ಪೊಲೀಸರಿಂದ ಪರಿಶೀಲನೆ 
ರಾಜ್ಯ

ವಿಜಯಪುರ: ರಾಜ್ಯದಲ್ಲಿ ಮತ್ತೊಂದು 'ಮಹಾ' ದರೋಡೆ; Canara Bank ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನ ದೋಚಿದ ಕಳ್ಳರು!

ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ವಿಜಯಪುರ: ಕೆನರಾ ಬ್ಯಾಂಕಿನ ಮನಗೂಳಿ ಶಾಖೆಯಿಂದ 59 ಕೆಜಿ ಚಿನ್ನವನ್ನು ಕಳ್ಳರು ದೋಚಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಬ್ಯಾಂಕಿನಿಂದ ಸಾಲ ಪಡೆದ ಗ್ರಾಹಕರು ಚಿನ್ನವನ್ನು ಠೇವಣಿ ಇಟ್ಟಿದ್ದರು ಎಂದು ವಿಜಯಪುರ ಪೊಲೀಸ್ ವರಿಷ್ಠಾಧಿಕಾರಿ ಲಕ್ಷ್ಮಣ್ ಬಿ ನಿಂಬರ್ಗಿ ತಿಳಿಸಿದ್ದಾರೆ. 59 ಕೆಜಿ ಚಿನ್ನ ಕಳವಾಗಿದೆ ಎಂದು ಬ್ಯಾಂಕ್ ಅಧಿಕಾರಿಗಳು ಅಂದಾಜಿಸಿದ್ದು ಮೇ 26ರಂದು ಕೆನರಾ ಬ್ಯಾಂಕ್ ಮನಗೂಳಿ ಶಾಖೆಯಿಂದ ವ್ಯವಸ್ಥಾಪಕರು ದೂರು ದಾಖಲಿಸಿದರು. ಮೇ 23ರಂದು ಸಂಜೆ ಬ್ಯಾಂಕ್‌ಗೆ ಬೀಗ ಹಾಕಿ ಸಿಬ್ಬಂದಿಗಳು ತೆರಳಿದ್ದರು. ಮೇ 24 ಮತ್ತು 25 ರಂದು (ನಾಲ್ಕನೇ ಶನಿವಾರ ಮತ್ತು ಭಾನುವಾರ) ಬ್ಯಾಂಕ್ ರಜೆ ಇತ್ತು. ಮೇ 26 ಸೋಮವಾರ ಸಿಬ್ಬಂದಿಗಳು ಬ್ಯಾಂಕ್ ಗೆ ಬಂದಿದ್ದು ಸ್ವಚ್ಛತ ಸಿಬ್ಬಂದಿ ಶಾಖೆಯನ್ನು ಸ್ವಚ್ಛಗೊಳಿಸುವ ವೇಳೆ ಶಟರ್ ಬೀಗಗಳನ್ನು ಕತ್ತರಿಸಿರುವುದನ್ನು ಅವರು ಗಮನಿಸಿದ್ದು ತಕ್ಷಣವೇ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಪಾಸಣೆಯ ನಂತರ, ಕಳ್ಳರು ಬ್ಯಾಂಕಿಗೆ ನುಸುಳಿ ಲೂಟಿ ಮಾಡಿರುವುದು ಕಂಡುಬಂದಿದೆ. ಬ್ಯಾಂಕ್ ಅಧಿಕಾರಿಗಳು ಲೂಟಿ ಮಾಡಿದ ಸೊತ್ತನ್ನು ಮೌಲ್ಯಮಾಪನ ಮಾಡಿದಾಗ 59 ಕೆಜಿ ಚಿನ್ನವನ್ನು ಕಳವು ಮಾಡಲಾಗಿದೆ ಎಂದು ಕಂಡುಬಂದಿದೆ. ಇದರ ಮೌಲ್ಯ 53 ಕೋಟಿ ಎಂದು ಅಂದಾಜಿಸಲಾಗಿದೆ. ಪ್ರಕರಣದ ತನಿಖೆಗಾಗಿ ಎಂಟು ತಂಡಗಳನ್ನು ರಚಿಸಲಾಗಿದೆ ಎಂದು ನಿಂಬರ್ಗಿ ಹೇಳಿದರು.

ಮೇ 24 ಮತ್ತು 25 ರ ಮಧ್ಯರಾತ್ರಿ ಕಳ್ಳತನ ನಡೆದಿರಬಹುದು ಎಂದು ಪೊಲೀಸರು ಶಂಕಿಸಿದ್ದಾರೆ. ತನಿಖೆ ಪ್ರಗತಿಯಲ್ಲಿದೆ. ನಾವು ಶೀಘ್ರದಲ್ಲೇ ಆರೋಪಿಯನ್ನು ಬಂಧಿಸಿ ಪ್ರಕರಣವನ್ನು ಅದರ ತಾರ್ಕಿಕ ಅಂತ್ಯಕ್ಕೆ ಕೊಂಡೊಯ್ಯುತ್ತೇವೆ ಎಂದು ಪೊಲೀಸ್ ಅಧಿಕಾರಿ ಹೇಳಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

ಭಾರತದ ಮೇಲೆ ಶೇ. 50 ರಷ್ಟು ಸುಂಕ ನಾಳೆ ಜಾರಿ, ಅಮೆರಿಕ ಕರಡು ಸೂಚನೆ; ಔಷಧ, ಎಲೆಕ್ಟ್ರಾನಿಕ್ಸ್‌ ವಸ್ತುಗಳಿಗೆ ವಿನಾಯಿತಿ

Ragigudda Metro ಮೆಟ್ರೋ ನಿಲ್ದಾಣದಲ್ಲಿ ತಪ್ಪಿದ ದುರಂತ, ಆಯತಪ್ಪಿ ಹಳಿ ಮೇಲೆ ಬಿದ್ದ ಸಿಬ್ಬಂದಿ!... ಮುಂದೇನಾಯ್ತು? Video

ಪದಕ ಹಾಕಿಸಿಕೊಳ್ಳಲು ನಿರಾಕರಿಸಿದ DMK ಸಚಿವನ ಪುತ್ರ, BJP ನಾಯಕ Annamalai ಹೇಳಿದ್ದೇನು? Video

'ಶಾಂತಿ ಬೇಕಾದರೆ ಯುದ್ಧಕ್ಕೆ ಸಿದ್ಧರಾಗಿ.. Sudarshan Chakra ವಾಯುರಕ್ಷಣಾ ವ್ಯವಸ್ಥೆಗೆ ಮೂರೂ ಸೇನೆಗಳ ಬೃಹತ್ ಪ್ರಯತ್ನ ಬೇಕು': CDS Chauhan

SCROLL FOR NEXT