ಬೆಳಗಾವಿ ಪ್ರತಿಭಟನೆ 
ರಾಜ್ಯ

ಮಸೀದಿಯಲ್ಲಿದ್ದ Quran ಕದ್ದೊಯ್ದು ಸುಟ್ಟು ಹಾಕಿದ ಪ್ರಕರಣ: ಬೆಳಗಾವಿ DC ಕಚೇರಿ ಎದುರು ಮತ್ತೆ ಭುಗಿಲೆದ್ದ ಪ್ರತಿಭಟನೆ, ಪೊಲೀಸರ ವಿರುದ್ಧ ಆಕ್ರೋಶ

ಸಂತಿಬಸ್ತವಾಡದಲ್ಲಿ ಪವಿತ್ರ ಕುರಾನ್ ಸುಟ್ಟ ಪ್ರಕರಣದಲ್ಲಿ ಇದೂವರೆಗೂ ಯಾರನ್ನೂ ಬಂಧಿಸಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದೂ ತಿಳಿದುಬಂದಿಲ್ಲ. ಪವಿತ್ರ ಕುರಾನ್ ಪುಸ್ತಕ ವಿಚಾರ ಬಂದರೆ, ಮುಸ್ಲಿಮರು ಇಂತಹ ದುಷ್ಕೃತ್ಯಕ್ಕೆ ಎಂದಿಗೂ ಕೈಹಾಕುವುದಿಲ್ಲ.

ಬೆಳಗಾವಿ: ಮಸೀದಿಯೊಂದರಲ್ಲಿ ಇಸ್ಲಾಂ ಧರ್ಮದ ಪವಿತ್ರ ಕುರಾನ್ ಪುಸ್ತಕ ಕದ್ದೊಯ್ದು ಸುಟ್ಟು ಹಾಕಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ಮುಹಫಿಝ್‌–ಇ–ಕುರ್‌ಆನ್‌ ಯೂಥ್‌ ಕಮಿಟಿ ನೇತೃತ್ವದಲ್ಲಿ ಮುಸ್ಲಿಮರು ಬೆಳಗಾವಿ ಜಿಲ್ಲಾಧಿಕಾರಿ ಕಚೇರಿ ಎದುರು ಸೋಮವಾರ ಪ್ರತಿಭಟನೆ ನಡೆಸಿದರು.

ಬೆಳಗಾವಿ ಪೊಲೀಸರು ಪ್ರಕರಣವನ್ನು ಪರಿಣಾಮಕಾರಿಯಾಗಿ ತನಿಖೆ ಮಾಡಲು ವಿಫಲವಾಗಿದ್ದು, ಬೆಳಗಾವಿ ಪೊಲೀಸ್ ಆಯುಕ್ತ ಇಯಾಡಾ ಮಾರ್ಟಿನ್ ಮಾರ್ಬನಿಯಾಂಗ್ ಅವರನ್ನು ಇದೇ ಕಾರಣಕ್ಕೆ ವರ್ಗಾವಣೆ ಮಾಡಲಾಗಿದೆ ಎಂದು ಹೇಳಲಾಗುತ್ತಿದೆ.

ಮುಸ್ಲಿಂ ಪವಿತ್ರ ಗ್ರಂಥವನ್ನು ಅಪವಿತ್ರಗೊಳಿಸುವುದು, ಈದ್ಗಾ ಮಿನಾರೆಟ್'ಗೆ ಹಾನಿ ಮಾಡುವುದು ಮತ್ತು ಸಮಾಧಿಗಳನ್ನು ಅಗೆಯುವುದು ಸೇರಿದಂತೆ ಮುಂತಾದ ಘಟನೆಗಳು ಇತ್ತೀಚಿನ ದಿನಗಳಲ್ಲಿ ಸಂತಿಬಸ್ತವಾಡದಲ್ಲಿ ನಡೆದಿದೆ. ಇದು ಅನ್ಯಾಯದ ಬೆಳವಣಿಗೆಗಳಾಗಿವೆ ಎಂದು ಪ್ರತಿಭಟನಾಕಾರರು ಹೇಳಿದರು.

