ಸತೀಶ್ ಜಾರಕಿಹೊಳಿ 
ರಾಜ್ಯ

ಗೌರವ ಡಾಕ್ಟರೇಟ್: ನಿರ್ಧಾರ ಹಿಂಪಡೆಯುವಂತೆ ಮೈಸೂರು ವಿವಿಗೆ ಸತೀಶ್ ಜಾರಕಿಹೊಳಿ ಮನವಿ!

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.

ಈ ಸಂಬಂಧ ಸತೀಶ್ ಜಾರಕಿಹೊಳಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿದ್ದು ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಸಂಪೂರ್ಣ ಮನಸ್ಸಿನಿಂದ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ.

ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರದಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಎಂದಿದ್ದಾರೆ.

ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾರ್ಚ್ 27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT