ಸ್ನೇಹಮಯಿ ಕೃಷ್ಣ 
ರಾಜ್ಯ

ಬೆಂಗಳೂರಿನ ಕಾಲ್ತುಳಿತ: ಸಿಎಂ ಸಿದ್ದರಾಮಯ್ಯ, ಡಿಸಿಎಂ ಡಿ.ಕೆ ಶಿವಕುಮಾರ್ ವಿರುದ್ಧ ಸ್ನೇಹಮಯಿ ಕೃಷ್ಣ ದೂರು

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ.

ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು(RCB) ತಂಡದ ಸಂಭ್ರಮಾಚರಣೆ ವೇಳೆ ಚಿನ್ನಸ್ವಾಮಿ ಕ್ರೀಡಾಂಗಣದ ಹೊರಗೆ ಸಂಭವಿಸಿದ ಕಾಲ್ತುಳಿತ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಮಾಜಿಕ ಕಾರ್ಯಕರ್ತ ಸ್ನೇಹಮಯಿ ಕೃಷ್ಣ ಅವರು ಶುಕ್ರವಾರ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಶಿವಕುಮಾರ್ ಮತ್ತು ಕರ್ನಾಟಕ ಕ್ರಿಕೆಟ್ ಅಸೋಸಿಯೇಷನ್ ​​ಪದಾಧಿಕಾರಿಗಳ ವಿರುದ್ಧ ದೂರು ದಾಖಲಿಸಿದ್ದು, ಈ ದುರಂತಕ್ಕೆ ಸರ್ಕಾರದ ಬೇಜವಾಬ್ದಾರಿಯೇ ಕಾರಣ ಎಂದು ಆರೋಪಿಸಿದ್ದಾರೆ.

ಸ್ನೇಹಮಯಿ ಕೃಷ್ಣ ಅವರು ಕಬ್ಬನ್ ಪಾರ್ಕ್ ಪೊಲೀಸ್ ಠಾಣೆಗೆ ಸಿಎಂ, ಡಿಸಿಎಂ ವಿರುದ್ಧ ದೂರು ನೀಡಿದ್ದು, "ಇದು ಸರ್ಕಾರದ ಬೇಜವಾಬ್ದಾರಿಯಿಂದ ಉಂಟಾದ ದುರಂತ. ಆರ್‌ಸಿಬಿ ರಾಜ್ಯವನ್ನು ಪ್ರತಿನಿಧಿಸುವ ತಂಡವಲ್ಲ. ಇದು ಮದ್ಯ ಮಾರಾಟಗಾರರು ಖರೀದಿಸಿದ ಖಾಸಗಿ ತಂಡ. ಹೀಗಾಗಿ ರಾಜ್ಯ ಸರ್ಕಾರ ಅವರನ್ನು ಆಹ್ವಾನಿಸಿ ಸನ್ಮಾನಿಸುವ ಅಗತ್ಯವಿರಲಿಲ್ಲ" ಎಂದು ಹೇಳಿದ್ದಾರೆ.

ಕಾನೂನು ಮತ್ತು ಸುರಕ್ಷತೆಯ ಬಗ್ಗೆ ಯಾವುದೇ ಪೂರ್ವ ಸಿದ್ಧತೆ ಇಲ್ಲದೆ ವಿಧಾನಸೌಧದ ಮುಂದೆ ತರಾತುರಿಯಲ್ಲಿ ಆಯೋಜಿಸಲಾದ ಕಾರ್ಯಕ್ರಮದಿಂದ ಈ ದುರಂತ ಸಂಭವಿಸಿದೆ. ಈ ದುರಂತಕ್ಕೆ ಸಿಎಂ ಮತ್ತು ಡಿಸಿಎಂ ಅವರೇ ಹೊಣೆ ಎಂದು ಅವರು ಆರೋಪಿಸಿದ್ದಾರೆ.

"ಈ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಬೇಕು. ಇದಕ್ಕೆ ಮುಖ್ಯಮಂತ್ರಿ ಮತ್ತು ಡಿಸಿಎಂ ಕಾರಣ. ಪೊಲೀಸರು ಯುಡಿಆರ್ (ಅಸ್ವಾಭಾವಿಕ ಸಾವಿನ ವರದಿ) ದಾಖಲಿಸಿದ್ದಾರೆ. ಇದು ಸರಿಯಾದ ಕ್ರಮವಲ್ಲ. ಭಾರತೀಯ ದಂಡ ಸಂಹಿತೆಯ 106 ನೇ ವಿಧಿಯ ಅಡಿಯಲ್ಲಿ ಪ್ರಕರಣ ದಾಖಲಿಸಬೇಕು" ಎಂದು ಅವರು ಮನವಿ ಮಾಡಿದ್ದಾರೆ.

ಇನ್ನು ವಿರೋಧ ಪಕ್ಷಗಳು ಸಹ ದುರಂತಕ್ಕೆ ರಾಜ್ಯ ಸರ್ಕಾರವೇ ನೇರ ಹೊಣೆ ಎಂದು ಟೀಕಿಸಿವೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

BDA ಯೋಜನಾ ಪ್ರಾಧಿಕಾರದ ಜವಾಬ್ದಾರಿ ಹಸ್ತಾಂತರ: GBA ವಿರೋಧಿಸುವವರು ಪಾಲಿಕೆ ಚುನಾವಣೆ ಬಹಿಷ್ಕರಿಸಲಿ; ಡಿಕೆಶಿ ಸವಾಲು

ಮೈಸೂರು ಪೊಲೀಸರಿಗೆ CM ಪುತ್ರನ ಕಾಟ: ಯಾವುದೇ ವರ್ಗಾವಣೆಯಾಗಬೇಕಾದರೂ ಯತೀಂದ್ರಗೆ ಟ್ಯಾಕ್ಸ್ ಕಟ್ಟಬೇಕು; ಪ್ರತಾಪ್ ಸಿಂಹ

SCROLL FOR NEXT