆಡ್‌ನ ಉಪಾಧ್ಯಕ್ಷ(ಸಾರ್ವಜನಿಕ ನೀತಿ ಮತ್ತು ಸರ್ಕಾರಿ ವ್ಯವಹಾರಗಳು) ಹರ್ದೀಪ್ ಸಿಂಗ್ ಅವರು ಪೊಲೀಸರಿಗೆ ದೂರು ನೀಡಿದ್ದರು.

ಹರ್ದೀಪ್ ಸಿಂಗ್ ಅವರು ನೀಡಿದ ದೂರಿನ ಆಧಾರದ ಮೇಲೆ, ಜುಲೈ 22 ರಂದು ವೈಟ್‌ಫೀಲ್ಡ್ ಸಿಇಎನ್ ಪೊಲೀಸ್ ಠಾಣೆಯಲ್ಲಿ ಮಾಹಿತಿ ತಂತ್ರಜ್ಞಾನ ಕಾಯ್ದೆ ಮತ್ತು ಭಾರತೀಯ ನ್ಯಾಯ ಸಂಹಿತಾದ ಸಂಬಂಧಿತ ವಿಭಾಗಗಳ ಅಡಿಯಲ್ಲಿ ಕಳ್ಳತನ, ಕ್ರಿಮಿನಲ್ ನಂಬಿಕೆ ಉಲ್ಲಂಘನೆ ಮತ್ತು ವಂಚನೆ ಪ್ರಕರಣ ದಾಖಲಿಸಲಾಗಿದೆ.

ಬಂಧಿತ ವ್ಯಕ್ತಿಯನ್ನು, ಕಂಪನಿಯ ಉದ್ಯೋಗಿ ರಾಹುಲ್ ಅಗರ್ವಾಲ್ ಎಂದು ಗುರುತಿಸಲಾಗಿದ್ದು, ಅವರನ್ನು ಹೆಚ್ಚಿನ ವಿಚಾರಣೆಗಾಗಿ ವಶಕ್ಕೆ ಪಡೆಯಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಎಫ್‌ಐಆರ್‌ನಲ್ಲಿ, ಕಂಪನಿಯ ಆಂತರಿಕ ತನಿಖೆಯಲ್ಲಿ ಅಗರ್ವಾಲ್ ಅವರ ಲ್ಯಾಪ್‌ಟಾಪ್ ಹ್ಯಾಕ್ ಆಗಿದೆ ಎಂದು ಸಿಂಗ್ ಹೇಳಿದ್ದಾರೆ.

ವಿಚಾರಣೆಯ ಸಮಯದಲ್ಲಿ, ರಾಹುಲ್ ಅಗರ್ವಾಲ್ ಕಳೆದ ವರ್ಷ ಕಂಪನಿ ಲ್ಯಾಪ್​ಟಾಪ್​ ಅನ್ನು ಮತ್ತೊಂದು ಪಾರ್ಟ್​​ಟೈಂ ಉದ್ಯೋಗಕ್ಕೆ ಬಳಸಿರುವುದಾಗಿ ಒಪ್ಪಿಕೊಂಡಿದ್ದಾರೆ ಮತ್ತು ಅದರಿಂದ ಅವರು ಸುಮಾರು 15 ಲಕ್ಷ ರೂ. ಗಳಿಸಿದ್ದರು.

ಕಂಪನಿ ನೀಡಿದ ಲ್ಯಾಪ್‌ಟಾಪ್ ಅನ್ನು ಪಾರ್ಟ್​​ಟೈಂ ಉದ್ಯೋಗಕ್ಕೆ ಬಳಸುವುದು ಕಂಪನಿಯ ನೀತಿಯ ಉಲ್ಲಂಘನೆಯಾಗಿದೆ ಎಂದು ಸಿಂಗ್ ಆರೋಪಿಸಿದ್ದಾರೆ.

"ರಾಹುಲ್ ಅಗರ್ವಾಲ್, ಅಪರಿಚಿತ ಆರೋಪಿಯೊಂದಿಗೆ ಶಾಮೀಲಾಗಿ ಹ್ಯಾಕಿಂಗ್ ಮಾಡಿರಬಹುದು ಎಂದು ಶಂಕಿಸಲಾಗಿದೆ" ಎಂದು ಸಿಂಗ್ ದೂರಿನಲ್ಲಿ ಆರೋಪಿಸಿದ್ದಾರೆ.

"ನಾವು ಶಂಕಿತನನ್ನು ಬಂಧಿಸಿದ್ದೇವೆ. ಆತನನ್ನು ವಿಚಾರಣೆ ನಡೆಸಲಾಗುತ್ತಿದೆ. ಹ್ಯಾಕ್‌ನಿಂದಾಗಿ ಕಂಪನಿಯು ಸುಮಾರು 384 ಕೋಟಿ ರೂ. ಕಳೆದುಕೊಂಡಿದೆ" ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT