ಆರ್'ಸಿಬಿ  
ರಾಜ್ಯ

IPL 2025 ಟ್ರೋಫಿ ಹೊತ್ತು 'RCB Champions' ಇಂದು ಬೆಂಗಳೂರಿಗೆ: ನಗರದಲ್ಲಿ Victory Parade; ಎಲ್ಲಿಂದ, ಯಾವಾಗ ಶುರು..?

ಗೆಲುವು ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್'ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಈ ಐತಿಹಾಸಿಕ ಗೆಲುವು ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಗೆಲುವು ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.

ಈ ಕುರಿತು ಆರ್​ಸಿಬಿ ತಂಡದ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ಆರ್‌ಸಿಬಿಯ ವಿಜಯೋತ್ಸವ ಪರೇಡ್. ಇದು ನಿಮಗಾಗಿ, 12th ಮ್ಯಾನ್ ಆರ್ಮಿ ಎಂದು ಅಭಿಮಾನಿಗಳನ್ನು ಉಲ್ಲೇಖಿಸಲಾಗಿದ್ದು, ಆರ್​ಸಿಬಿ ಸೋಲಿನಲ್ಲಿ ಮತ್ತು ಗೆಲುವಿನಲ್ಲೂ ಪ್ರತಿ ಭಾರಿ ಬೆಂಬಲಾವಗಿ ನಿಂತ ನಿಷ್ಠಾವಂತ ಅಭಿಮಾನಿಗಳೆ ಈ ಗೆಲುವಿನ ಕಿರೀಟ ನಿಮ್ಮದೇ ಎಂದು ಹೇಳಿದೆ.

ವಿಜಯೋತ್ಸವ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲೈವ್‌ ಆಗಿಯೂ ವೀಕ್ಷಿಸಬಹುದು. ಜೊತೆಗೆ, ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕವೂ ವೀಕ್ಷಿಸುವ ಅವಕಾಶವಿದೆ.

ವಿಜಯೋತ್ಸವ ಮೆರವಣಿಗೆ ವಿವರ ಇಂತಿದೆ...

  • ಬೆಳಿಗ್ಗೆ 10: ವಿರಾಟ್ ಮತ್ತು ತಂಡ ಅಹಮದಾಬಾದ್‌ನಿಂದ ಹೊರಡುತ್ತದೆ

  • ಮಧ್ಯಾಹ್ನ 1:30: ಬೆಂಗಳೂರಿಗೆ ಆಗಮಿಸಲಿದೆ (ಎಚ್‌ಎಎಲ್ ವಿಮಾನ ನಿಲ್ದಾಣ)

  • 4-5 ಗಂಟೆಗೆ: ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಭೇಟಿ.

  • ಸಂಜೆ 5 ಗಂಟೆಗೆ: ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತೆರೆದ ಬಸ್‌ನಲ್ಲಿ ಮೆರವಣಿಗೆ

  • ಸಂಜೆ 6 ಗಂಟೆಗೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

‘ಇದು ನನ್ನ ಮನದ ಆಸೆ’: ಸಿಎಂ ಹುದ್ದೆ ತೊರೆದು ರಾಜ್ಯಸಭೆ ಪ್ರವೇಶ ಖಚಿತಪಡಿಸಿದ Nitish Kumar

'ರೇಪ್ ಮಾಡಿ ಅನ್ನೋನು ಯಾವ ಸೀಮೆ ನಾಯಕ'.. 'ಬಾಂಬ್ ಅಲ್ಲ.. ಇರಾನಿಯನ್ನರು Khamenei ಆಡಳಿತಕ್ಕೆ ಹೆಚ್ಚು ಭಯಪಡುತ್ತಾರೆ': ನಟಿ ಆಕ್ರೋಶ! VIDEO

ರಾಜ್ಯಸಭೆ ಚುನಾವಣೆಗೆ ಇಂದು ನಿತೀಶ್ ಕುಮಾರ್ ನಾಮಪತ್ರ ಸಲ್ಲಿಕೆ?: NDAಯಲ್ಲಿ ಮಹತ್ವದ ಬೆಳವಣಿಗೆ

T20 World Cup 2026: ಭಾರತದ ಸಂಭಾವ್ಯ ಪ್ಲೇಯಿಂಗ್ XI vs ಇಂಗ್ಲೆಂಡ್; ಕೋಚ್ ಗೌತಮ್ ಗಂಭೀರ್‌ಗೆ ಕಠಿಣ ಸವಾಲು

T20 ವಿಶ್ವಕಪ್ 2026: 8 ಸಿಕ್ಸರ್ 10 ಬೌಂಡರಿ.. ವೇಗದ ಶತಕ: ವಿಂಡೀಸ್ ದೈತ್ಯ chris gayle ದಾಖಲೆ ಮುರಿದ Finn Allen!

SCROLL FOR NEXT