ಮಲ್ಲೇಶ್ವರಂ 
ರಾಜ್ಯ

ಖಾಸಗಿ ಕಾರ್ಯಕ್ರಮಕ್ಕಾಗಿ ರಸ್ತೆ ತಡೆ: ಮಲ್ಲೇಶ್ವರಂ ನಿವಾಸಿಗಳಿಂದ ಪ್ರತಿಭಟನೆ

ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಎದುರಿನ ರಸ್ತೆಯಲ್ಲಿ ಅತಿಥಿಗಳಿಗೆ ಊಟ ಬಡಿಸಲು ಪೆಂಡಾಲ್ ಹಾಕಲಾಗಿತ್ತು. ಕುಟುಂಬವು ಸಾರ್ವಜನಿಕ ರಸ್ತೆಯ 50 ಮೀಟರ್‌ಗಿಂತಲೂ ಹೆಚ್ಚು ಸ್ಥಳವನ್ನು ಬಳಸಿಕೊಂಡಿತ್ತು.

ಬೆಂಗಳೂರು: ಗೃಹ ಪ್ರವೇಶಕ್ಕಾಗಿ ಕುಟುಂಬವೊಂದು ಅಧಿಕಾರಿಗಳಿಂದ ಅನುಮತಿ ಪಡೆಯದೆ ಮಲ್ಲೇಶ್ವರಂ 4ನೇ ಮುಖ್ಯರಸ್ತೆ, 13ನೇ ಕ್ರಾಸ್‌ ರಸ್ತೆಯನ್ನು ತಡೆಹಿಡಿದಿದ್ದು, ಇದರ ಪರಿಣಾಮ ಸುತ್ತಮುತ್ತಲಿನ ರಸ್ತೆಗಳಲ್ಲಿ ಶನಿವಾರ ಸಂಚಾರ ದಟ್ಟಣೆ ಎದುರಾಗಿತ್ತು.

ಸರ್ಕಾರಿ ಬಾಲಕಿಯರ ಪಿಯು ಕಾಲೇಜಿನ ಎದುರಿನ ರಸ್ತೆಯಲ್ಲಿ ಅತಿಥಿಗಳಿಗೆ ಊಟ ಬಡಿಸಲು ಪೆಂಡಾಲ್ ಹಾಕಲಾಗಿತ್ತು. ಕುಟುಂಬವು ಸಾರ್ವಜನಿಕ ರಸ್ತೆಯ 50 ಮೀಟರ್‌ಗಿಂತಲೂ ಹೆಚ್ಚು ಸ್ಥಳವನ್ನು ಬಳಸಿಕೊಂಡಿತ್ತು.

ರಸ್ತೆಯ ಎರಡೂ ಬದಿಗಳಲ್ಲಿ ವಾಹನಗಳು ನಿಂತಿದ್ದರಿಂದ ಆ ಪ್ರದೇಶದಲ್ಲಿ ಸಂಚಾರಕ್ಕೆ ತೀವ್ರ ತೊಂದರೆಯಾಯಿತು. ಅನಧಿಕೃತವಾಗಿ ರಸ್ತೆ ಮುಚ್ಚಿದ್ದಕ್ಕೆ ಇತರ ನಿವಾಸಿಗಳು ಆಕ್ಷೇಪ ವ್ಯಕ್ತಪಡಿಸಿದರು. ಅಲ್ಲದೆ, ಸಮಾರಂಭದ ಆಯೋಜಕರು ಅನುಮತಿ ಪಡೆದಿದ್ದಾರೆಯೇ ಎಂದು ಪ್ರಶ್ನಿಸಿದರು. ಈ ವೇಳೆ ಸ್ಥಳದಲ್ಲಿ ಕೆಲ ಕಾಲ ಅಹಿತಕರ ವಾತಾವರಣ ನಿರ್ಮಾಣವಾಗಿತ್ತು.

ಸ್ಥಳೀಯ ನಿವಾಸಿ ರಾಜೀವಿ ಎಂಬುವವರು ಮಾತನಾಡಿ, ಕಾರ್ಯಕ್ರಮಕ್ಕಾಗಿ ನೀವು ಸಾರ್ವಜನಿಕ ರಸ್ತೆಯನ್ನೇಕೆ ಬಳಸುತ್ತಿದ್ದೀರಿ ಎಂದು ನಾವು ಕುಟುಂಬವನ್ನು ಪ್ರಶ್ನಿಸಿದೆವು. ಅವರು ಆರಂಭದಲ್ಲಿ ಪೊಲೀಸರಿಂದ ಅನುಮತಿ ಪಡೆದಿದ್ದೇವೆ ಎಂದು ಹೇಳಿದರು. ನಾವು ಪರಿಶೀಲಿಸಿದಾಗ ಪೊಲೀಸರು ಅಂತಹ ಯಾವುದೇ ಅನುಮತಿ ನೀಡಲ್ಲ ಎಂದು ಹೇಳಿದರು. ನಂತರ, ಸ್ಥಳೀಯ ಶಾಸಕರಾದ ಅವರು ಅನುಮತಿ ನೀಡಿದ್ದಾರೆಂದು ಹೇಳಿದರು. ಆದರೆ, ಶಾಸಕರು ಅನುಮತಿ ನೀಡಿಲ್ಲ ಎಂದು ಹೇಳಿದ್ದರು. ನಂತರ 112 ಗೆ ಕರೆ ಮಾಡಿದಾಗ ಪೊಲೀಸರು ಆಗಮಿಸಿ ಪರಿಸ್ಥಿತಿಯನ್ನು ನಿಯಂತ್ರಣಕ್ಕೆ ತಂದರು. ಪೆಂಡಾಲ್'ನ್ನು ತೆಗೆದುಹಾಕಿದರು ಎಂದು ಹೇಳಿದ್ದಾರೆ.

ಅವರು ನಿಯಮಗಳನ್ನು ಉಲ್ಲಂಘಿಸಿದ್ದಲ್ಲದೆ, ಪ್ರಶ್ನಿಸಿದ ನಿವಾಸಿಗಳಿಗೂ ಬೆದರಿಕೆ ಹಾಕಿದ್ದಾರನೆಂದು ಎಂದು ಮತ್ತೊಬ್ಬ ನಿವಾಸಿ ತಿಳಿಸಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಬ್ಯಾಂಕ್‌ಗೆ ನಕಲಿ ಗ್ಯಾರಂಟಿ: ರಿಲಯನ್ಸ್‌ ಪವರ್‌ನ ಮುಖ್ಯ ಹಣಕಾಸು ಅಧಿಕಾರಿ ಅಶೋಕ್ ಪಾಲ್ ಬಂಧನ

ಸಮಸ್ತ ಜನರಿಗೆ ಸುಗಮ ಆಡಳಿತ, ಶುದ್ಧ ನೀರಿನ ಪೂರೈಕೆ: ಸ್ವಚ್ಚತೆ- ಸಂಚಾರ ವ್ಯವಸ್ಥೆಗೆ ಸಿಎಂ ಸಿದ್ದರಾಮಯ್ಯ ಕಟ್ಟಪ್ಪಣೆ

ಸಿದ್ದರಾಮಯ್ಯ ಮೇಲೆ ತೂಗುಗತ್ತಿ: ಅಧಿಕಾರದಲ್ಲಿ ಉಳಿಯಲು ಸಂಪುಟ ಪುನಾರಚನೆ ಕಸರತ್ತು; ಬಿಹಾರ-ಕೇರಳ ಚುನಾವಣೆಯತ್ತ ಡಿಕೆಶಿ ಚಿತ್ತ!

ವೀರೇಂದ್ರ ಪಪ್ಪಿ ಕರ್ಮಕಾಂಡ ನೋಡುತ್ತಿದ್ದರೆ CM- DCM ಇನ್ಯಾವ ಪರಿ ಲೂಟಿ ಮಾಡಿ ಹೈಕಮಾಂಡ್ ಗೆ ಕಪ್ಪ ನೀಡುತ್ತಿರಬೇಡಾ?

ಈ ಬಾರಿ ನಾನು ಸಚಿವನಾಗುವ ಭರವಸೆ ಇದೆ: ಸಂಪುಟ ವಿಸ್ತರಣೆಯೇ ನವೆಂಬರ್ ಕ್ರಾಂತಿಯಿರಬಹುದು; ಸಲೀಂ ಅಹ್ಮದ್

SCROLL FOR NEXT