ಸತೀಶ್ ಜಾರಕಿಹೊಳಿ 
ರಾಜ್ಯ

ಗೌರವ ಡಾಕ್ಟರೇಟ್: ನಿರ್ಧಾರ ಹಿಂಪಡೆಯುವಂತೆ ಮೈಸೂರು ವಿವಿಗೆ ಸತೀಶ್ ಜಾರಕಿಹೊಳಿ ಮನವಿ!

ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು.

ಬೆಂಗಳೂರು: ಲೋಕೋಪಯೋಗಿ ಸಚಿವ ಸತೀಶ್‌ ಜಾರಕಿಹೊಳಿ ಅವರಿಗೆ ಕರ್ನಾಟಕ ರಾಜ್ಯ ಮುಕ್ತ ವಿಶ್ವವಿದ್ಯಾನಿಲಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಅನ್ನು ಘೋಷಿಸಿತ್ತು. ಆದರೆ ಈ ನಿರ್ಧಾರವನ್ನು ಸತೀಶ್ ಜಾರಕಿಹೊಳಿ ನಯವಾಗಿ ತಿರಸ್ಕರಿಸಿದ್ದಾರೆ.

ಈ ಸಂಬಂಧ ಸತೀಶ್ ಜಾರಕಿಹೊಳಿ ವಿಶ್ವವಿದ್ಯಾಲಯದ ಕುಲಪತಿಗಳಿಗೆ ಪತ್ರ ಬರೆದಿದ್ದು ವಿವಿ ವತಿಯಿಂದ ನನಗೆ ನೀಡಿದಂತಹ ಗೌರವ ಡಾಕ್ಟರೇಟ್‌ ಪದವಿಯನ್ನು ಹಿಂಪಡೆಯಲು ಕೋರುತ್ತೇನೆ. ನನ್ನ ಈ ನಿರ್ಧಾರವನ್ನು ಅನ್ಯತ ಭಾವಿಸದೆ ನಾನು ಸಂಪೂರ್ಣ ಮನಸ್ಸಿನಿಂದ ಕೈಗೊಂಡ ನಿರ್ಧಾರವಾಗಿದ್ದು, ಈ ತೀರ್ಮನವನ್ನು ಸ್ವಾಗತಿಸುತ್ತೀರೆಂದು ಭಾವಿಸುವುದಾಗಿ ಹೇಳಿದ್ದಾರೆ.

ಗೌರವ ಡಾಕ್ಟರೇಟ್‌ ಪದವಿಯನ್ನು ನನಗೆ ಪ್ರದಾನಿಸುವ ಮೂಲಕ ತಾವು ಸಮಾಜದಲ್ಲಿ ನನ್ನ ಜವಾಬ್ದಾರಿಯನ್ನು ಹೆಚ್ಚಿಸಿರುತ್ತೀರಿ. ಸಾಮಾಜಿಕ ಸೇವೆಯಲ್ಲಿ ನಾನು ಕೈಗೊಂಡಿರುವ ಕಾರ್ಯಕ್ರಮಗಳನ್ನು ಸಫಲಗೊಳಿಸುವ ನಿಟ್ಟಿನಲ್ಲಿ ಹಲವು ಯೋಜನೆಗಳನ್ನು ರೂಪಿಸಿಕೊಂಡಿದ್ದೇನೆ. ಅದನ್ನು ಕಾರ್ಯರೂಪಕ್ಕೆ ತರುವಂತಹ ಗುರುತರವಾದ ಹೊಣೆಗಾರಿಕೆ ನನ್ನ ಮೇಲಿದೆ. ಇದಕ್ಕೆ ಇನ್ನೂ ಹೆಚ್ಚಿನ ಕಾಲಾವಕಾಶ ಅವಶ್ಯಕತೆ ಇರುತ್ತದೆ ಎಂದಿದ್ದಾರೆ.

ರಾಜ್ಯ ಮುಕ್ತ ವಿವಿ ಕುಲಾಧಿಪತಿ, ಸಮಕುಲಾಧಿಪತಿ, ಕುಲಪತಿ ಮತ್ತು ವ್ಯವಸ್ಥಾಪನ ಮಂಡಳಿ ಸದಸ್ಯರ ವತಿಯಿಂದ ಮಾರ್ಚ್ 27ರಂದು ವಿವಿಯ ಗೌರವ ಡಾಕ್ಟರೇಟ್‌ ಡಿ.ಲಿಟ್‌ ಗೌರವ ಪದವಿಯನ್ನು ನೀಡುವುದರ ಮೂಲಕ ಸನಾನಿಸಿದ ವ್ಯವಸ್ಥಾಪನ ಮಂಡಳಿಗೆ ನಾನು ಹುತ್ಪೂರ್ತಕ ಅಬಾರಿಯಾಗಿದ್ದೇನೆ ಎಂದು ಅವರು ಹೇಳಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಬಾಂಬೆ ಮಾದರಿಯಲ್ಲಿ ಕೊಳಗೇರಿ ಪುನಶ್ಚೇತನಕ್ಕೆ ಸಮಿತಿ ರಚನೆ: GBA ವ್ಯಾಪ್ತಿಗೆ ಆನೇಕಲ್ ಸೇರಿಸುವುದು ಕಷ್ಟ; ಡಿಕೆ ಶಿವಕುಮಾರ್

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

SCROLL FOR NEXT