ಆರ್ ಸಿಬಿ ತಂಡದ ವಿಜಯೋತ್ಸವ  
ರಾಜ್ಯ

ಭದ್ರತೆ ದೃಷ್ಟಿಯಿಂದ RCB ತಂಡದ ವಿಜಯೋತ್ಸವ ಮೆರವಣಿಗೆ ಇಲ್ಲ: ಗೃಹ ಸಚಿವ ಪರಮೇಶ್ವರ್

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ.

ಬೆಂಗಳೂರು: ಐಪಿಎಲ್ -2025ನ್ನು ಕಪ್ ಗೆದ್ದು ಬೀಗುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡ ಇನ್ನು ಕೆಲವೇ ಹೊತ್ತಿನಲ್ಲಿ ಬೆಂಗಳೂರಿಗೆ ಆಗಮಿಸಲಿದ್ದು ಅವರನ್ನು ಮುಖ್ಯಮಂತ್ರಿ ಸಿದ್ದರಾಮಯ್ಯ ವಿಧಾನಸೌಧದ ಮುಂಭಾಗ ಮೆಟ್ಟಿಲುಗಳ ಮೇಲೆ ಕಾರ್ಯಕ್ರಮದಲ್ಲಿ ಅಭಿನಂದಿಸಲಿದ್ದಾರೆ.

ಸಂಜೆ 6 ಗಂಟೆಗೆ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಅಭಿಮಾನಿಗಳೊಂದಿಗೆ ಆರ್ ಸಿಬಿ ಆಟಗಾರರ ಸಂಭ್ರಮಾಚರಣೆ ನಡೆಯಲಿದೆ. ಅದಕ್ಕೂ ಮೊದಲು ವಿಧಾನಸೌಧದಿಂದ ಚಿನ್ನಸ್ವಾಮಿ ಕ್ರೀಡಾಂಗಣದವರೆಗೆ ತಂಡದ ಆಟಗಾರರ ವಿಜಯೋತ್ಸವ ಮೆರವಣಿಗೆಯನ್ನು ನಡೆಸುವುದೆಂದು ತೀರ್ಮಾನವಾಗಿತ್ತು.

ಆದರೆ ವಿಜಯೋತ್ಸವ ಮೆರವಣಿಗೆ ಕೊನೆಕ್ಷಣದಲ್ಲಿ ರದ್ದಾಗಿದೆ. ತೆರೆದ ವಾಹನದಲ್ಲಿ ಆರ್​ಸಿಬಿ ಆಟಗಾರರ ಮೆರವಣಿಗೆ ಇಲ್ಲ. ಭದ್ರತೆ ದೃಷ್ಟಿಯಿಂದ ತೆರೆದ ವಾಹನದಲ್ಲಿ ಮೆರವಣಿಗೆ ಇಲ್ಲ ಎಂದು ಎಂದು ವಿಧಾನಸೌಧದಲ್ಲಿ ಗೃಹ ಸಚಿವ ಡಾ.ಜಿ.ಪರಮೇಶ್ವರ್ ಹೇಳಿದ್ದಾರೆ.

ಆರ್​ಸಿಬಿ ತಂಡದ ಆಟಗಾರರಿಗೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್​ ನೇತೃತ್ವದಲ್ಲಿ ವಿಧಾನಸೌಧದ ಗ್ರ್ಯಾಂಡ್ ಸ್ಟೆಪ್ಸ್ ಮೇಲೆ ಅಭಿನಂದನೆ ಸಲ್ಲಿಸಲಾಗುವುದು. ಈ ವೇಳೆ ಆರ್​ಸಿಬಿ ತಂಡದ ಪರವಾಗಿ ಒಬ್ಬರು ಮಾತನಾಡಲಿದ್ದಾರೆ. ನಂತರ ಎಲ್ಲಾ ಆಟಗಾರರು ಬಸ್​ನಲ್ಲೇ ವಿಧಾನಸೌಧದಿಂದ ಸ್ಟೇಡಿಯಂಗೆ ತೆರಳಲಿದ್ದಾರೆ ಎಂದು ತಿಳಿಸಿದರು.

ಸೀಮಿತ ಪಾರ್ಕಿಂಗ್ ಇರುವುದರಿಂದ ಸಾರ್ವಜನಿಕರು ಮೆಟ್ರೊ ಮತ್ತು ಇತರ ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಸೂಚಿಸಲಾಗಿದೆ.

