ಕಮಲ್ ಹಾಸನ್  
ರಾಜ್ಯ

'ಮೊದ್ಲು ಕ್ಷಮೆ ಕೇಳಿ, ಆಮೇಲೆ ಅರ್ಜಿ ವಿಚಾರಣೆ ಮಾಡೋಣ': Kamal Hassan ಗೆ ಜಡ್ಜ್ ಮೌಖಿಕ ತಾಕೀತು; Video

ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು.

ಬೆಂಗಳೂರು: ತಮಿಳಿನಿಂದ ಕನ್ನಡ ಹುಟ್ಟಿದೆ ಎಂಬ ಹೇಳಿಕೆ ನೀಡಿ ಕರ್ನಾಟಕದಲ್ಲಿ ಕನ್ನಡಿಗರಿಂದ ತೀವ್ರ ಟೀಕೆಗೆ ಗುರಿಯಾಗಿರುವ ನಟ ಕಮಲ್​ ಹಾಸನ್​ ಅವರಿಗೆ ಹೈಕೋರ್ಟ್ ನ್ಯಾಯಾಧೀಶರು ಕೂಡ ಕ್ಷಮೆ ಕೇಳಲು ತಾಕೀತು ಮಾಡಿದ್ದಾರೆ.

ಅವರ ಥಗ್ ಲೈಫ್ ಸಿನಿಮಾ ಬಿಡುಗಡೆಗೆ ಕರ್ನಾಟಕದಲ್ಲಿ ತಡೆಯೊಡ್ಡಿದ ಹಿನ್ನೆಲೆಯಲ್ಲಿ ಹೈಕೋರ್ಟ್ ಮೊರೆ ಹೋಗಿದ್ದರು. ಏನೇ ಆದರೂ ಕ್ಷಮೆ ಕೇಳುವುದಿಲ್ಲ ಎಂದು ಮೊಂಡಾಟ ಮೆರೆದಿದ್ದರು. ‘ನಾನು ಯಾವುದೇ ತಪ್ಪು ಮಾಡಿಲ್ಲ, ಕ್ಷಮೆಯಾಚಿಸುವುದಿಲ್ಲ, ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ರಾಜಕೀಯ ಅಜೆಂಡಾ ಇಟ್ಟುಕೊಂಡು ಮಾಡುತ್ತಿದ್ದಾರೆ ಎಂದಿದ್ದರು.

ಕಮಲ್​ ಹಾಸನ್​ ಕ್ಷಮೆಯಾಚಿಸದಿದ್ದರೆ ಅವರ ಚಿತ್ರ ಬಿಡುಗಡೆ ಮಾಡಲು ಅವಕಾಶ ನೀಡುವ ಪ್ರಶ್ನೆಯೇ ಇಲ್ಲ ಎಂದು ಕನ್ನಡ ಚಲನಚಿತ್ರ ವಾಣಿಜ್ಯ ಮಂಡಳಿ ಕೂಡ ಹೇಳಿತ್ತು.

ಇಂದು ಹೈಕೋರ್ಟ್ ನಲ್ಲಿ ಕಮಲ್ ಹಾಸನ್ ಅವರು ಸಲ್ಲಿಸಿದ್ದ ಅರ್ಜಿ ವಿಚಾರಣೆಗೆ ಬಂತು. ಈ ವೇಳೆ ಹೈಕೋರ್ಟ್​ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಕ್ಷಮೆ ಕೇಳಿದ್ರೆ ಮಾತ್ರ ಅರ್ಜಿ ಪರಿಗಣಿಸುತ್ತೇವೆ. ಯಾವುದೋ ಭಾಷೆಯಿಂದ ಇನ್ನೊಂದು ಭಾಷೆ ಹುಟ್ಟಿದೆ ಅಂದ್ರೆ ಹೇಗೆ? ಕನ್ನಡ ಭಾಷೆ ತಮಿಳಿಂದ ಹುಟ್ಟಿದೆ ಅನ್ನೋಕೆ ಅವರೇನು ಇತಿಹಾಸಕಾರರಾ? ಈ ಹಿಂದೆ ಸಿ.ರಾಜಗೋಪಾಲಾಚಾರಿ ಕೂಡ ಕ್ಷಮೆಯನ್ನು ಕೇಳಿದ್ದರು. ಇವತ್ತಿನ ಪರಿಸ್ಥಿತಿ ನಿರ್ಮಾಣಕ್ಕೆ ನೀವೇ ಕಾರಣ, ಈ ರೀತಿ ಹೇಳಿಕೆ ನೀಡಬಾರದು. ಕಮಲ್ ಹಾಸನ್ ಸಾಮಾನ್ಯ ವ್ಯಕ್ತಿ ಅಲ್ಲ, ಪಬ್ಲಿಕ್ ಫಿಗರ್​. ಅವರು ಮೊದಲು ಕ್ಷಮೆ ಕೇಳಲಿ, ಆಮೇಲೆ ಅರ್ಜಿ ಪರಿಗಣಿಸ್ತೇವೆ’ ಎಂದು ಖಡಾಖಂಡಿತವಾಗಿ ಹೇಳಿದರು.

ಇದಕ್ಕೆ ಕಮಲ್ ಹಾಸನ್ ಪರ ವಕೀಲರು ಪ್ರತಿಕ್ರಿಯೆ ನೀಡಲು ಮಧ್ಯಾಹ್ನ 2.30ರವರೆಗೆ ಸಮಯಾವಕಾಶ ಕೋರಿದರು.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ನಮ್ಮಲ್ಲೂ ಅಸ್ತ್ರಗಳಿವೆ, ದಾಳಿಗೆ ಸಂಪೂರ್ಣ ಸಿದ್ಧ: ಅಮೆರಿಕಾ ಆರ್ಥಿಕ ದಿಗ್ಬಂಧನಕ್ಕೆ ಇರಾನ್‌ ಪ್ರತಿರೋಧ, ಭಾರೀ ಪ್ರತೀಕಾರದ ಎಚ್ಚರಿಕೆ

‘Iran ನನ್ನ ಪುತ್ರನನ್ನು ಹತ್ಯೆ ಮಾಡಲು ಯತ್ನಿಸಿತ್ತು’: ಟೆಹ್ರಾನ್‌ ವಿರುದ್ಧ ನೆತನ್ಯಾಹು ಗಂಭೀರ ಆರೋಪ

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

Video: ಕುದಿಯುತ್ತಿದ್ದ ಬೆಲ್ಲದ ಪಾಕಕ್ಕೆ ಬಿದ್ದ ಯುವಕ; ಅಣ್ಣನ ಸಾಲ ತೀರಿಸಲು ಕೆಲಸಕ್ಕೆ ಹೋಗಿದ್ದವನ ದಾರುಣ ಅಂತ್ಯ