ಇಂತಹ ಘಟನೆಗಳ ಹೊರತಾಗಿಯೂ ಪೊಲೀಸರು ಈ ವಿಷಯಗಳನ್ನು ಗಂಭೀರವಾಗಿ ಪರಿಗಣಿಸುವಲ್ಲಿ ವಿಫಲರಾಗಿದ್ದಾರೆ, ಅಪರಾಧಿಗಳನ್ನು ಶಿಕ್ಷೆಗೆ ಒಳಪಡಿಸುವಲ್ಲಿ ವಿಫಲರಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.

ಸಂತಿಬಸ್ತವಾಡದಲ್ಲಿ ಪವಿತ್ರ ಕುರಾನ್ ಸುಟ್ಟ ಪ್ರಕರಣದಲ್ಲಿ ಇದೂವರೆಗೂ ಯಾರನ್ನೂ ಬಂಧಿಸಿಲ್ಲ. ಅವರು ಯಾವ ಧರ್ಮಕ್ಕೆ ಸೇರಿದವರು ಎಂಬುದೂ ತಿಳಿದುಬಂದಿಲ್ಲ. ಪವಿತ್ರ ಕುರಾನ್ ಪುಸ್ತಕ ವಿಚಾರ ಬಂದರೆ, ಮುಸ್ಲಿಮರು ಇಂತಹ ದುಷ್ಕೃತ್ಯಕ್ಕೆ ಎಂದಿಗೂ ಕೈಹಾಕುವುದಿಲ್ಲ ಎಂದು ಹೇಳಿದರು.

ಇದೇ ವೇಳೆ ಸರ್ಕಾರಕ್ಕೆ ಮನವಿ ಸಲ್ಲಿಸಿದ ಅವರು, ಪೊಲೀಸರ ವಿಫಲತೆ ಹಾಗೂ ಘಟನೆ ನಡೆದು ಇಷ್ಟು ದಿನಗಳ ನಂತರವೂ ಯಾರೊಬ್ಬರನ್ನೂ ಬಂಧಿಸದ ಕುರಿತು ಪ್ರಶ್ನೆ ಮಾಡಿದರು.

ಘಟನೆ ವೇಳೆ ಮೂರು ದಿನಗಳ ಒಳಗಾಗಿ ಆರೋಪಿಗಳ ಬಂಧಿಸುವುದಾಗಿ ಪೊಲೀಸರು ಭರವಸೆ ನೀಡಿದ್ದರು. ಆದರೆ, ಮಾತು ಉಳಿಸಿಕೊಳ್ಳುವಲ್ಲಿ ವಿಫಲರಾಗಿದ್ದಾರೆಂದು ಕಿಡಿಕಾರಿದರು.

ಸ್ಥಳೀಯ ಶಾಸಕರು ಪೊಲೀಸರ ಮೇಲೆ ಒತ್ತಡ ಹೇರುತ್ತಿದ್ದು, ಹೀಗಾಗಿ ತನಿಖೆ ವಿಳಂಬವಾಗುತ್ತಿದೆ. ಪೊಲೀಸರು ಕೂಡಲೇ ಆರೋಪಿಗಳನ್ನು ಬಂಧಿಸಿದಿದ್ದರೆ ಬೆಳಗಾವಿಯ ಪ್ರತೀ ಪ್ರದೇಶದಲ್ಲಿ ಪ್ರತಿಭಟನೆ ಭುಗಿಲೇಳಲಿದೆ ಎಂದು ಎಚ್ಚರಿಸಿದರು.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

ಚಾಮುಂಡೇಶ್ವರಿ ದೇವಿ ಬಗ್ಗೆ ಗೌರವವಿದ್ದು, ಧಾರ್ಮಿಕ ಭಾವನೆಗಳ ಗೌರವಿಸುತ್ತೇನೆ; ಬಾನು ಮುಷ್ತಾಕ್

JC ರಸ್ತೆಯಲ್ಲಿ White-topping ಕಾಮಗಾರಿ: ಆ.30ರವರೆಗೆ ಭಾರಿ ಗಾತ್ರದ ವಾಹನಗಳ ಸಂಚಾರಕ್ಕೆ ನಿರ್ಬಂಧ

SCROLL FOR NEXT