ಸಂಭ್ರಮಾಚರಣೆ ವೇಳೆ ಅಭಿಮಾನಿಗಳು ಹೆಚ್ಚಿನ ಸಂಖ್ಯೆಯಲ್ಲಿ ಬರುತ್ತಾರೆ. ಹೀಗಾಗಿ ಆಟಗಾರರು ಮತ್ತು ಅಭಿಮಾನಿಗಳಿಗೆ ಯಾವುದೇ ತೊಂದರೆ ಆಗಬಾರದು ಎಂದು ಡಿಜಿ&ಐಜಿಪಿ ಸಲೀಂ ಹಾಗೂ ಸಂಚಾರಿ ಜಂಟಿ ಆಯುಕ್ತ ಎಂ ಎನ್ ಅನುಚೇತ್ ಗೆ ಸಿಎಂ ಸಿದ್ದರಾಮಯ್ಯ ಖಡಕ್ ಸೂಚನೆ ನೀಡಿದ್ದಾರೆ. ಮೊದಲೇ ಸವಾರರಿಗೆ ಬೇರೆ ಬೇರೆ ಮಾರ್ಗದ ವ್ಯವಸ್ಥೆ ಮಾಡಿ. ವಿಧಾನಸೌಧ, ಚಿನ್ನಸ್ವಾಮಿ ಕ್ರೀಡಾಂಗಣದ ಸುತ್ತ ಟ್ರಾಫಿಕ್ ನಿಭಾಯಿಸುವಂತೆ ತಿಳಿಸಿದ್ದಾರೆ.

ಶಾಲೆ-ಕಾಲೇಜುಗಳಿಗೆ ರಜೆ

ಬೆಂಗಳೂರು ನಗರ ಪೊಲೀಸ್ ಕಮಿಷನರ್​ ದಯಾನಂದ್ ಹೇಳಿಕೆ ನೀಡಿದ್ದು, ವಿಧಾನಸೌಧದ ಮುಂದೆ RCB ಟೀಂಗೆ ಸರ್ಕಾರದಿಂದ ಸನ್ಮಾನ, ಪ್ರೋತ್ಸಾಹ ನೀಡಲಾಗುತ್ತದೆ. ನಂತರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ಸಂಭ್ರಮಾಚರಣೆ ನಡೆಯಲಿದೆ. ಕ್ರೀಡಾಂಗಣಕ್ಕೆ ತೆರಳುವ ಮಾರ್ಗದಲ್ಲಿ ಸಂಚಾರ ದಟ್ಟವಾಗುವ ಸಾಧ್ಯತೆ ಇದ್ದು, ಮಧ್ಯಾಹ್ನದ ಬಳಿಕ ಶಾಲಾ-ಕಾಲೇಜಿಗೆ ರಜೆ ನೀಡಲು ಸೂಚಿಸಲಾಗಿದೆ ಎಂದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜುಲೈ 20 ರಿಂದ ಆಗಸ್ಟ್ 13 ರವರೆಗೆ ಸಂಸತ್ತಿನ ಮುಂಗಾರು ಅಧಿವೇಶನ ಎಂದ Kiren Rijiju, ವಿಪಕ್ಷಗಳ 'ಬಂಡಾಯ' ಪ್ರತಿಧ್ವನಿಸುವ ಸಾಧ್ಯತೆ!

ತುಮಕೂರು: SIR ಕರ್ತವ್ಯಕ್ಕೆ ತೆರಳುವಾಗ ಭೀಕರ ಅಪಘಾತ: ಚಿಕಿತ್ಸೆ ಫಲಿಸದೆ ಭುವನಾ ಸಾವು

70 ಲಕ್ಷ ಪಡೆದು ಉದ್ಯಮಿಗೆ ವಂಚನೆ; ರೇಪ್‌ ಕೇಸ್‌ ಬೆದರಿಕೆ, ಪೆನ್‌ಡ್ರೈವ್‌ ನಲ್ಲಿ ಅಶ್ಲೀಲ ವಿಡಿಯೋ ಪತ್ತೆ: ಮುಸ್ಲಿಂ ಮಹಿಳೆಯ ಬಂಧನ

ಬಲೂಚಿಗರಿಂದ ಆತ್ಮಾಹುತಿ ದಾಳಿ: 30ಕ್ಕೂ ಹೆಚ್ಚು Pakistan ಸೈನಿಕರು ಸಾವು, ಸ್ಫೋಟದ ವಿಡಿಯೋ ಬಿಡುಗಡೆ ಮಾಡಿದ BLA

2nd T20I: ಇಂಗ್ಲೆಂಡ್ ವಿರುದ್ಧ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ಕೆ, ಕೊನೆಗೂ Vaibhav Sooryavanshi ಪದಾರ್ಪಣೆ, ಸಚಿನ್ ದಾಖಲೆ ಧ್ವಂಸ!