ಕೊಲೆಯಾದ ಯುವತಿ ಹರಿಣಿ, ಹಂತಕ ಯಶಸ್ 
ರಾಜ್ಯ

ಬೆಂಗಳೂರು: ದೂರ ಉಳಿದ ಪ್ರಿಯತಮೆಯನ್ನು ಹೋಟೆಲ್ ಗೆ ಕರೆಯಿಸಿ ಕೊಂದ ಟೆಕ್ಕಿ!

ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದರಿಂದ ರೊಚ್ಚಿಗೆದ್ದ ಟೆಕ್ಕಿಯೊಬ್ಬ ತನ್ನ ಪ್ರಿಯತಮೆಯನ್ನು ಹೊಟೇಲ್ ವೊಂದಕ್ಕೆ ಕರೆಯಿಸಿ, ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ನಡೆದಿದೆ.

ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

25 ವರ್ಷದ ಆರೋಪಿ ಯಶಸ್, ಟೆಕ್ಕಿಯಾಗಿದ್ದಾನೆ. ಆತ ಶುಕ್ರವಾರ ರಾತ್ರಿ OYO ಹೋಟೆಲ್ ನಲ್ಲಿ ಹರಿಣಿ ಹತ್ಯೆ ಮಾಡಿದ್ದಾನೆ. ಇವರಿಬ್ಬರೂ ಕೆಂಗೇರಿ ನಿವಾಸಿಗಳು ಎಂಬುದು ತಿಳಿದುಬಂದಿದೆ.

ವರ್ಷಗಳಿಂದ ಇಬ್ಬರಿಗೂ ಪರಸ್ಪರ ಸ್ನೇಹ, ಸಲುಗೆ ಇತ್ತು. ಕಳೆದ ಎರಡು ತಿಂಗಳಿಂದ ಹರಿಣಿ ಮಾತನಾಡದೆ ಟೆಕ್ಕಿಯಿಂದ ದೂರ ಉಳಿದಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಆಕ್ರೋಶಗೊಂಡ ಟೆಕ್ಕಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿರುವುದಾಗಿ ದಕ್ಷಿಣ ಡಿಸಿಪಿ ಲೋಕೇಶ್ ಲೋಕೇಶ್ ಜಗಲಾಸರ್ ತಿಳಿಸಿದರು.

ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ನೆಲದಲ್ಲೇ ಸ್ತ್ರೀದ್ವೇಷ ಪ್ರದರ್ಶಿಸಿದ ತಾಲೀಬಾನ್ ವಿದೇಶಾಂಗ ಸಚಿವ!; ಸುದ್ದಿಗೋಷ್ಠಿಗೆ ಮಹಿಳೆಯರಿಗಿಲ್ಲ ಪ್ರವೇಶ; ಭುಗಿಲೆದ್ದ ಅಸಮಾಧಾನ!

'ನನ್ನ ಪ್ರಶಸ್ತಿ ಟ್ರಂಪ್‌ಗೆ ಸಮರ್ಪಿತ...' Noble ಶಾಂತಿ ಪ್ರಶಸ್ತಿ ಗೆದ್ದ ಬೆನ್ನಲ್ಲೇ ಮಾರಿಯಾ ಶಾಕಿಂಗ್ ಹೇಳಿಕೆ!

ಭಾರತದ ಹಿತಾಸಕ್ತಿಗಳ ವಿರುದ್ಧ ಅಫ್ಘಾನಿಸ್ತಾನ ನೆಲ ಬಳಕೆಯಾಗಲ್ಲ, ನೀವು ಆಟ ಆಡಬೇಡಿ- ಪಾಕಿಸ್ತಾನ ಅಫ್ಘಾನ್ ವಿದೇಶಾಂಗ ಸಚಿವರ ನೇರ ಎಚ್ಚರಿಕೆ!

ಚಿಕ್ಕಬಳ್ಳಾಪುರ: 'Miss U Chinna'; ಅಪ್ರಾಪ್ತ ಪ್ರೇಯಸಿಯ ದುಪ್ಪಟ್ಟದಿಂದಲೇ ಯುವಕ ನೇಣಿಗೆ ಶರಣು; Instagram Post Viral

ಬೆಂಗಳೂರಿನಲ್ಲೊಂದು ಹೃದಯ ವಿದ್ರಾವಕ ಘಟನೆ: ಇಬ್ಬರು ಮಕ್ಕಳನ್ನು ಕೊಂದು ತಾಯಿ ಆತ್ಮಹತ್ಯೆ

SCROLL FOR NEXT