ಸಂಗ್ರಹ ಚಿತ್ರ 
ರಾಜ್ಯ

ಮದುವೆ ಮಂಟಪದಲ್ಲಿ ಕಳ್ಳರ ಕೈಚಳಕ: ಸಂಬಂಧಿಕರಂತೆ ವಧು ಕೋಣೆಗೆ ತೆರಳಿ 25 ಲಕ್ಷ ರೂ ಚಿನ್ನ ಕದ್ದು ಪರಾರಿ

ಮೂರು ದಿನಗಳ ಹಿಂದೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸಪ್ತಪದಿ ಕಲ್ಯಾಣ ಮಂಪಟದಲ್ಲಿ ನಡೆದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಪ್ರಧಾನಕಾರ್ಯದರ್ಶಿ ಶಿವಶಂಕರ್ ಅವರ ಮಗಳ ಮದುವೆಯಲ್ಲಿ ಈ ಕಳ್ಳತನ ನಡೆದಿದೆ.

ಬೆಂಗಳೂರು: ನಗರದ ಕಲ್ಯಾಣ ಮಂಟಪವೊಂದರಲ್ಲಿ ಕಳ್ಳರು ಕೈಚಳಕ ತೋರಿಸಿದ್ದು, ಸಂಬಂಧಿಕರಂತೆ ವಧು ಕೋಣೆಗೆ ತೆರಳಿ 25 ಲಕ್ಷ ರೂ. ಚಿನ್ನ ಕದ್ದು ಪರಾರಿಯಾಗಿರುವ ಘಟನೆ ಮಾಗಡಿ ರಸ್ತೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಶುಕ್ರವಾರ ನಡೆದಿದೆ.

ಮೂರು ದಿನಗಳ ಹಿಂದೆ ವೆಸ್ಟ್ ಆಫ್ ಕಾರ್ಡ್ ರಸ್ತೆಯ ಸಪ್ತಪದಿ ಕಲ್ಯಾಣ ಮಂಪಟದಲ್ಲಿ ನಡೆದ ಡಾ.ರಾಜ್ ಕುಮಾರ್ ಅಭಿಮಾನಿಗಳ ಸಂಘದ ಪ್ರಧಾನಕಾರ್ಯದರ್ಶಿ ಶಿವಶಂಕರ್ ಅವರ ಮಗಳ ಮದುವೆಯಲ್ಲಿ ಈ ಕಳ್ಳತನ ನಡೆದಿದೆ.

ಈ ಬಗ್ಗೆ ಶಿವಶಂಕರ್‌ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಮೇ 28 ಮತ್ತು 29 ರಂದು ಸಪ್ತಪದಿ ಕಲ್ಯಾಣ ಮಂಟಪದಲ್ಲಿ ಮದುವೆ ನಡೆದಿತ್ತು. ಆರತಕ್ಷತೆ ವೇಳೆ ಸಂಬಂಧಿಕರ ಸೋಗಿನಲ್ಲಿ ವಧುವಿನ ಕೋಣೆಗೆ ತೆರಳಿರುವ ಕಿಡಿಗೇಡಿಗಳು ಆಭರಣವನ್ನು ಕಳವು ಮಾಡಿ ಪರಾರಿಯಾಗಿದ್ದಾರೆ.

ಸಾಮಾನ್ಯವಾಗಿ, ಮದುವೆ ಮಂಟಪಗಳಿಗೆ ಬರುವ ಅತಿಥಿಗಳಿಗೆ ಕೋಣೆಯ ಬಾಗಿಲುಗಳಿಗೆ ತಮ್ಮದೇ ಆದ ಬೀಗಗಳನ್ನು ಬಳಸುವಂತೆ ಸೂಚಿಸಲಾಗುತ್ತದೆ. ಆದರೆ, ಈ ಮದುವೆ ಮಂಟಪದಲ್ಲಿ ಮದುವೆ ಮಂಟಪದ ಸಿಬ್ಬಂದಿಯೇ ಬೀಗಗಳನ್ನು ಒದಗಿಸುತ್ತಿದ್ದರು ಎನ್ನಲಾಗಿದೆ.

ವಧುವಿನ ಕೋಣೆಯ ಕಡೆಗೆ ಹೋಗುವ ಮಾರ್ಗದಲ್ಲಿ ಯಾವುದೇ ಸಿಸಿಟಿವಿ ಕ್ಯಾಮೆರಾಗಳಿಲ್ಲ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮಹೂರ್ತ ಮುಗಿದ ಬಳಿಕ ಆಭರಣ ಪರಿಶೀಲಿಸಿದಾಗ ಕಳ್ಳತನ ಕೃತ್ಯವು ಬೆಳಕಿಗೆ ಬಂದಿದೆ. ವಧುವಿನ ಬ್ಯಾಗ್‌ಗಳಲ್ಲಿ ಇರಿಸಲಾಗಿದ್ದ 3,00,000 ರೂ. ನಗದು ಮತ್ತು ಆಭರಣಗಳು ನಾಪತ್ತೆಯಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.

ಈ ಬಗ್ಗೆ ಶಿವಶಂಕರ್‌ ದೂರು ಆಧರಿಸಿ ಎಫ್‌ಐಆರ್‌ ದಾಖಲಿಸಿಕೊಂಡು ತನಿಖೆ ನಡೆಸಲಾಗುತ್ತಿದೆ ಈವರೆಗೂ ಯಾರನ್ನೂ ಬಂಧಿಸಲಾಗಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT