ಸುಹಾಸ್ ಶೆಟ್ಟಿ 
ರಾಜ್ಯ

ಹಿಂದೂ ಕಾರ್ಯಕರ್ತ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣ: ತನಿಖೆಯನ್ನು NIA ಗೆ ವಹಿಸಿದ ಗೃಹ ಸಚಿವಾಲಯ!

ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ.

ಮಂಗಳೂರಿನಲ್ಲಿ ನಡೆದ ಹಿಂದೂ ಕಾರ್ಯಕರ್ತ ಮತ್ತು ಮೊಹಮ್ಮದ್ ಫಾಜಿಲ್ ಹತ್ಯೆಯ ಆರೋಪಿ ಸುಹಾಸ್ ಶೆಟ್ಟಿ ಹತ್ಯೆ ಪ್ರಕರಣದ ತನಿಖೆಯನ್ನು ರಾಷ್ಟ್ರೀಯ ತನಿಖಾ ಸಂಸ್ಥೆ (NIA) ನಡೆಸಲಿದೆ. ಕೇಂದ್ರ ಗೃಹ ಸಚಿವಾಲಯ ಭಾನುವಾರ ಈ ಸಂಬಂಧ ಆದೇಶ ಹೊರಡಿಸಿದೆ. ಸುಮಾರು ಒಂದು ತಿಂಗಳ ಹಿಂದೆ ನಡೆದ ಈ ಕೊಲೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಉದ್ವಿಗ್ನತೆಯ ವಾತಾವರಣವನ್ನು ಸೃಷ್ಟಿಸಿತ್ತು. ಪ್ರಕರಣದಲ್ಲಿ ಪ್ರಮುಖ ಆರೋಪಿ ಸೇರಿದಂತೆ ಎಂಟು ಜನರನ್ನು ಇಲ್ಲಿಯವರೆಗೆ ಬಂಧಿಸಲಾಗಿದೆ.

2025ರ ಆರಂಭದಲ್ಲಿ ಮಂಗಳೂರಿನಲ್ಲಿ 42 ವರ್ಷದ ಸುಹಾಸ್ ಶೆಟ್ಟಿಯನ್ನು ಬರ್ಬರವಾಗಿ ಹತ್ಯೆ ಮಾಡಲಾಯಿತು. ಈ ಘಟನೆಯ ನಂತರ, ಇಡೀ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಪರಿಸ್ಥಿತಿ ಉದ್ವಿಗ್ನವಾಯಿತು. ವಿಶ್ವ ಹಿಂದೂ ಪರಿಷತ್ (VHP) ಮತ್ತು ಇತರ ಹಿಂದೂ ಸಂಘಟನೆಗಳು ಮೇ 3 ರಂದು ಜಿಲ್ಲಾದ್ಯಂತ ಬಂದ್‌ಗೆ ಕರೆ ನೀಡಿದ್ದವು. ಪ್ರತಿಭಟನೆ ವೇಳೆ ಪ್ರಕರಣವನ್ನು ಎನ್ಐಎಗೆ ವಹಿಸಬೇಕು ಎಂದು ಪಟ್ಟುಹಿಡಿದಿದ್ದವು.

ಸುಹಾಸ್ ಶೆಟ್ಟಿ ಹತ್ಯೆಗೆ ಸಂಬಂಧಿಸಿದಂತೆ ರಾಜಕೀಯ ಮಟ್ಟದಲ್ಲಿಯೂ ತೀವ್ರ ಪ್ರತಿಕ್ರಿಯೆ ವ್ಯಕ್ತವಾಗಿತ್ತು. ದಕ್ಷಿಣ ಕನ್ನಡದ ಬಿಜೆಪಿ ಸಂಸದ ಮತ್ತು ಪಕ್ಷದ ರಾಜ್ಯ ಕಾರ್ಯದರ್ಶಿ ಬ್ರಿಜೇಶ್ ಚೌಟ ಅವರು ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರಿಗೆ ಪತ್ರ ಬರೆದು ಪ್ರಕರಣದ ತನಿಖೆಯನ್ನು NIAಗೆ ವಹಿಸಬೇಕೆಂದು ಒತ್ತಾಯಿಸಿದ್ದರು. ನಿಷೇಧಿತ ಸಂಘಟನೆಯಾದ ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ (PFI) ಕಾರ್ಯಕರ್ತರು ಈ ಕೊಲೆಯಲ್ಲಿ ಭಾಗಿಯಾಗಿರಬಹುದು ಎಂದು ಅವರು ತಮ್ಮ ಪತ್ರದಲ್ಲಿ ಆತಂಕ ವ್ಯಕ್ತಪಡಿಸಿದ್ದರು.

