ಪಿಸಿ ಮೋಹನ್ ಹಾಗೂ ಸಿಎಂ ಸಿದ್ದರಾಮಯ್ಯ 
ರಾಜ್ಯ

ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ RCB ಐತಿಹಾಸಿಕ ಗೆಲುವನ್ನು ಗೌರವಿಸಿ: ಸರ್ಕಾರಕ್ಕೆ ಸಂಸದ ಪಿ.ಸಿ ಮೋಹನ್ ಆಗ್ರಹ

ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಈ ಸಲ ಕಪ್ ನಮ್ದೇ ಎಂದು ಗೆದ್ದು ಬೀಗಿದೆ.

ಬೆಂಗಳೂರು: ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ ಐಪಿಎಲ್ 2025 ಟ್ರೋಫಿ ಗೆದ್ದು ಐತಿಹಾಸಿಕ ಗೆಲುವು ಸಾಧಿಸಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ಗೌರವ ಸಲ್ಲಿಸಿ ಎಂದು ರಾಜ್ಯ ಸರ್ಕಾರಕ್ಕೆ ಸಂಸದ ಪಿ.ಸಿ.ಮೋಹನ್ ಅವರು ಆಗ್ರಹಿಸಿದ್ದಾರೆ.

ಅಹಮದಾಬಾದ್ ನಲ್ಲಿ ನಡೆದ ಐಪಿಎಲ್ 2025ರ ಫೈನಲ್ ಪಂದ್ಯದಲ್ಲಿ ರಾಯಲ್ ಚಾಲೇಂಜರ್ಸ್ ಬೆಂಗಳೂರು ತಂಡ ಪಂಜಾಬ್ ಕಿಂಗ್ಸ್ ತಂಡವನ್ನು ಸೋಲಿಸುವ ಮೂಲಕ ಈ ಸಲ ಕಪ್ ನಮ್ದೇ ಎಂದು ಗೆದ್ದು ಬೀಗಿದೆ.

ತನ್ಮೂಲಕ ಮೊದಲ ಬಾರಿಗೆ ಬೆಂಗಳೂರು ತಂಡ ಐಪಿಎಲ್ ಕಪ್'ನ್ನು ಗೆದ್ದುಕೊಂಡಿದೆ. ಆರ್'ಸಿಬಿ 20 ಓವರ್ ಗಳಲ್ಲಿ 9 ವಿಕೆಟ್ ನಷ್ಟಕ್ಕೆ 190 ರನ್ ಗಳಿಸಿತು. ಪಂಜಾಬ್ ತಂಡ 184 ರನ್ ಗಳಿಸಿ ಸೋಲನ್ನು ಒಪ್ಪಿಕೊಂಡಿತು.

ಈ ಮೂಲಕ ಕಳೆದ 18 ವರ್ಷಗಳಿಂದ ಪ್ರಶಸ್ತಿ ಬರ ಎದುರಿಸುತ್ತಿದ್ದ ರಾಯಲ್ ಚಾಲೆಂಜರ್ಸ್ ಬೆಂಗಳೂರು (ಆರ್ ಸಿಬಿ) ತಂಡ 18 ಆವೃತ್ತಿಯ ಐಪಿಎಲ್ ನಲ್ಲಿ 6 ರನ್ ಗಳಿಂದ ಪಂಜಾಬ್ ಕಿಂಗ್ಸ್ ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿ ಗೆದ್ದುಕೊಂಡಿತು. ಇದರೊಂದಿಗೆ ಕೋಟಿ ಕೋಟಿ ಕನ್ನಡಿಗರ ಕನಸನ್ನು ನನಸಾಗಿಸಿದೆ.

ಆರ್'ಸಿಬಿ ಗೆಲವು ಹಿನ್ನೆಲೆಯಲ್ಲಿ ಸಾಮಾಜಿಕ ಜಾಲತಾಣ ಎಕ್ಸ್ ನಲ್ಲಿ ಪೋಸ್ಟ್ ಮಾಡಿರುವ ಪಿಸಿ.ಮೋಹನ್ ಅವರು, ಈ ಸಲಾ ಕಪ್ ನಮ್ದೆ ಇನ್ನು ಮುಂದೆ ಮೀಮ್ ಅಲ್ಲ, ಅದು ಈಗ ಇತಿಹಾಸ ಎಂದು ಹೇಳಿದ್ದಾರೆ.

ಮತ್ತೊಂದು ಪೋಸ್ಟ್ ನಲ್ಲಿ ಕರ್ನಾಟಕ ಸರ್ಕಾರ ಈಗ ಬೆಂಗಳೂರಿನ ಎಲ್ಲಾ ಗುಂಡಿಗಳನ್ನು ಮುಚ್ಚುವ ಮೂಲಕ ಆರ್‌ಸಿಬಿಯ ಐತಿಹಾಸಿಕ ಗೆಲುವನ್ನು ಗೌರವಿಸಬೇಕು ಎಂದು ಒತ್ತಾಯಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಜನಪ್ರಿಯ ಪ್ಯಾಲೆಸ್ತೀನ್ ನಾಯಕ ಮರ್ವಾನ್ ಬರ್ಘೌಟಿ ಬಿಡುಗಡೆಗೆ ಇಸ್ರೇಲ್ ನಕಾರ: 250 ಕೈದಿಗಳ ಪಟ್ಟಿ ಸಿದ್ಧ?

ಮಂಗಳೂರು: Muslim ಕ್ಯಾಬ್ ಚಾಲಕನಿಗೆ 'ಭಯೋತ್ಪಾದಕ' ಎಂದು ಕರೆದಿದ್ದ ಕೇರಳ ನಟನ ಬಂಧನ!

ಅಯೋಧ್ಯೆಯಲ್ಲಿ ಮತ್ತೊಂದು 'ನಿಗೂಢ' ಸ್ಫೋಟ: ಸಾವಿನ ಸಂಖ್ಯೆ 6ಕ್ಕೆ ಏರಿಕೆ, Video Viral

BMTC ಬಸ್ ಚಾಲಕನಿಗೆ ಫಿಡ್ಸ್, ಚಿನ್ನಸ್ವಾಮಿ ಕ್ರೀಡಾಂಗಣ ರಸ್ತೆಯಲ್ಲಿ ಸರಣಿ ಅಪಘಾತ

ಬೆಂಗಳೂರು: ರಾತ್ರಿಯಿಡೀ ಸುರಿದ ಮಳೆಯಿಂದ ಹಲವೆಡೆ ಜಲಾವೃತ, ಸಂಚಾರ ದಟ್ಟಣೆ, ಇಂದಿನ IMD ವರದಿ!

SCROLL FOR NEXT