ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದಾರೆ 
ರಾಜ್ಯ

RCB ಅಭಿಮಾನಿಗಳ ಕಾಲ್ತುಳಿತ: ಕೆಎಸ್‌ಸಿಎ, ಆರ್‌ಸಿಬಿ, ಪೊಲೀಸ್ ಆಯುಕ್ತರಿಗೆ ನೋಟಿಸ್

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಕಾಲ್ತುಳಿತ ಸಂಭವಿಸಿದ ಸ್ಥಳವನ್ನು ಜಿಲ್ಲಾಧಿಕಾರಿ ಜಗದೀಶ ಪರಿಶೀಲಿಸಿದರು.

ಬೆಂಗಳೂರು: ಮೊದಲ ಬಾರಿ IPL ಟ್ರೋಫಿ ಮುಡಿಗೇರಿಸಿಕೊಂಡ ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡ(RCB)ದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಕಾಲ್ತುಳಿತ ಸಂಭವಿಸಿ 11 ಜನ ಮೃತಪಟ್ಟಿದ್ದು, ಈ ಕುರಿತು ರಾಜ್ಯ ಸರ್ಕಾರ ಮ್ಯಾಜಿಸ್ಟೀರಿಯಲ್ ತನಿಖೆಗೆ ಆದೇಶಿಸಿದೆ.

ಕಾಲ್ತುಳಿತದ ಬಗ್ಗೆ ಮ್ಯಾಜಿಸ್ಟೀರಿಯಲ್ ತನಿಖೆಯ ನೇತೃತ್ವ ವಹಿಸಿಕೊಂಡಿರುವ ಬೆಂಗಳೂರು ನಗರ ಜಿಲ್ಲಾಧಿಕಾರಿ ಜಿ. ಜಗದೀಶ ಅವರು ಗುರುವಾರ ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ(ಕೆಎಸ್‌ಸಿಎ), ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ಮತ್ತು ಪೊಲೀಸ್ ಆಯುಕ್ತ ಬಿ. ದಯಾನಂದ ಅವರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನೀಡುವುದಾಗಿ ತಿಳಿಸಿದ್ದಾರೆ.

ಚಿನ್ನಸ್ವಾಮಿ ಕ್ರೀಡಾಂಗಣದ ಬಳಿ ಬುಧವಾರ ಕಾಲ್ತುಳಿತ ಸಂಭವಿಸಿದ ಸ್ಥಳವನ್ನು ಜಿಲ್ಲಾಧಿಕಾರಿ ಜಗದೀಶ ಪರಿಶೀಲಿಸಿದರು.

"ಇಂದು ನಾನು ಕೆಎಸ್‌ಸಿಎ(ಕರ್ನಾಟಕ ರಾಜ್ಯ ಕ್ರಿಕೆಟ್ ಸಂಸ್ಥೆ) ಕ್ರೀಡಾಂಗಣಕ್ಕೆ ಭೇಟಿ ನೀಡಿದ್ದೇನೆ. ಇಲ್ಲಿನ ಎಲ್ಲಾ ಘಟನೆಗಳನ್ನು ನಾನು ನೋಡಿದ್ದೇನೆ. ವಿಚಾರಣೆಗಾಗಿ ಕೆಲವು ಜನರಿಗೆ ನೋಟಿಸ್ ನೀಡುತ್ತೇನೆ. ನಾನು ವಿಚಾರಣೆ ನಡೆಸಿ 15 ದಿನಗಳಲ್ಲಿ ಸರ್ಕಾರಕ್ಕೆ ವರದಿ ನೀಡುತ್ತೇನೆ. ಕೆಎಸ್‌ಸಿಎ, ಆರ್‌ಸಿಬಿ ನಿರ್ವಹಣೆ, ಈವೆಂಟ್ ಮ್ಯಾನೇಜರ್ ಮತ್ತು ಪೊಲೀಸ್ ಆಯುಕ್ತರಿಗೆ ನೋಟಿಸ್ ನೀಡುತ್ತೇನೆ. ಜನರು ತಮ್ಮ ಸಾಕ್ಷ್ಯಗಳನ್ನು ನೀಡುವಂತೆ ನಾನು ಕೇಳುತ್ತೇನೆ" ಎಂದು ಜಗದೀಶ ಅವರು ಸುದ್ದಿಗಾರರಿಗೆ ತಿಳಿಸಿದರು.