ಈ ಘಟನೆಯನ್ನು ಪ್ರತ್ಯೇಕ ಅಪರಾಧ ಘಟನೆಯಾಗಿ ನೋಡಲಾಗುವುದಿಲ್ಲ ಎಂದು ಚೌಟ ಬರೆದಿದ್ದರು. ಇದು ಕರಾವಳಿ ಕರ್ನಾಟಕದಲ್ಲಿ ಹರಡುತ್ತಿರುವ ಇಸ್ಲಾಮಿಕ್ ಮೂಲಭೂತವಾದ ಮತ್ತು ರಾಷ್ಟ್ರವಿರೋಧಿ ಚಟುವಟಿಕೆಗಳ ಒಂದು ಭಾಗವಾಗಿದೆ. ಇದಕ್ಕೂ ಮೊದಲು, ಬಿಜೆಪಿ ಯುವ ನಾಯಕ ಪ್ರವೀಣ್ ನೆಟ್ಟಾರು ಅವರನ್ನು ಅದೇ ಪ್ರದೇಶದಲ್ಲಿ PFI ಕಾರ್ಯಕರ್ತರು ಹತ್ಯೆ ಮಾಡಿದ್ದರು.

ಸುಹಾಸ್ ಶೆಟ್ಟಿ ಕ್ರಿಮಿನಲ್ ದಾಖಲೆಯನ್ನು ಹೊಂದಿದ್ದಾರೆ. ಅವರ ವಿರುದ್ಧ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಒಂದು ಮತ್ತು ಮಂಗಳೂರು ನಗರದಲ್ಲಿ ನಾಲ್ಕು ಕ್ರಿಮಿನಲ್ ಪ್ರಕರಣಗಳು ದಾಖಲಾಗಿವೆ. ಈತ ಈ ಹಿಂದೆ ಬಜರಂಗದಳದೊಂದಿಗೆ ಸಂಬಂಧ ಹೊಂದಿದ್ದ ಮತ್ತು 23 ವರ್ಷದ ಮುಸ್ಲಿಂ ಯುವಕ ಮೊಹಮ್ಮದ್ ಫಾಜಿಲ್ ಹತ್ಯೆಯಲ್ಲಿ ಆತನ ಹೆಸರು ಕೇಳಿಬಂದಿತ್ತು. ಬಿಜೆಪಿ ನಾಯಕ ಪ್ರವೀಣ್ ನೆಟ್ಟಾರು ಹತ್ಯೆಯಾದ ಎರಡು ದಿನಗಳ ನಂತರ ಜುಲೈ 2022ರಲ್ಲಿ ಈ ಕೊಲೆ ನಡೆದಿತ್ತು. ಫಾಜಿಲ್ ಹತ್ಯೆಯು ಕೋಮು ದ್ವೇಷದಿಂದ ಪ್ರೇರಿತವಾಗಿದೆ ಎಂದು ಹೇಳಲಾಗಿದ್ದು, ಶೆಟ್ಟಿಯನ್ನು ಈ ಪ್ರಕರಣದಲ್ಲಿ ಶಂಕಿತನನ್ನಾಗಿ ಪರಿಗಣಿಸಲಾಗಿದೆ.

Follow KannadaPrabha channel on WhatsApp

  

Subscribe to KannadaPrabha YouTube Channel and watch Videos

   

Download the KannadaPrabha News app to follow the latest news updates

  

Subscribe and Receive exclusive content and updates on your favorite topics

ಭಾರತ-ರಷ್ಯಾ ಆರ್ಥಿಕ ಬಾಂಧವ್ಯಕ್ಕೆ ಹೊಸ ಬಲ; ಪುಟಿನ್ ಭೇಟಿಯಾದ ಜೈಶಂಕರ್, ಪರಮಾಣು ಸಹಕಾರ ಸೇರಿ ಹಲವು ಅಂಶಗಳ ಕುರಿತು ಚರ್ಚೆ!

3 ದಿನ ಮೊದಲೇ ಮುಂಗಾರು ಅಧಿವೇಶನಕ್ಕೆ ತೆರೆ: 'ವಿರೋಧ ಪಕ್ಷಕ್ಕೆ ಹೆದರಿ ಅಧಿವೇಶನ ರದ್ದು'; ರಾಜ್ಯಪಾಲರಿಗೆ BJP ದೂರು!

ಬಿಜೆಪಿ MLC ಎನ್. ರವಿಕುಮಾರ್‌ ವಿರುದ್ಧ ಜಾಮೀನು ರಹಿತ ಬಂಧನ ವಾರಂಟ್

Cricket: ಪಂತ್‌ರಂತೆ ಆಡಲು ಪ್ರಯತ್ನಿಸಲ್ಲ, ಅವರ ಜೊತೆ ಆಡೋದು ದೊಡ್ಡ ಅನುಭವ: ಫಿಟ್ನೆಸ್ ಅಪ್ಡೇಟ್ ಕೊಟ್ಟ Dhruv Jurel

ಜೈ ಜವಾನ್, ಜೈ ಕಿಸಾನ್: ಐತಿಹಾಸಿಕ ಶತಕದ ಬಳಿಕ ಹೊಸ ಟ್ಯಾಟೂ ರಿವೀಲ್ ಮಾಡಿದ Dhruv Jurel