ಡಿ.ಕೆ ಶಿವಕುಮಾರ್ 
ರಾಜ್ಯ

ಎಲ್ಲಾ ರಂಗದ ಸಾಧಕರಿಗೆ ರಾಜ್ಯಮಟ್ಟದ ಕೆಂಪೇಗೌಡ ಪ್ರಶಸ್ತಿ; ಜೂನ್‌ 27 ರಂದು ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ; ದಸರಾಗೆ ಸ್ತಬ್ಧಚಿತ್ರ

ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ.

ಬೆಂಗಳೂರು: ಇದೇ ತಿಂಗಳು 27ರಂದು ಕೆಂಪೇಗೌಡ ಜಯಂತಿ ದಿನದಂದು ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರದ ಕಟ್ಟಡಕ್ಕೆ ಶಂಕುಸ್ಥಾಪನೆ ನೆರವೇರಿಸಲಾಗುವುದು ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

ವಿಧಾನಸೌಧದಲ್ಲಿ ಸೋಮವಾರ ಕೆಂಪೇಗೌಡ ಜಯಂತಿ ಆಚರಣೆ ಸಂಬಂಧ ಬೆಂಗಳೂರು ನಗರಾಭಿವೃದ್ಧಿ ಸಚಿವರೂ ಆದ ಡಿಸಿಎಂ ಡಿ.ಕೆ. ಶಿವಕುಮಾರ್ ಅವರು ಪೂರ್ವಭಾವಿ ಸಭೆ ನಡೆಸಿ, ನಂತರ ಮಾಧ್ಯಮಗೋಷ್ಠಿ ಉದ್ದೇಶಿಸಿ ಮಾತನಾಡಿದರು. ನಾಡಪ್ರಭು ಕೆಂಪೇಗೌಡರ ಜನ್ಮದಿನ ಆಚರಣೆ ವಿಚಾರವಾಗಿ ಇಂದು ಪೂರ್ವಭಾವಿ ಸಭೆ ಮಾಡಿದ್ದೇವೆ. ಈ ಸಭೆಯಲ್ಲಿ ಸುಮಾರು 150 ಪ್ರಮುಖ ನಾಯಕರು ಭಾಗವಹಿಸಿದ್ದರು. 60-70 ಜನ ಅನೇಕ ಸಲಹೆಗಳನ್ನು ನೀಡಿದ್ದಾರೆ ಎಂದರು.

ಸಿದ್ದರಾಮಯ್ಯ ಅವರ ಕಳೆದ ಸರ್ಕಾರದಲ್ಲಿ ಪ್ರತಿ ಕೆಂಪೇಗೌಡ ಜಯಂತಿ ಆಚರಣೆಗೆ ತೀರ್ಮಾನ ಮಾಡಲಾಯಿತು. ಕೆಂಪೇಗೌಡ ಅಭಿವೃದ್ಧಿ ಪ್ರಾಧಿಕಾರಕ್ಕೆ ಸುಮ್ಮನಹಳ್ಳಿ ಬಳಿ 5 ಎಕರೆ ಜಾಗವನ್ನು ನಿಗದಿ ಮಾಡಿದ್ದು, ಜೂನ್ 27ರಂದು ಕೆಂಪೇಗೌಡ ಜಯಂತಿ ಅಂಗವಾಗಿ ಅಂದೇ ಭೂಮಿ ಪೂಜೆ ಮಾಡಲು ತೀರ್ಮಾನಿಸಿದ್ದೇವೆ. ಈ ಕಟ್ಟಡದ ವಾಸ್ತುಶಿಲ್ಪಕ್ಕೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ತಿಳಿಸಿದರು.

