ಸೂಟ್ ಕೇಸ್ ಶವಪತ್ತೆ ಪ್ರಕರಣ 
ರಾಜ್ಯ

ಸೂಟ್​​ಕೇಸ್​ನಲ್ಲಿ ಶವ ಪತ್ತೆ ಕೇಸ್ ಗೆ ಟ್ವಿಸ್ಟ್: S** ಗೆ ಸಹಕರಿಸಲಿಲ್ಲ ಅಂತ ಹತ್ಯೆ; ದುರುಳರ ಕೃತ್ಯ CCTVಯಲ್ಲಿ ಸೆರೆ!

ಸೂಟ್​ಕೇಸ್​ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಕೊನೆಗೂ ಭೇದಿಸಿದ್ದು, ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ...

ಬೆಂಗಳೂರು: ಬೆಂಗಳೂರಿನ ಹೊರವಲಯದಲ್ಲಿ ಸೂಟ್ ಕೇಸ್ ನಲ್ಲಿ ಪತ್ತೆಯಾಗಿದ್ದ ಆಪ್ರಾಪ್ತೆ ಶವ ಪತ್ತೆ ಪ್ರಕರಣವನ್ನು ಕೊನೆಗೂ ಪೊಲೀಸರು ಭೇದಿಸಿದ್ದು, ಲೈಂಗಿಕ ಕ್ರಿಯೆಗೆ ಸಹಕರಿಸಲಿಲ್ಲ ಎಂದು ದುರುಳರು ಆಕೆಯನ್ನು ಕೊಂದು ಹಾಕಿದ್ದಾರೆ ಎಂದು ಹೇಳಲಾಗಿದೆ.

ಬೆಂಗಳೂರಿನ ಆನೇಕಲ್ (Anekal) ತಾಲೂಕಿನ ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಸೂಟ್​ಕೇಸ್​ನಲ್ಲಿ ಪತ್ತೆಯಾಗಿದ್ದ ಅಪರಿಚಿತ ಬಾಲಕಿಯ ಶವ ಪ್ರಕರಣವನ್ನು ಸೂರ್ಯನಗರ ಠಾಣಾ ಪೊಲೀಸರು ಕೊನೆಗೂ ಭೇದಿಸಿದ್ದು, ಆರೋಪಿಗಳು ಬಾಲಕಿಯ ಮೇಲೆ ಅತ್ಯಾಚಾರ ಎಸಗಿ, ಬಳಿಕ ಕೊಲೆ ಮಾಡಿ ಶವವನ್ನು ಸೂಟಕೇಸ್​ನಲ್ಲಿ ಹಾಕಿ ರೈಲ್ವೆ ಹಳಿ ಪಕ್ಕದಲ್ಲಿ ಎಸದು ಹೋಗಿದ್ದಾರೆ ಎಂಬುದು ಪೊಲೀಸ್​ ತನಿಖೆಯಲ್ಲಿ ಬಹಿರಂಗವಾಗಿದೆ.

ಕಳೆದ ಮೇ ತಿಂಗಳ 21ರಂದು ಬೆಂಗಳೂರಿನ ಹೊರವಲಯದಲ್ಲಿರುವ ಹಳೆಯ ಚಂದಾಪುರ ರೈಲ್ವೆ ಸೇತುವೆಯ ಬಳಿ ಅನುಮಾನಾಸ್ಪದ ಸೂಟ್ ಕೇಸ್ ಪತ್ತೆಯಾಗಿತ್ತು. ಸ್ಥಳೀಯರು ಅದನ್ನು ತೆಗೆದು ನೋಡಿದಾಗ ಅದರಲ್ಲಿ ಯುವತಿಯ ಶವ ಪತ್ತೆಯಾಗಿತ್ತು. ಸ್ಥಳೀಯರು ಆರಂಭದಲ್ಲಿ ಇದನ್ನು ರೈಲಿನಿಂದ ತಂದು ಬಿಸಾಡಿರಬಹುದು ಎಂದು ಭಾವಿಸಿದ್ದರು. ಆದರೆ ಈ ಪ್ರಕರಣದ ಬೆನ್ನು ಹತ್ತಿದ್ದ ಸೂರ್ಯನಗರ ಪೊಲೀಸ್ ಠಾಣಾ ಅಧಿಕಾರಿಗಳು ಕೊನೆಗೂ ಪ್ರಕರಣ ಭೇದಿಸಿದ್ದಾರೆ.

