ಆರ್'ಸಿಬಿ  
ರಾಜ್ಯ

IPL 2025 ಟ್ರೋಫಿ ಹೊತ್ತು 'RCB Champions' ಇಂದು ಬೆಂಗಳೂರಿಗೆ: ನಗರದಲ್ಲಿ Victory Parade; ಎಲ್ಲಿಂದ, ಯಾವಾಗ ಶುರು..?

ಗೆಲುವು ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಬೆಂಗಳೂರು: ಕೋಟ್ಯಾಂತರ ಅಭಿಮಾನಿಗಳ ಬೆಂಬಲ, ಹಾರೈಕೆ, ಪ್ರಾರ್ಥನೆ ಕೊನೆಗೂ ಫಲಿಸಿದೆ. 18ನೇ ಪ್ರಯತ್ನದಲ್ಲಿ ಆರ್'ಸಿಬಿ ತಂಡ ಟ್ರೋಫಿಗೆ ಮುತ್ತಿಟ್ಟಿದೆ. ಈ ಐತಿಹಾಸಿಕ ಗೆಲುವು ಬೆನ್ನಲ್ಲೇ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಗೆಲುವು ಬೆನ್ನಲ್ಲೇ ಆರ್​ಸಿಬಿ ಫ್ರಾಂಚೈಸಿ ತಮ್ಮ ನಿಷ್ಠಾವಂತ ಅಭಿಮಾನಿಗಳೊಂದಿಗೆ ಗೆಲುವಿನ ಸಂಭ್ರಮಾಚರಣೆ ಮಾಡಲು ವಿಜಯೋತ್ಸವದ ಮೆರವಣಿಗೆಯನ್ನು ಘೋಷಣೆ ಮಾಡಿದೆ.

ಇಂದು ಸಂಜೆ 5 ಗಂಟೆಗೆ ಬೆಂಗಳೂರಿನಲ್ಲಿ ಆರ್​ಸಿಬಿ ವಿಜಯೋತ್ಸವದ ಮೆರವಣಿಗೆ ನಡೆಯಲಿದೆ. ಈ ವಿಜಯೋತ್ಸವ ಮೆರವಣಿಗೆ ವಿಧಾನಸೌಧದಿಂದ ಆರಂಭವಾಗಿ ಎಂ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಮುಕ್ತಾಯವಾಗಲಿದೆ. ಆಟಗಾರರನ್ನು ಸ್ವಾಗತಿಸಲು ಬೆಂಗಳೂರು ಸಜ್ಜಾಗಿದ್ದು, ವಿಜಯೋತ್ಸವ ಮೆರವಣಿಗೆಯಲ್ಲಿ ಸಾವಿರಾರು ಜನರು ಭಾಗಿಯಾಗುವ ನಿರೀಕ್ಷೆಗಳಿವೆ.

ಈ ಕುರಿತು ಆರ್​ಸಿಬಿ ತಂಡದ ಎಕ್ಸ್​ ಖಾತೆಯಲ್ಲಿ ಮಾಹಿತಿ ಹಂಚಿಕೊಂಡಿದ್ದು, ಇದು ಆರ್‌ಸಿಬಿಯ ವಿಜಯೋತ್ಸವ ಪರೇಡ್. ಇದು ನಿಮಗಾಗಿ, 12th ಮ್ಯಾನ್ ಆರ್ಮಿ ಎಂದು ಅಭಿಮಾನಿಗಳನ್ನು ಉಲ್ಲೇಖಿಸಲಾಗಿದ್ದು, ಆರ್​ಸಿಬಿ ಸೋಲಿನಲ್ಲಿ ಮತ್ತು ಗೆಲುವಿನಲ್ಲೂ ಪ್ರತಿ ಭಾರಿ ಬೆಂಬಲಾವಗಿ ನಿಂತ ನಿಷ್ಠಾವಂತ ಅಭಿಮಾನಿಗಳೆ ಈ ಗೆಲುವಿನ ಕಿರೀಟ ನಿಮ್ಮದೇ ಎಂದು ಹೇಳಿದೆ.

