ಸಂಗ್ರಹ ಚಿತ್ರ 
ರಾಜ್ಯ

Bengaluru: ನಗರದ ವಿವಿಧೆಡೆ CCB ದಾಳಿ: 81.82 ಲಕ್ಷ ರೂ ಮೌಲ್ಯದ ಮಾದಕ ದ್ರವ್ಯ ವಶ

ಮತ್ತೊಂದು ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) 2ನೇ ಹಂತದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಅಂಗಡಿಯಲ್ಲಿ ಇ-ಸಿಗರೇಟ್‌ಗಳು, ಹುಕ್ಕಾ ಫ್ಲೇವರ್‌ಗಳು ಮತ್ತು ವಿದೇಶಿ ಸಿಗರೇಟ್‌ಗಳನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅಂಗಡಿ ಕೆಲಸಗಾರನನ್ನು ಬಂಧನಕ್ಕೊಳಪಡಿಸಿದೆ.

ಬೆಂಗಳೂರು: ನಗರದ ವಿವಿಧೆಡೆ ಕಾರ್ಯಾಚರಣೆ ನಡೆಸಿರುವ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) ಎರಡು ಪ್ರತ್ಯೇಕ ಪ್ರಕರಣಗಳಲ್ಲಿ 81.82 ಲಕ್ಷ ರೂ. ಮೌಲ್ಯದ ಮಾದಕ ದ್ರವ್ಯ ವಸ್ತುಗಳನ್ನು ವಶಕ್ಕೆ ಪಡೆದಿದೆ.

ತಲಘಟ್ಟಪುರ ಪೊಲೀಸ್ ಠಾಣಾ ಸರಹದ್ದಿನ ಕನಕಪುರ ಮುಖ್ಯ ರಸ್ತೆಯಲ್ಲಿದ್ದ ಗೋಡಾನ್ ಮೇಲೆ ಸಿಸಿಬಿ ದಾಳಿ ನಡೆಸಿದ್ದು, ಈ ವೇಳೆ ತಂಬಾಕು ಹಾಗೂ ನಿಕೋಟಿನ್ ಒಳಗೊಂಡ ಸುಮಾರು 81.82 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ಜಪ್ತಿ ಮಾಡಿದೆ. ಈ ವೇಳೆ ಇಬ್ಬರನ್ನು ಬಂಧಿಸಲಾಗಿದೆ.ವಶಪಡಿಸಿಕೊಂಡ ವಸ್ತುಗಳಲ್ಲಿ 61.8 ಲಕ್ಷ ರೂ. ಮೌಲ್ಯದ ವಿವಿಧ ತಂಬಾಕು ಮತ್ತು ಚೂಯಿಂಗ್ ಉತ್ಪನ್ನಗಳು ಸೇರಿವೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಮತ್ತೊಂದು ಕಾರ್ಯಾಚರಣೆಯಲ್ಲಿ ಮಾದಕ ದ್ರವ್ಯ ನಿಗ್ರಹ ದಳ (ಸಿಸಿಬಿ) 2ನೇ ಹಂತದ ಎಚ್‌ಆರ್‌ಬಿಆರ್ ಲೇಔಟ್‌ನಲ್ಲಿರುವ ಅಂಗಡಿಯಲ್ಲಿ ಇ-ಸಿಗರೇಟ್‌ಗಳು, ಹುಕ್ಕಾ ಫ್ಲೇವರ್‌ಗಳು ಮತ್ತು ವಿದೇಶಿ ಸಿಗರೇಟ್‌ಗಳನ್ನು ಮಾರಾಟ ಮಾಡಿದ ಹಿನ್ನೆಲೆಯಲ್ಲಿ ಅಂಗಡಿ ಕೆಲಸಗಾರನನ್ನು ಬಂಧನಕ್ಕೊಳಪಡಿಸಿದೆ.

ಸಿಸಿಬಿ ಅಧಿಕಾರಿಗಳು ಅಂಗಡಿಯ ಮೇಲೆ ದಾಳಿ ನಡೆಸಿ 201 ಇ-ಸಿಗರೇಟ್‌ಗಳು, 297 ಹುಕ್ಕಾ ಫ್ಲೇವರ್‌ಗಳು ಮತ್ತು ಆರು ವಿದೇಶಿ ಸಿಗರೇಟ್ ಪ್ಯಾಕ್‌ಗಳನ್ನು ವಶಪಡಿಸಿಕೊಂಡಿದ್ದಾರೆ. ವಶಪಡಿಸಿಕೊಂಡ ಉತ್ಪನ್ನಗಳ ಒಟ್ಟು ಮೌಲ್ಯ 1.7 ಲಕ್ಷ ರೂ. ಎಂದು ಅಂದಾಜಿಸಲಾಗಿದೆ. ಅಂಗಡಿ ಮಾಲೀಕ ಪರಾರಿಯಾಗಿದ್ದು, ಆತನ ಬಂಧಿಸಲು ಹೆಚ್ಚಿನ ತನಿಖೆ ನಡೆಯುತ್ತಿದೆ ಅಧಿಕಾರಿಗಳು ಹೇಳಿದ್ದಾರೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭ್ರಷ್ಟರಿಗೆ ಬೆಳ್ಳಂಬೆಳಗ್ಗೆ ಲೋಕಾಯುಕ್ತ ಶಾಕ್: ಏಕ ಕಾಲದಲ್ಲಿ ರಾಜ್ಯದ 10 ಕಡೆ ದಾಳಿ- ಪರಿಶೀಲನೆ

Kabaddi World Cup 2025: ಭಾರತದ ಸಿಂಹಿಣಿಯರ ಮುಡಿಗೇರಿದ ವಿಶ್ವಕಪ್‌ ಕಿರೀಟ, ಸತತ 2ನೇ ಬಾರಿಗೆ ಪ್ರಶಸ್ತಿ ಗೆದ್ದ ಭಾರತ

ಬ್ರಾಹ್ಮಣನೊಬ್ಬ ತನ್ನ ಮಗಳನ್ನು ನನ್ನ ಮಗನಿಗೆ ದಾನ ಮಾಡುವವರೆಗೆ ಮೀಸಲಾತಿ ಮುಂದುವರೆಯಲಿ: IAS ಅಧಿಕಾರಿ ವಿವಾದಾತ್ಮಕ ಹೇಳಿಕೆ

ಆಫ್ರಿಕಾದಲ್ಲಿ ಜ್ವಾಲಾಮುಖಿ ಸ್ಫೋಟ: ಭಾರತದತ್ತ ಬರುತ್ತಿರುವ ಬೂದಿ ಹೊಗೆ, ವಿಮಾನಗಳ ಹಾರಾಟಕ್ಕೆ ಅಡ್ಡಿ

ಸಿದ್ದರಾಮಯ್ಯ, ಡಿಕೆ ಶಿವಕುಮಾರ್ ಫೈಟ್: ಮಲ್ಲಿಕಾರ್ಜುನ ಖರ್ಗೆಗೆ ಪ್ರಾಫಿಟ್; CM ಹುದ್ದೆ ನೀಡುವಂತೆ ಸೋನಿಯಾಗೆ ದಲಿತ ನಾಯಕರ ಪತ್ರ!

SCROLL FOR NEXT