ಈ ಪ್ರಕರಣದ ಪ್ರಮುಖ ಆರೋಪಿಗಳಾದ ಬಿಹಾರ ಮೂಲದ ಅಶಿಕ್ ಕುಮಾರ್ (22) ಮುಖೇಶ್ ರಾಜಬನ್ಶಿ (35), ಇಂದುದೇವಿ (32) ರಾಜರಾಮ್ ಕುಮಾರ್ (18) ಪಿಂಟು ಕುಮಾರ್ (18), ಕಾಲು ಕುಮಾರ್(17) ರಾಜು ಕುಮಾರ್(17) ಎಂಬುವವರನ್ನು ಪೊಲೀಸರು ಬಂಧಿಸಿದ್ದಾರೆ. ಆರೋಪಿಗಳು ಮೇ 20ರಂದು ಬಾಲಕಿ ಮೇಲೆ ಅತ್ಯಾಚಾರವೆಸಗಿ ಕೊಲೆ ಮಾಡಿದ್ದರು ಎಂದು ಪೊಲೀಸ್ ಮೂಲಗಳಿಂದ ತಿಳಿದುಬಂದಿದೆ.

ಆಗಿದ್ದೇನು?

ಪ್ರಕರಣ ಮುಖ್ಯ ಆರೋಪಿ ಅಂದರೆ ಎ1 ಆಶೀಕ್ ಕುಮಾರ್ ಖಾಸಗಿ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದು, ಕಾಚನಾಯಕನಹಳ್ಳಿಯಲ್ಲಿ ವಾಸವಾಗಿದ್ದನು. ಆಶೀಕ್ ಕುಮಾರ್ ಮೇ 13ರಂದು ಬೆಂಗಳೂರಿನಿಂದ ಬಿಹಾರಕ್ಕೆ ತೆರಳಿದ್ದನು. ಎರಡೇ ದಿನದಲ್ಲಿ ಪಕ್ಕದ ಗ್ರಾಮದ ಬಾಲಕಿಯನ್ನು ಬಲೆಗೆ ಕೆಡವಿಕೊಂಡಿದ್ದನು. ಮೇ 15ರಂದು ಆಶೀಕ್ ಕುಮಾರ್ ಬಾಲಕಿಯನ್ನು ಕರೆದುಕೊಂಡು ಬಿಹಾರದಿಂದ ಬೆಂಗಳೂರಿಗೆ ಹೊರಟಿದ್ದಾನೆ. ಮೇ 18ರಂದು ಇಬ್ಬರೂ ಬೆಂಗಳೂರಿಗೆ ತಲುಪಿದ್ದಾರೆ. ಅಂದು ಬಾಲಕಿ ಜೊತೆ ಆಶೀಕ್ ಕುಮಾರ್ ಬೆಂಗಳೂರು ನಗರ ಸುತ್ತಾಡಿದ್ದಾನೆ. ಆರೋಪಿ ಆಶೀಕ್ ಕುಮಾರ್ ಅದೇ ದಿನ ರಾತ್ರಿ ಸಂಬಂಧಿ ಮುಖೇಶ್ ಮನೆಗೆ ಬಾಲಕಿಯನ್ನು ಕರೆದುಕೊಂಡು ಹೋಗಿದ್ದಾನೆ.

ಲೈಂಗಿಕ ಕ್ರಿಯೆಗೆ ಸಹಕರಿಸದ ಹಿನ್ನೆಲೆಯಲ್ಲಿ ಜಗಳ, ಕೊಲೆ

ಮರುದಿನ ಬಾಲಕಿ ಲೈಂಗಿಕ ಕ್ರಿಯೆಗೆ ಸಹಕರಿಸದ ಹಿನ್ನೆಲೆಯಲ್ಲಿ ಆಕೆಯ ಜೊತೆಗೆ ಜಗಳವಾಡಿದ್ದಾನೆ. ನಂತರ, ಆಶೀಕ್ ಕುಮಾರ್ ಬಿಯರ್ ಬಾಟಲ್​ನಿಂದ ಯುವತಿಯ ಖಾಸಗಿ ಅಂಗಕ್ಕೆ ಹಲ್ಲೆ ಮಾಡಿದ್ದಾನೆ. ಬಳಿಕ ರಾಡ್​ನಿಂದಲೂ ಬಾಲಕಿ ಮೇಲೆ ಹಲ್ಲೆ ಮಾಡಿದ್ದಾನೆ. ಹಲ್ಲೆ ಬಳಿಕ ಆಶೀಕ್ ಕುಮಾರ್ ಬಾಲಕಿಗೆ ಉಸಿರುಗಟ್ಟಿಸಿ ಕೊಲೆ ಮಾಡಿದ್ದಾನೆ. ಬಾಲಕಿಯನ್ನು ಕೊಲೆ ಮಾಡಿದ ಬಳಿಕ ಆರೋಪಿ ಆಶೀಕ್ ಕುಮಾರ್ ಸಂಬಂಧಿಗಳಿಗೆ ವಿಚಾರ ತಿಳಿಸಿದ್ದಾನೆ.