ವಿಜಯೋತ್ಸವ ಮೆರವಣಿಗೆಯನ್ನು ಸ್ಟಾರ್ ಸ್ಪೋರ್ಟ್ಸ್ ನೆಟ್‌ವರ್ಕ್‌ನಲ್ಲಿ ಲೈವ್‌ ಆಗಿಯೂ ವೀಕ್ಷಿಸಬಹುದು. ಜೊತೆಗೆ, ಜಿಯೋ ಹಾಟ್‌ಸ್ಟಾರ್‌ನಲ್ಲಿ ಲೈವ್ ಸ್ಟ್ರೀಮಿಂಗ್ ಮೂಲಕವೂ ವೀಕ್ಷಿಸುವ ಅವಕಾಶವಿದೆ.

ವಿಜಯೋತ್ಸವ ಮೆರವಣಿಗೆ ವಿವರ ಇಂತಿದೆ...

  • ಬೆಳಿಗ್ಗೆ 10: ವಿರಾಟ್ ಮತ್ತು ತಂಡ ಅಹಮದಾಬಾದ್‌ನಿಂದ ಹೊರಡುತ್ತದೆ

  • ಮಧ್ಯಾಹ್ನ 1:30: ಬೆಂಗಳೂರಿಗೆ ಆಗಮಿಸಲಿದೆ (ಎಚ್‌ಎಎಲ್ ವಿಮಾನ ನಿಲ್ದಾಣ)

  • 4-5 ಗಂಟೆಗೆ: ವಿಧಾನಸೌಧದಲ್ಲಿ ಸಿಎಂ ಮತ್ತು ಡಿಸಿಎಂ ಭೇಟಿ.

  • ಸಂಜೆ 5 ಗಂಟೆಗೆ: ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತೆರೆದ ಬಸ್‌ನಲ್ಲಿ ಮೆರವಣಿಗೆ

  • ಸಂಜೆ 6 ಗಂಟೆಗೆ: ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಸಂಭ್ರಮಾಚರಣೆ

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜಮ್ಮುವಿನಾದ್ಯಂತ ಭಾರೀ ಮಳೆ: ಪ್ರವಾಹ, ಭೂಕುಸಿತದಿಂದ ಮೂವರು ಸಾವು; ಕೊಚ್ಚಿ ಹೋದ ಸೇತುವೆ; Video

Indian Navyಗೆ ಮತ್ತಷ್ಟು ಬಲ: INS Udaygiri, INS Himgiri ಯುದ್ಧನೌಕೆಗಳು ಸೇರ್ಪಡೆ!

ಬಿಹಾರ: ಇನ್ನು 40-50 ವರ್ಷ ಅಧಿಕಾರದಲ್ಲಿ ಇರ್ತೀವಿ ಅಂತಾ ಅಮಿತ್ ಶಾ ಗೆ ಹೇಗೆ ಗೊತ್ತು? ರಾಹುಲ್ ಗಾಂಧಿ

ಭ್ರಷ್ಟಾಚಾರ ಪ್ರಕರಣ: ಬಂಧಿತ ಶ್ರೀಲಂಕಾ ಮಾಜಿ ಅಧ್ಯಕ್ಷ ವಿಕ್ರಮಸಿಂಘೆಗೆ ಜಾಮೀನು

ನನ್ನ-ಕಾಂಗ್ರೆಸ್ ಮಧ್ಯೆ ಭಕ್ತ-ಭಗವಂತನ ಸಂಬಂಧ ಇದೆ; RSS ಗೀತೆ ಹಾಡಿದ್ದಕ್ಕೆ ನೋವಾಗಿದ್ದರೆ ಕ್ಷಮೆ ಕೇಳುತ್ತೇನೆ: ಡಿ.ಕೆ ಶಿವಕುಮಾರ್; Video

SCROLL FOR NEXT