ಆಲಮಟ್ಟಿ ಅಣೆಕಟ್ಟು  
ರಾಜ್ಯ

ಆಲಮಟ್ಟಿ ಅಣೆಕಟ್ಟು ಎತ್ತರ: ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಸಿಎಂ ಫಡ್ನವೀಸ್ ಗೆ ಎಂ.ಬಿ ಪಾಟೀಲ್ ಒತ್ತಾಯ

ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

ವಿಜಯಪುರ: ಆಲಮಟ್ಟಿ ಅಣೆಕಟ್ಟು ಎತ್ತರದ ವಿಚಾರದಲ್ಲಿ ಅನಗತ್ಯವಾಗಿ ವಿವಾದ ಸೃಷ್ಟಿಸದಂತೆ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರಿಗೆ ಕೈಗಾರಿಕೆ ಮತ್ತು ವಿಜಯಪುರ ಜಿಲ್ಲಾ ಉಸ್ತುವಾರಿ ಸಚಿವ ಎಂ.ಬಿ. ಪಾಟೀಲ್ ಒತ್ತಾಯಿಸಿದ್ದಾರೆ.

ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಫಡ್ನವೀಸ್, ಇಂತಹ ಅಪ್ರಸ್ತುತ ವಿಚಾರಗಳನ್ನು ಪ್ರಸ್ತಾಪಿಸುವ ಮೂಲಕ ಫಡ್ನವೀಸ್ ಉಭಯ ರಾಜ್ಯಗಳ ನಡುವೆ ಸೌಹಾರ್ದತೆ ಕೆಡಿಸಬಾರದು ಎಂದರು.

ಕರ್ನಾಟಕದ ನೆಲ, ಭಾಷೆ ವಿಚಾರದಲ್ಲಿ ಎಲ್ಲಾ ಚುನಾಯಿತ ಪ್ರತಿನಿಧಿಗಳು, ಅವರ ಪಕ್ಷದ ಸಂಬಂಧ ಮರೆತು ಒಂದಾಗಬೇಕು. ನಮ್ಮ ನೆಲ, ನೀರನ್ನು ಸಂರಕ್ಷಿಸಲು ನಾವೆಲ್ಲರೂ ಒಟ್ಟಾಗಬೇಕು ಎಂದು ಅವರು ಪ್ರತಿಪಾದಿಸಿದರು.

ಆಲಮಟ್ಟಿ ಅಣೆಕಟ್ಟು ಎತ್ತರದಿಂದ ಮಹಾರಾಷ್ಟ್ರದ ಕೊಲ್ಹಾಪುರದಂತಹ ಭಾಗಗಳಲ್ಲಿ ಪ್ರವಾಹಕ್ಕೆ ಕಾರಣವಾಗುತ್ತದೆ ಎಂದು ಪಢ್ನವೀಸ್ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಬರೆದಿರುವ ಪತ್ರದ ಕುರಿತು ಪ್ರತಿಕ್ರಿಯಿಸಿದ ಎಂಬಿ ಪಾಟೀಲ್, ಅಣೆಕಟ್ಟು ಎತ್ತರಿಸುವ ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಕಾನೂನು ತಜ್ಞರ ಬೆಂಬಲವಿದ್ದು, ಮಹಾರಾಷ್ಟ್ರ ಅನಗತ್ಯವಾಗಿ ಈ ವಿವಾದವೆಬ್ಬಿಸಿದೆ. ಕರ್ನಾಟಕ ಯಾವುದೇ ಭಯ ಪಡುವ ಅಗತ್ಯವಿಲ್ಲ ಎಂದರು.

ಉಭಯ ರಾಜ್ಯಗಳ ನಡುವಿನ ಸೌಹಾರ್ದತೆ ಹದಗೆಡುವುದನ್ನು ತಡೆಯುವಂತೆ ಮಹಾರಾಷ್ಟ್ರ ಮುಖ್ಯಮಂತ್ರಿಗೆ ಮನವಿ ಮಾಡಿದ ಪಾಟೀಲ್, ಇಂತಹ ವಿಷಯಗಳನ್ನು ಪರಸ್ಪರ ಸಹಕಾರದಿಂದ ಬಗೆಹರಿಸಿಕೊಳ್ಳಬೇಕು ಎಂದು ತಿಳಿಸಿದ್ದಾರೆ.

ವಿಜಯಪುರದಲ್ಲಿ ವಿಮಾನ ತರಬೇತಿ ಕೇಂದ್ರ ಸ್ಥಾಪನೆ ಕುರಿತು ಪ್ರತಿಕ್ರಿಯಿಸಿದ ಪಾಟೀಲ್, ಶಿವಮೊಗ್ಗದಲ್ಲಿರುವಂತೆ ವಿಜಯಪುರದಲ್ಲಿಯೂ ವಿಮಾನ ತರಬೇತಿ ಕೇಂದ್ರವೊಂದು ಶೀಘ್ರದಲ್ಲಿಯೇ ಸ್ಥಾಪನೆಯಾಗಲಿದೆ. ಉತ್ತರ ಕರ್ನಾಟಕ ಭಾಗದಲ್ಲಿ ಅನೇಕ ಕೈಗಾರಿಕೆಗಳು ತಲೆ ಎತ್ತಲಿವೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಬೆಂಗಳೂರಲ್ಲಿ ಆಪರೇಷನ್‌ ಫುಟ್‌ಪಾತ್‌: ಇದುವರೆಗೆ 9,878 ಅತಿಕ್ರಮಣ ತೆರವು; CM ಡಿಕೆಶಿ ಸಿಟಿ ರೌಂಡ್ಸ್!

Kumbh Mela viral girl ಮೊನಾಲಿಸಾ 'ನಾಪತ್ತೆ'​: ಪೊಲೀಸ್ ರಕ್ಷಣೆ ಹಿಂಪಡೆದ ಕೇರಳ ಹೈಕೋರ್ಟ್

BJP ಆರೋಪಗಳ ಬೆನ್ನಲ್ಲೇ ಮಂಗಳೂರಿನಲ್ಲಿ 8 ಬಾಂಗ್ಲಾದೇಶಿ ಪ್ರಜೆಗಳ ಬಂಧನ; ಗಡಿಪಾರಿಗೆ ಸಿದ್ಧತೆ

ವಿಜಯಪುರದಲ್ಲಿ ಭೀಕರ ಅಪಘಾತ: ಡಿವೈಡರ್‌ಗೆ ಕಾರು ಡಿಕ್ಕಿ; ಇಬ್ಬರು ಪುತ್ರರ ಜೊತೆ ತಾಯಿ ಸ್ಥಳದಲ್ಲೇ ಸಾವು!

'ಮಮತಾರಂತೆ ನಾನು ದುರ್ಬಲ, ಹೇಡಿ CM ಅಲ್ಲ': ಶಾಸಕ ಹುಮಾಯೂನ್ ಕಬೀರ್​ ಬೆವರಿಳಿಸಿದ ಸುವೇಂದು ಅಧಿಕಾರಿ