ಪ್ರತಿ ವರ್ಷದಂತೆ ಈ ವರ್ಷ ಕೆಂಪೇಗೌಡರ ಗೋಪುರಗಳಿಂದ ಜ್ಯೋತಿ ಬರಲಿದ್ದು, ಪ್ರತಿ ಗೋಪುರಕ್ಕೂ ಒಬ್ಬರು ಶಾಸಕರಿಗೆ ಜವಾಬ್ದಾರಿ ನೀಡಲಾಗಿದೆ. 27ರಂದು ಬೆಳಗ್ಗೆ ಬಾಬು ಜಗಜೀವನ್ ರಾಮ್ ಅವರ ಭವನದಲ್ಲಿ ಕೆಂಪೇಗೌಡ ಜಯಂತಿ ಕಾರ್ಯಕ್ರಮ ಆಚರಿಸಲಾಗುವುದು ಎಂದರು.

27 ರಂದು ಸಂಜೆ ರಾಜ್ಯ ಮಟ್ಟದ ಪ್ರಶಸ್ತಿ ಪ್ರದಾನ ಕಾರ್ಯಕ್ರಮ ಮಾಡಬೇಕಿದ್ದು, ಇದನ್ನು ವಾರ್ಡ್ ಮಟ್ಟಕ್ಕೆ ಸೀಮಿತಗೊಳಿಸುವುದು ಬೇಡ. ರಾಜ್ಯೋತ್ಸವ ಪ್ರಶಸ್ತಿಯಂತೆ ಎಲ್ಲಾ ವರ್ಗಕ್ಕೆ ಕ್ರೀಡೆ, ಸಾಹಿತ್ಯ, ಕಲೆ, ಪತ್ರಿಕೋದ್ಯಮ, ಕೈಗಾರಿಗೆ, ಪರಿಸರ ಸಂರಕ್ಷಣೆ ಸೇರಿ ಎಲ್ಲಾ ಕ್ಷೇತ್ರದ ಸಾಧಕರಿಗೆ ಪ್ರಶಸ್ತಿ ನೀಡಲು ಚಿಂತನೆ ಮಾಡುತ್ತಿದ್ದೇವೆ. ಇದಕ್ಕೆ ಮಾರ್ಗಸೂಚಿ ನಿಗದಿ ಮಾಡಿ ಇದಕ್ಕೆ ಸಮಿತಿಯನ್ನು ರಚಿಸಲಾಗುವುದು ಎಂದು ತಿಳಿಸಿದರು.

ಈ ವರ್ಷದಿಂದ ಕೆಂಪೇಗೌಡ ಪ್ರಾಧಿಕಾರ ವತಿಯಿಂದ ಮೈಸೂರು ದಸರಕ್ಕೆ ಪ್ರತಿ ವರ್ಷ ಒಂದು ಸ್ಥಬ್ಧಚಿತ್ರ ಕಳಿಸುವ ಕೆಲಸವನ್ನು ಮಾಡಲಾಗುವುದು. ಕನ್ನಡ ಮತ್ತು ಸಂಸ್ಕೃತಿ ಇಲಾಖೆ ವತಿಯಿಂದ ಬೆಂಗಳೂರಿನ ಎಲ್ಲಾ ವಿಧಾನಸಭಾ ಕ್ಷೇತ್ರಗಳಲ್ಲಿ ಕೆಂಪೇಗೌಡ ಜಯಂತಿ ಆಚರಿಸಲು ಆರ್ಥಿಕ ನೆರವು ನೀಡಲಾಗುವುದು. ಶಾಲೆಗಳಲ್ಲಿ ಮಕ್ಕಳ ಚರ್ಚಾಸ್ಪರ್ಧೆ ಏರ್ಪಡಿಸಲಾಗುವುದು. ಆಮೂಲಕ ಬೆಂಗಳೂರು ಹಾಗೂ ಕೆಂಪೇಗೌಡರ ಇತಿಹಾಸವನ್ನು ಮಕ್ಕಳಲ್ಲಿ ಅರಿವು ಮೂಡಿಸಲಾಗುವುದು.

