ಸಂಸದ ತೇಜಸ್ವಿ ಸೂರ್ಯ online desk
ರಾಜ್ಯ

ನಮ್ಮ ಮೆಟ್ರೋ ಟಿಕೆಟ್ ದರ ಏರಿಕೆ: FFC ವರದಿ ಬಿಡುಗಡೆ ಮಾಡದ BMRCL; ಲೋಕಸಭೆಯಲ್ಲಿ ತೇಜಸ್ವಿ ಸೂರ್ಯ ಕಿಡಿ

ಸುಮಾರು 4 ತಿಂಗಳ ಹಿಂದೆ (ಫೆಬ್ರವರಿಯಲ್ಲಿ), ಬಿಎಂಆರ್‌ಸಿಎಲ್ ಮೆಟ್ರೋ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸಿತ್ತು.

ನವದೆಹಲಿ: ನಮ್ಮ ಮೆಟ್ರೋ ದರ ಏರಿಕೆಯನ್ನು ತೀವ್ರವಾಗಿ ಟೀಕಿಸಿರುವ ಬೆಂಗಳೂರು ದಕ್ಷಿಣ ಸಂಸದ ತೇಜಸ್ವಿ ಸೂರ್ಯ ಅವರು ಶುಲ್ಕ ನಿಗದಿ ಸಮಿತಿ (ಎಫ್‌ಎಫ್‌ಸಿ) ವರದಿಯನ್ನು ಪ್ರಕಟಿಸದ ಬೆಂಗಳೂರು ಮೆಟ್ರೋ ರೈಲು ನಿಗಮ ಲಿಮಿಟೆಡ್ (ಬಿಎಂಆರ್‌ಸಿಎಲ್) ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.

ಲೋಕಸಭೆಯಲ್ಲಿ ಶೂನ್ಯ ವೇಳೆಯಲ್ಲಿ ಬುಧವಾರ ಮಾತನಾಡಿದ ತೇಜಸ್ವಿ ಸೂರ್ಯ ಅವರು, ವಸತಿ ಮತ್ತು ನಗರ ವ್ಯವಹಾರಗಳ ಸಚಿವಾಲಯದ ಮೂಲಕ ಎಫ್‌ಎಫ್‌ಸಿ ವರದಿಯನ್ನು ತಕ್ಷಣ ಪ್ರಕಟಿಸುವಂತೆ ಬಿಎಂಆರ್‌ಸಿಎಲ್‌ಗೆ ಸೂಚನೆ ನೀಡಬೇಕೆಂದು ಸ್ಪೀಕರ್ ಓಂ ಬಿರ್ಲಾ ಅವರನ್ನು ಒತ್ತಾಯಿಸಿದರು.

ಸುಮಾರು 4 ತಿಂಗಳ ಹಿಂದೆ (ಫೆಬ್ರವರಿಯಲ್ಲಿ), ಬಿಎಂಆರ್‌ಸಿಎಲ್ ಮೆಟ್ರೋ ದರವನ್ನು ಸುಮಾರು ಶೇ.130ರಷ್ಟು ಹೆಚ್ಚಿಸಿತ್ತು. ಸಾರ್ವಜನಿಕ ಸಾರಿಗೆ ಸೇವೆಗಳು ಸಾಮಾನ್ಯ ಜನರಿಗೆ ಕೈಗೆಟುಕುವಂತಿರಬೇಕು. ಈ ಹೆಚ್ಚಳವು ಪ್ರಯಾಣಿಕರ ಸಂಖ್ಯೆಯಲ್ಲಿ ತೀವ್ರ ಇಳಿಕೆಗೆ ಕಾರಣವಾಗಿದೆ. ಪ್ರಜಾಪ್ರಭುತ್ವ ರಾಷ್ಟ್ರದಲ್ಲಿ ದರ ಏರಿಕೆಯ ಆಧಾರವನ್ನು ತಿಳಿದುಕೊಳ್ಳಲು ಜನರು ಅರ್ಹರಾಗಿದ್ದಾರೆ. ಆದರೆ, ಹಲವು ವಿನಂತಿಗಳ ಹೊರತಾಗಿಯೂ, ಬಿಎಂಆರ್‌ಸಿಎಲ್ (ಎಫ್‌ಎಫ್‌ಸಿ) ವರದಿಯನ್ನು ಇನ್ನೂ ಸಾರ್ವಜನಿಕಗೊಳಿಸಿಲ್ಲ.

