ಬಂಧಿತ ಆರೋಪಿ ಪವನ್  
ರಾಜ್ಯ

ಚಿಕ್ಕಮಗಳೂರು: ತಾಯಿಯನ್ನು ಕೊಂದು ಸುಟ್ಟು ಹಾಕಿ ಪಕ್ಕದಲ್ಲೇ ಮಲಗಿದ್ದ ಪುತ್ರ

ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್‌ ಹಕ್ಕಿಮಕ್ಕಿ ಗ್ರಾಮದಲ್ಲಿ ವಾಸವಾಗಿದ್ದ. ಕಳೆದ ರಾತ್ರಿ ಕಂಠಪೂರ್ತಿ ಕುಡಿದುಬಂದು ತಾಯಿಯ ಜೊತೆ ವಿನಾಕಾರಣ ಜಗಳ ತೆಗೆದಿದ್ದ.

ಚಿಕ್ಕಮಗಳೂರು: ಕುಡಿದ ಮತ್ತಿನಲ್ಲಿ ಪುತ್ರನೇ ತಾಯಿಯನ್ನ ಕೊಂದು, ಆಕೆ ಮೃತ ದೇಹಕ್ಕೆ ಬೆಂಕಿ ಹಾಕಿ ಪಕ್ಕದಲ್ಲೇ ಮಲಗಿರುವ ಹೃದಯವಿದ್ರಾವಕ ಘಟನೆ ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.

ಕೂಲಿ ಕೆಲಸ ಮಾಡಿಕೊಂಡು ಅಮ್ಮನ ಜೊತೆಯಲ್ಲಿದ್ದ ಪವನ್‌ ಹಕ್ಕಿಮಕ್ಕಿ ಗ್ರಾಮದಲ್ಲಿ ವಾಸವಾಗಿದ್ದ. ಕಳೆದ ರಾತ್ರಿ ಕಂಠಪೂರ್ತಿ ಕುಡಿದುಬಂದು ತಾಯಿಯ ಜೊತೆ ವಿನಾಕಾರಣ ಜಗಳ ತೆಗೆದಿದ್ದು, ಆಕೆಯನ್ನು ಕೊಂದು ಬೆಂಕಿ ಹಚ್ಚಿ ಸುಟ್ಟಿದ್ದಲ್ಲದೆ, ಪ್ರಜ್ಞಾಹೀನನಾಗಿ ಪಕ್ಕದಲ್ಲೇ ಮಲಗಿದ್ದನು.

ಅಕ್ಕಪಕ್ಕದವರು ದೌಡಾಯಿಸಿ ಬಂದು ನೋಡುವಷ್ಟರಲ್ಲೇ ಭವಾನಿ ಸಂಪೂರ್ಣವಾಗಿ ಸುಟ್ಟು ಕರಕಲಾಗಿದ್ದರು. ವಿಷಯ ತಿಳಿದ ಕೂಡಲೇ ಆಲ್ಲೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿ ತಾಯಿ ಕೊಂದ ಪಾಪಿ ಮಗನನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡು ಮುಂದಿನ ಕ್ರಮ ಕೈಗೊಂಡಿದ್ದಾರೆ. ಕಳೆದ 2 ತಿಂಗಳ ಹಿಂದೆ ಪವನ್ ಕುಡಿದು ಬಂದ ತಂದೆಯ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿದ್ದನು. ಗ್ರಾಮದ ಹಿರಿಯರು ಬುದ್ದಿ ಹೇಳಿದ್ದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Demographic manipulation: ಒಳನುಸುಳುವಿಕೆಗಿಂತ ಸಾಮಾಜಿಕ ಸಾಮರಸ್ಯಕ್ಕೆ ಇದೇ 'ದೊಡ್ಡ ಅಪಾಯ'- ಪ್ರಧಾನಿ ಮೋದಿ

RSS Centenary: ಇದೇ ಮೊದಲು; 'ಭಾರತ ಮಾತೆ'ಯ ಚಿತ್ರವುಳ್ಳ 100 ನಾಣ್ಯ ರೂ ಬಿಡುಗಡೆ ಮಾಡಿದ ಪ್ರಧಾನಿ ಮೋದಿ

ಮೈಸೂರು: ಮುಂದಿನ ವರ್ಷಗಳಲ್ಲೂ ದಸರಾದಲ್ಲಿ ನಾನೇ ಪುಷ್ಪಾರ್ಚನೆ: ಡಿಕೆಶಿ ಕನಸಿಗೆ 'ಕೊಳ್ಳಿ' ಇಟ್ರಾ ಸಿದ್ದರಾಮಯ್ಯ?

DA hike: ಕೇಂದ್ರ ಸರ್ಕಾರಿ ನೌಕರರಿಗೆ 'ದಸರಾ ಗಿಫ್ಟ್' ; ಶೇ. 3 ರಷ್ಟು ತುಟ್ಟಿ ಭತ್ಯೆ ಹೆಚ್ಚಳಕ್ಕೆ ಸಂಪುಟ ಅನುಮೋದನೆ

ತಮಿಳುನಾಡು: ಅರುಣಾಚಲೇಶ್ವರ ದೇವಸ್ಥಾನಕ್ಕೆ ಬಂದಿದ್ದ ಆಂಧ್ರ ಮಹಿಳೆ ಮೇಲೆ ಅತ್ಯಾಚಾರ; ಇಬ್ಬರು ಪೊಲೀಸರ ಬಂಧನ!

SCROLL FOR NEXT