ಆಲಮಟ್ಟಿ ಅಣೆಕಟ್ಟು  
ರಾಜ್ಯ

ಆಲಮಟ್ಟಿ ಅಣೆಕಟ್ಟು ಎತ್ತರ: ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಗೆ ಎಂ.ಬಿ ಪಾಟೀಲ್ ಒತ್ತಾಯ

ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರದ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಫಡ್ನವೀಸ್, ಇಂತಹ ಅಪ್ರಸ್ತುತ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಫಡ್ನವೀಸ್ ಉಭಯ ರಾಜ್ಯಗಳ ನಡುವೆ ಸೌಹಾರ್ದತೆ ಕೆಡಿಸಬಾರದು ಎಂದರು.

ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

ಆಲಮಟ್ಟಿ ಅಣೆಕಟ್ಟು ಎತ್ತರದಿಂದ ಮಹಾರಾಷ್ಟ್ರದ ಕೊಲ್ಹಾಪುರದಂತಹ ಭಾಗಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತದೆ ಎಂದು ಪಢ್ನವೀಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿದ ಎಂಬಿ ಪಾಟೀಲ್, ಅಣೆಕಟ್ಟು ಎತ್ತರಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕಾನೂನು ತಜ್ಞರ ಬೆಂಬಲವಿದ್ದು, ಮಹಾರಾಷ್ಟ್ರ ಅನಗತ್ಯವಾಗಿ ಈ ವಿವಾದವೆಬ್ಬಿಸಿದೆ. ಕರ್ನಾಟಕ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದರು.

ಉಭಯ ರಾಜ್ಯಗಳ ನಡುವಿನ ಸೌಹಾರ್ದತೆ ಹದಗೆಡುವುದನ್ನು ತಡೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ ಪಾಟೀಲ್, ಇಂತಹ ವಿಷಯಗಳನ್ನು ಪರಸ್ಪರ ಸಹಕಾರದಿಂದ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯಪುರದಲ್ಲಿ ವಿಮಾನ ತರಬೇತಿ ಕೇಂದ್ರ ಸ್ಥಾಪನೆ ಕುರಿತು ಪ್ರತಿಕ್ರಿಯಿಸಿದ ಪಾಟೀಲ್, ಶಿವಮೊಗ್ಗದಲ್ಲಿರುವಂತೆ ವಿಜಯಪುರದಲ್ಲಿಯೂ ವಿಮಾನ ತರಬೇತಿ ಕೇಂದ್ರವೊಂದು ಶೀಘ್ರದಲ್ಲಿಯೇ ಸ್ಥಾಪನೆಯಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಕೈಗಾರಿಕೆಗಳು ತಲೆ ಎತ್ತಲಿವೆ ಎಂದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಕರೂರ್ ಕಾಲ್ತುಳಿತ ತನಿಖೆಗೆ SIT ರಚನೆ: ಸ್ಥಳದಿಂದ ಓಡಿ ಹೋದ ವಿಜಯ್​​ಗೆ ಮದ್ರಾಸ್ ಹೈಕೋರ್ಟ್ ತರಾಟೆ

'ಭೌಗೋಳಿಕ ನಕ್ಷೆಯಲ್ಲಿ ಕೂಡ ಇರದಂತೆ ಅಳಿಸಿ ಹಾಕುತ್ತೇವೆ': ಬಾಲ ಬಿಚ್ಚಿದ ಪಾಕಿಸ್ತಾನಕ್ಕೆ ಭಾರತೀಯ ಸೇನಾ ಮುಖ್ಯಸ್ಥ ದ್ವಿವೇದಿ ಎಚ್ಚರಿಕೆ! Video

ಖ್ಯಾತ ಹಿರಿಯ ಪತ್ರಕರ್ತ, ಲೇಖಕ ಟಿಜೆಎಸ್ ಜಾರ್ಜ್ ನಿಧನ

Bengaluru: ಪತ್ನಿ ಜತೆಗಿನ ಲೈಂಗಿಕ ಕ್ರಿಯೆ video ಶೇರ್! ಸ್ನೇಹಿತರೊಂದಿಗೆ ಮಲಗಲು 'ಪಾಪಿ ಪತಿ​' Syed ಒತ್ತಾಯ, ದೂರು ದಾಖಲು!

1st test: Ravindra Jadeja ಭರ್ಜರಿ ಬ್ಯಾಟಿಂಗ್, ದಾಖಲೆ ನಿರ್ಮಾಣ, MS Dhoni, Rishabh Pant ಇರುವ Elite ಗ್ರೂಪ್ ಸೇರ್ಪಡೆ!

SCROLL FOR NEXT