ಶಾಲಾ ಪಠ್ಯಕ್ರಮದಲ್ಲಿ ಕೆಂಪೇಗೌಡರ ಕುರಿತ ಪಾಠವನ್ನು ಸೇರಿಸುವ ಬಗ್ಗೆ ಪ್ರಾಥಮಿಕ ಶಿಕ್ಷಣ ಸಚಿವರ ಜತೆ ಚರ್ಚೆ ಮಾಡಲಾಗುವುದು. ಇನ್ನು ವಿಮಾನ ನಿಲ್ದಾಣ ಬಳಿಯ ಕೆಂಪೇಗೌಡ ಪ್ರತಿಮೆ ಸುತ್ತಮುತ್ತಲ ಪ್ರದೇಶ ಅಭಿವೃದ್ಧಿ ಮಾಡಲು ಸಚಿವ ಕೃಷ್ಣ ಭೈರೇಗೌಡ ಅವರಿಗೆ ಜವಾಬ್ದಾರಿ ನೀಡಲಾಗಿದೆ.

ಪ್ರತಿಮೆ ಬಳಿ ಥೀಮ್ ಪಾರ್ಕ್ ಮಾಡಲಾಗುವುದೇ ಎಂದು ಕೇಳಿದಾಗ, "ಬಿಜೆಪಿ ಕಾಲದಲ್ಲಿ ಒಂದು ಪ್ರತಿಮೆ ನಿಲ್ಲಿಸಿ ಶಾಲಾ ಮಕ್ಕಳನ್ನು ಕರೆದುಕೊಂಡು ಹೋಗಿ ಕಾರ್ಯಕ್ರಮ ಮಾಡಿದರು. ಈ ಗುತ್ತಿಗೆದಾರರಿಗೆ ಬಿಲ್ ನೀಡಲಿಲ್ಲ. ಆ ವಿಚಾರದ ಬಗ್ಗೆ ಈಗ ಚರ್ಚೆ ಮಾಡಿ ನಾನು ವಿಷಯಾಂತರ ಮಾಡಲು ಬಯಸುವುದಿಲ್ಲ. ನಾವು ಆ ಪ್ರದೇಶ ಅಭಿವೃದ್ಧಿ ಮಾಡುತ್ತೇವೆ. ಈ ಬಗ್ಗೆ ಹೆಚ್ಚಿನ ಮಾಹಿತಿಯನ್ನು ಕೃಷ್ಣ ಭೈರೇಗೌಡ ಅವರು ನೀಡುತ್ತಾರೆ" ಎಂದು ತಿಳಿಸಿದರು. .

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಭಯೋತ್ಪಾದನೆಯನ್ನು ಯಾವುದೂ ಸಮರ್ಥಿಸಲು ಸಾಧ್ಯವಿಲ್ಲ, ಭಾರತ ಇಸ್ರೇಲ್ ಜೊತೆ ದೃಢವಾಗಿ ನಿಲ್ಲುತ್ತದೆ': ನೆಸ್ಸೆಟ್‌ನಲ್ಲಿ ಪ್ರಧಾನಿ ಮೋದಿ ಭಾಷಣ

'ನ್ಯಾಯಾಂಗದಲ್ಲಿ ಭ್ರಷ್ಟಾಚಾರ' ಪಾಠ: ಸುಪ್ರೀಂ ಕೋರ್ಟ್ ಚಾಟಿ ನಂತರ ವೆಬ್‌ಸೈಟ್‌ನಿಂದ ಪಠ್ಯಪುಸ್ತಕ ತೆಗೆದ NCERT

T20 World Cup 2026: ಶ್ರೀಲಂಕಾ ವಿರುದ್ಧ ನ್ಯೂಜಿಲ್ಯಾಂಡ್ ​ಗೆ 61 ರನ್ ಭರ್ಜರಿ ಗೆಲುವು

India to Israel: ಪ್ರಧಾನಿ ಮೋದಿ ಪಯಣಿಸಿದ Air India ವಿಮಾನ ವಿಶ್ವದಲ್ಲೇ ಅತಿ ಹೆಚ್ಚು ಟ್ರ್ಯಾಕ್: Flightradar24

Ranji Trophy final: ಕರ್ನಾಟಕ ವಿರುದ್ಧ ಜಮ್ಮು ಮತ್ತು ಕಾಶ್ಮೀರ ಬೃಹತ್ ಮೊತ್ತ; 527/6

SCROLL FOR NEXT