ಪ್ರಾತಿನಿಧಿಕ ಚಿತ್ರ 
ರಾಜ್ಯ

Covid-19: ರಾಜ್ಯದಲ್ಲಿ ಇಂದು ಕೊರೋನಾಗೆ ಇಬ್ಬರು ಬಲಿ, 57 ಮಂದಿಗೆ ಪಾಸಿಟಿವ್

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ಬೆಂಗಳೂರು: ರಾಜ್ಯದಲ್ಲಿ ಮತ್ತೆ ಕೊರೋನಾ ಆತಂಕ ಹೆಚ್ಚಾಗುತ್ತಿದ್ದು, ಕಳೆದ 24 ಗಂಟೆಯಲ್ಲಿ 57 ಮಂದಿಗೆ ಕೋವಿಡ್-19 ಪಾಸಿಟಿವ್ ದೃಢಪಟ್ಟಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 894ಕ್ಕೆ ಏರಿಕೆಯಾಗಿದೆ.

ಇನ್ನೂ ರಾಜ್ಯದಲ್ಲಿ ಇಂದು ಮಹಾಮಾರಿ ಕೊರೋನಾದಿಂದ ಇಬ್ಬರು ಮೃತಪಟ್ಟಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಪ್ರಕಟಣೆಯಲ್ಲಿ ತಿಳಿಸಿದೆ.

ರಾಜ್ಯದಲ್ಲಿ ಇಂದು ಒಟ್ಟು 542 ಜನರನ್ನು ಕೋವಿಡ್ ಪರೀಕ್ಷೆಗೆ ಒಳಪಡಿಸಲಾಗಿದ್ದು, ಆ ಪೈಕಿ 57 ಜನರಿಗೆ ಪಾಸಿಟಿವ್ ದೃಢಪಟ್ಟಿದೆ. ಒಟ್ಟು 519 ಸಕ್ರಿಯೆ ಪ್ರಕರಣಗಳಿದ್ದು, ಈ ಪೈಕಿ 356 ಮಂದಿ ಮನೆ ಆರೈಕೆಯಲ್ಲಿದ್ದಾರೆ ಮತ್ತು 13 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ತಿಳಿಸಿದೆ.

ಆರೋಗ್ಯ ಇಲಾಖೆ ಕೋವಿಡ್ ಪರಿಸ್ಥಿತಿಯ ನಿಗಾ ವಹಿಸಿದ್ದು, ಹತೋಟಿಗೆ ತರಲು ಕ್ರಮಗಳನ್ನ ಕೈಗೊಳ್ಳುತ್ತಿದೆ. ಆತಂಕ ಪಡುವ ಪರಿಸ್ಥಿತಿ ಬಂದಿಲ್ಲವಾದರೂ, ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸಬೇಕು ಎಂದು ಸರ್ಕಾರ ಮನವಿ ಮಾಡಿದೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಇಬ್ಬರು ಕೇಂದ್ರ ಸಚಿವರು ಸೇರಿದಂತೆ 75 ಸದಸ್ಯರ GBA ಸೆ. 2 ರಿಂದ ಅಸ್ತಿತ್ವಕ್ಕೆ: ಯತೀಂದ್ರ ಸಿದ್ದರಾಮಯ್ಯಗೂ ಸ್ಥಾನ!

ಫೈಟರ್ ಜೆಟ್‌ ಇಂಜಿನ್ ಖರೀದಿ: ಅಮೆರಿಕಾದ GE ಸಂಸ್ಥೆಯೊಂದಿಗೆ $1 ಬಿಲಿಯನ್ ಮೊತ್ತದ ಒಪ್ಪಂದಕ್ಕೆ ಭಾರತ ಸಿದ್ಧತೆ!

ಸುಂಕ ಸಮರ: Trump 4 ಬಾರಿ ಕರೆ ಮಾಡಿದರೂ ಉತ್ತರಿಸದ PM Modi; ಅಮೆರಿಕ ನಿಯೋಗಕ್ಕೂ No Entry!

'ನನ್ನ ಕುರ್ಚಿ'ಗೆ ಪ್ರಧಾನಿ ಮೋದಿ ಗೌರವ ನೀಡಬೇಕು: ಪಶ್ಚಿಮ ಬಂಗಾಳ ಸಿಎಂ ಮಮತಾ ಬ್ಯಾನರ್ಜಿ ಕಿಡಿ!

ಸುಪ್ರೀಂ ಕೋರ್ಟ್‌ಗೆ ನ್ಯಾ. ಪಾಂಚೋಲಿ ಹೆಸರು ಶಿಫಾರಸು: ನ್ಯಾ. ಬಿ. ವಿ. ನಾಗರತ್ನ ತೀವ್ರ ಅಸಮಾಧಾನ!

SCROLL FOR NEXT