ಕೊಲೆಯಾದ ಯುವತಿ ಹರಿಣಿ, ಹಂತಕ ಯಶಸ್ 
ರಾಜ್ಯ

ಬೆಂಗಳೂರು: ದೂರ ಉಳಿದ ಪ್ರಿಯತಮೆಯನ್ನು ಹೋಟೆಲ್ ಗೆ ಕರೆಯಿಸಿ ಕೊಂದ ಟೆಕ್ಕಿ!

ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

ಬೆಂಗಳೂರು: ಕಳೆದ ಎರಡು ತಿಂಗಳುಗಳಿಂದ ಮಾತನಾಡದೆ ಅಂತರ ಕಾಯ್ದುಕೊಂಡಿದ್ದರಿಂದ ರೊಚ್ಚಿಗೆದ್ದ ಟೆಕ್ಕಿಯೊಬ್ಬ ತನ್ನ ಪ್ರಿಯತಮೆಯನ್ನು ಹೊಟೇಲ್ ವೊಂದಕ್ಕೆ ಕರೆಯಿಸಿ, ಚಾಕುವಿನಿಂದ ಇರಿದು ಹತ್ಯೆ ಮಾಡಿರುವ ಘಟನೆ ನಗರದ ಪೂರ್ಣ ಪ್ರಜ್ಞಾ ಲೇಔಟ್ ನಲ್ಲಿ ನಡೆದಿದೆ.

ಹೋಟೆಲ್ ನ ಕೊಠಡಿಯೊಂದರಲ್ಲಿ 36 ವರ್ಷದ ಯುವತಿಯ ಕೊಲೆಯಾಗಿದೆ. ಘಟನೆ ನಡೆದ ಎರಡು ದಿನಗಳ ನಂತರ ಯುವತಿ ಹರಿಣಿ ಶವ ಪತ್ತೆಯಾಗಿದೆ.

25 ವರ್ಷದ ಆರೋಪಿ ಯಶಸ್, ಟೆಕ್ಕಿಯಾಗಿದ್ದಾನೆ. ಆತ ಶುಕ್ರವಾರ ರಾತ್ರಿ OYO ಹೋಟೆಲ್ ನಲ್ಲಿ ಹರಿಣಿ ಹತ್ಯೆ ಮಾಡಿದ್ದಾನೆ. ಇವರಿಬ್ಬರೂ ಕೆಂಗೇರಿ ನಿವಾಸಿಗಳು ಎಂಬುದು ತಿಳಿದುಬಂದಿದೆ.

ವರ್ಷಗಳಿಂದ ಇಬ್ಬರಿಗೂ ಪರಸ್ಪರ ಸ್ನೇಹ, ಸಲುಗೆ ಇತ್ತು. ಕಳೆದ ಎರಡು ತಿಂಗಳಿಂದ ಹರಿಣಿ ಮಾತನಾಡದೆ ಟೆಕ್ಕಿಯಿಂದ ದೂರ ಉಳಿದಿದ್ದರು. ಇದೇ ವಿಚಾರಕ್ಕೆ ಗಲಾಟೆ ನಡೆದಿದ್ದು, ಆಕ್ರೋಶಗೊಂಡ ಟೆಕ್ಕಿ, ಚಾಕುವಿನಿಂದ ಇರಿದು ಹತ್ಯೆ ಮಾಡಿದ್ದಾನೆ ಎಂದು ವರದಿಯಾಗಿರುವುದಾಗಿ ದಕ್ಷಿಣ ಡಿಸಿಪಿ ಲೋಕೇಶ್ ಲೋಕೇಶ್ ಜಗಲಾಸರ್ ತಿಳಿಸಿದರು.

ಸುಬ್ರಹ್ಮಣ್ಯಪುರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು, ಆರೋಪಿ ಸದ್ಯ ನ್ಯಾಯಾಂಗ ಬಂಧನದಲ್ಲಿದ್ದಾನೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಭಾರತದ ಮೇಲೆ ಶೇ.50 ರಷ್ಟು ಸುಂಕ ನಾಳೆ ಜಾರಿ: ಕರಡು ಸೂಚನೆ ಹೊರಡಿಸಿದ ಅಮೆರಿಕ

ಧರ್ಮಸ್ಥಳ ಬುರುಡೆ ಕೇಸು: ಮಹೇಶ್ ತಿಮರೋಡಿ ನಿವಾಸದಲ್ಲಿ ಆರೋಪಿ ಚಿನ್ನಯ್ಯನ ಮೊಬೈಲ್ ಪತ್ತೆ

Gaza Hospital Strike: ಹಮಾಸ್ ಸೋಲಿಸುವುದಷ್ಟೇ ನಮ್ಮ ಗುರಿ, ನಾಗರೀಕರನ್ನು ಗೌರವಿಸುತ್ತೇವೆ; ದಾಳಿ ಕುರಿತು ಮೊದಲ ಬಾರಿಗೆ ಇಸ್ರೇಲ್ ವಿಷಾದ

ವಿಧಾನಪರಿಷತ್'ಗೆ ನಾಮನಿರ್ದೇಶನ: ನಾಲ್ವರು MLC ಅಭ್ಯರ್ಥಿಗಳು ಹೆಸರು ಬದಲು, ಪಟ್ಟಿಯಲ್ಲಿ TNIE ಮೈಸೂರು ವಿಭಾಗದ ಮುಖ್ಯಸ್ಥನಿಗೆ ಸ್ಥಾನ

ಬಾನು ಮುಷ್ತಾಕ್‌ ದಸರಾ ಉದ್ಘಾಟನೆಗೆ ಆಕ್ಷೇಪ; ಮುಸ್ಲಿಂ ದ್ವೇಷ ಮನಸ್ಥಿತಿಯನ್ನು ಬದಿಗಿಟ್ಟು, ಸಂವಿಧಾನದ ಆಶಯ ಅರ್ಥ ಮಾಡಿಕೊಳ್ಳಿ: ಸಚಿವ ಹೆಚ್.ಸಿ.ಮಹದೇವಪ್ಪ

SCROLL FOR NEXT