ಬುಧವಾರ ನಡೆದ ಈ ಕಾರ್ಯಕ್ರಮಕ್ಕೆ ಯಾರಿಂದ ಅನುಮತಿ ಪಡೆಯಲಾಗಿದೆ? ಎಂಬ ವರದಿಗಾರರ ಪ್ರಶ್ನೆಗೆ ಉತ್ತರಿಸಿದ ಜಿಲ್ಲಾಧಿಕಾರಿ, ತಾವು ಅನುಮತಿ ನೀಡುವ ಅಧಿಕಾರ ಹೊಂದಿಲ್ಲ ಎಂದು ಸ್ಪಷ್ಟಪಡಿಸಿದರು. ಆದರೆ ಪೊಲೀಸ್ ಆಯುಕ್ತರಿಂದ ಅನುಮತಿ ಪಡೆಯಬೇಕಾಗಿದೆ ಎಂದು ಹೇಳಿದರು.

"ನಾನು ಈಗ ತನಿಖೆಯನ್ನು ಪ್ರಾರಂಭಿಸುತ್ತಿದ್ದೇನೆ. ಅದನ್ನು ಈಗಲೇ ಮುಗಿಸುವುದಿಲ್ಲ. ವಿಚಾರಣೆ ನಡೆಸಿ ಸರ್ಕಾರಕ್ಕೆ ವರದಿ ನೀಡುತ್ತೇನೆ" ಎಂದು ಅವರು ಹೇಳಿದರು.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಭಾರತದ AI ಸಾಮರ್ಥ್ಯವನ್ನು ಹೈಲೈಟ್ ಮಾಡಿದ ಗೂಗಲ್ ಸಿಇಒ ಸುಂದರ್ ಪಿಚ್ಚೈ: ಯುಎಸ್-ಭಾರತ ಸಹಯೋಗದ ಪ್ರಾಜೆಕ್ಟ್ ಘೋಷಣೆ! Video

T20 ವಿಶ್ವಕಪ್ 2026: ಶಿವಂ ದುಬೆ ಸ್ಫೋಟಕ ಅರ್ಧಶತಕ, ನೆದರ್ಲೆಂಡ್ ಗೆ ಗೆಲ್ಲಲು 194 ರನ್ ಗುರಿ ನೀಡಿದ ಭಾರತ

Video: ಲೈವ್ ಸ್ಟ್ರೀಮಿಂಗ್ ವೇಳೆ ಕೈ ಕೊಟ್ಟ Filter, ಸೌಂದರ್ಯ ಬಟಾ ಬಯಲು..: 1.4 ಲಕ್ಷ ಫಾಲೋವರ್ಸ್ ಕಳೆದುಕೊಂಡ Insta 'ಸುಂದರಿ'!

News wrap 18-02-2026| ವಿಧಾನಸೌಧದಲ್ಲಿ ಮಾಧ್ಯಮಗಳಿಗೆ ನಿರ್ಬಂಧ; ಫೆ.19 ರಂದು ಸಾರಿಗೆ ನೌಕರರ ಮುಷ್ಕರ; KSRTC, BMTC ಸೇವೆಗಳಲ್ಲಿ ವ್ಯತ್ಯಯ ಸಾಧ್ಯತೆ; ಬೆಂಗಳೂರಿನಲ್ಲಿ ಮತ್ತೆ ಕಸ ವಿಲೇವಾರಿ ಸಮಸ್ಯೆ; ಬಿಜೆಪಿ ವಿರುದ್ಧ DKS ಗರಂ

T20 World Cup 2026: ಸತತ 3ನೇ ಬಾರಿಗೆ ಡಕೌಟ್; ಕೋಚ್ ಗಂಭೀರ್ ದಾಖಲೆ ಸರಿಗಟ್ಟಿದ Abhishek Sharma!

SCROLL FOR NEXT