ಶವ ಸೂಟ್ ಕೇಸ್ ಗೆ ತುಂಬಿದ ಸ್ನೇಹಿತರು

ಕೊಲೆ ಬಳಿಕ ಆರೋಪಿಗಳು ಬಾಲಕಿಯ ಶವವನ್ನು ಸೂಟ್​ಕೇಸ್​ನಲ್ಲಿ ಹಾಕಿದ್ದಾರೆ. ಎಲ್ಲರೂ ಸೇರಿಕೊಂಡು ಕ್ಯಾಬ್​ನಲ್ಲಿ ಬಾಲಕಿಯ ಶವ ತೆಗೆದುಕೊಂಡು ಹಳೇ ಚಂದಾಪುರ ರೈಲ್ವೆ ಬ್ರಿಡ್ಜ್ ಬಳಿ ಬಂದಿದ್ದಾರೆ. ರೈಲು ಹಳಿಯಿಂದ ಕೆಳಕ್ಕೆ ಸೂಟ್​ಕೇಸ್ ಎಸೆದು ಎಲ್ಲ ಏಳೂ ಆರೋಪಿಗಳು ಬಿಹಾರಕ್ಕೆ ಪರಾರಿಯಾಗಿದ್ದರು.

ಸಿಸಿಟಿವಿಯಲ್ಲಿ ದುರುಳರ ಕೃತ್ಯ ಸೆರೆ

ಸೂಟ್​ಕೇಸ್​ನಲ್ಲಿ ಬಾಲಕಿ ಶವ ಸಿಕ್ಕ ಪ್ರಕರಣವನ್ನು ಸೂರ್ಯನಗರ ಠಾಣೆ ಪೊಲೀಸರು ಪೋಕ್ಸೋ ಅಡಿ ಕೇಸ್​ ದಾಖಲಿಸಿಕೊಂಡು ತನಿಖೆ ನಡೆಸಿದ್ದರು. ಆರೋಪಿಗಳ ಚಲನವಲನ ಸಿಸಿ ಕ್ಯಾಮೆರಾಗಳಲ್ಲಿ ಸೆರೆಯಾಗಿತ್ತು. ಆರೋಪಿಗಳು ಸೂಟ್​ಕೇಸ್​​ನಲ್ಲಿ ಶವ ಸಾಗಿಸುವ ದೃಶ್ಯಗಳು ಕೂಡ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿವೆ. ಸಿಸಿಟಿವಿ ದೃಶ್ಯ ಆಧರಿಸಿ, ಆರೋಪಿಗಳ ಜಾಡು ಹಿಡಿದು ಹೊರಟ ಪೊಲೀಸರು, ಬಿಹಾರದಲ್ಲಿ ಏಳೂ ಮಂದಿ ಆರೋಪಿಗಳನ್ನು ಬಂಧಿಸಿದ್ದಾರೆ. ಸೂರ್ಯನಗರ ಠಾಣೆಯ ಪೊಲೀಸರಿಂದ ತನಿಖೆ ಮುಂದುವರೆದಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

ಜಮ್ಮು-ಕಾಶ್ಮೀರ: ಮಸೂದ್ ಅಜರ್ ಆಡಿಯೋ ಬೆನ್ನಲ್ಲೇ ಭಾರತದ ಗಡಿಗೆ ನುಗ್ಗಲು 'ಪಾಕ್ ಡ್ರೋನ್' ಗಳು ಯತ್ನ!

1st ODI: ಕೊಹ್ಲಿ ಅರ್ಧಶತಕ: ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಭಾರತಕ್ಕೆ ರೋಚಕ ಜಯ!

ಕಾಂಗ್ರೆಸ್ ಶಾಸಕಿ ನಯನಾ ಮೋಟಮ್ಮಗೆ ಅಶ್ಲೀಲ ಕಾಮೆಂಟ್! ಕಿಡಿಗೇಡಿಗಳಿಗೆ ಕೊಟ್ಟ ವಾರ್ನಿಂಗ್ ಏನು?

ಮಿಲಿಟರಿ ದಾಳಿಗೆ ಟ್ರಂಪ್, ನೆತನ್ಯಾಹು ಸಜ್ಜು: ತಿರುಗೇಟು ನೀಡಿದ ಇರಾನ್! ಹೇಳಿದ್ದೇನು ಗೊತ್ತಾ?

ಪಾಕಿಸ್ತಾನದಲ್ಲಿ 'ಗುಂಡಿಟ್ಟು' ಹಿಂದೂ ರೈತನ ಕಗ್ಗೊಲೆ! ಹೈದರಾಬಾದಿನಲ್ಲಿ ಆರೋಪಿಗಳ ಬಂಧನ

SCROLL FOR NEXT