ಬೆಂಗಳೂರು ಮೆಟ್ರೊದಲ್ಲಿ 25 ಕಿ.ಮೀ.ಗಿಂತ ಹೆಚ್ಚಿನ ಪ್ರಯಾಣಕ್ಕೆ ರೂ.90 ಪಾವತಿಸಬೇಕಿದೆ. ಸಾರ್ವಜನಿಕರ ಆಕ್ರೋಶದ ನಂತರ ಬಿಎಂಆರ್‌ಸಿಎಲ್ ದರವನ್ನು ಅಲ್ಪ ಕಡಿಮೆ ಮಾಡಿದೆ. ಆದರೂ, ಪ್ರಯಾಣಿಕರಿಗೆ ಹೊರೆಯಾಗಿದೆ.

ಬೆಂಗಳೂರು ದೇಶದ ಆರ್ಥಿಕತೆ ಎಂಜಿನ್ ಆಗಿದೆ. ಆದರೆ, ನಗರ ಮೂಲಸೌಕರ್ಯ ಕೊರತೆ, ಸಂಚಾರ ಸಮಸ್ಯೆಯಿಂದ ಬಳಲುತ್ತಿದೆ, ಸಂಚಾರ ದಟ್ಟಣೆಯನ್ನು ಪರಿಹರಿಸಬಹುದಾದ ಏಕೈಕ ಮಾರ್ಗವೆಂದರೆ ತ್ವರಿತ ಮೆಟ್ರೋ ವಿಸ್ತರಣೆ ಮತ್ತು ಸಾರ್ವಜನಿಕ ಸಾರಿಗೆ ವ್ಯವಸ್ಥೆಗಳನ್ನು ಅಭಿವೃದ್ಧಿಪಡಿಸುವುದಾಗಿದೆ ಎಂದು ತಿಳಿಸಿದರು. ಇದೇ ವೇಳೆ ಮೆಟ್ರೋ ಹಳದಿ ಮಾರ್ಗವನ್ನು ಶೀಘ್ರವಾಗಿ ಕಾರ್ಯರೂಪಕ್ಕೆ ತರುವಂತೆ ಕರೆ ನೀಡಿದರು.

ಕೇಂದ್ರ ಸಚಿವ ಸಂಪುಟದ ಅನುಮೋದನೆಗಾಗಿ ಕಾಯುತ್ತಿರುವ ಮೆಟ್ರೋ ರೆಡ್ ಲೈನ್‌ಗೆ ಅನುಮೋದನೆಯನ್ನು ತ್ವರಿತಗೊಳಿಸುವಂತೆ ಇದೇ ವೇಳೆ ತೇಜಸ್ವಿ ಸೂರ್ಯ ಅವರು ಒತ್ತಾಯಿಸಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಧರ್ಮಸ್ಥಳ ಬುರುಡೆ ಪ್ರಕರಣ: ಸಾಕ್ಷಿ-ದೂರುದಾರ ಚಿನ್ನಯ್ಯನಿಗೆ ಜಾಮೀನು ಮಂಜೂರು

KSCA ಅಧ್ಯಕ್ಷರಾಗಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅವಿರೋಧ ಆಯ್ಕೆ!

12 ಸಾವಿರ ವರ್ಷಗಳಲ್ಲೇ ಮೊದಲು: ಹೈಲಿ ಗುಬ್ಬಿ ಜ್ವಾಲಾಮುಖಿ ಸ್ಫೋಟ; ಭಾರತ ಸೇರಿ ಹಲವು ದೇಶಗಳ ವಿಮಾನಗಳ ಮಾರ್ಗ ಬದಲಾವಣೆ!

"ಧರ್ಮ ಗ್ರಂಥಗಳಲ್ಲಿ ಧ್ವಜಾರೋಹಣದ ಉಲ್ಲೇಖ ಇಲ್ಲ": ರಾಮ ಮಂದಿರದಲ್ಲಿ ಕೇಸರಿ ಧ್ವಜಾರೋಹಣಕ್ಕೆ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತೆ ತಗಾದೆ!

ಕಾಂಗ್ರೆಸ್‌ನಲ್ಲಿ ಅವರ ಶಾಸಕರನ್ನ ಅವರೇ ಖರೀದಿ ಮಾಡುತ್ತಿದ್ದಾರೆ; ಒಬ್ಬರಿಗೆ 100 ಕೋಟಿ ರೂ ಆಫರ್‌; ಕಾರು, ಫ್ಲ್ಯಾಟು ಗಿಫ್ಟು!

SCROLL FOR NEXT