ಮನೋಜ್ ಮತ್ತು ದೇವಿರಮ್ಮ 
ರಾಜ್ಯ

ಚಿನ್ನಸ್ವಾಮಿ ದುರಂತ: ಕಾಲ್ತುಳಿತದಲ್ಲಿ ಮನೋಜ್ ಸಾವು; ಮೊಮ್ಮಗನ ಅಗಲಿಕೆ ನೋವಲ್ಲೇ ಕೊನೆಯುಸಿರೆಳೆದ ಅಜ್ಜಿ

ನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಮೃತ ಪಟ್ಟಿದ್ದರು.

ತುಮಕೂರು: ಆರ್‌ಸಿಬಿ ವಿಜಯೋತ್ಸವದ ವೇಳೆ ಕಾಲ್ತುಳಿತ ಉಂಟಾಗಿ ತುಮಕೂರಿನ ಮನೋಜ್ ಸಾವನ್ನಪ್ಪಿದ್ದು, ಇದೀಗ ಮೊಮ್ಮಗನ ಸಾವಿನ ನೋವಿನಲ್ಲೇ ಅಜ್ಜಿ ಕೊನೆಯುಸಿರೆಳೆದಿದ್ದಾರೆ.

ಕುಣಿಗಲ್‌ನ ನಾಗಸಂದ್ರದಲ್ಲಿ ಮನೋಜ್ ಅಜ್ಜಿ ದೇವೀರಮ್ಮ (70) ಮೃತಪಟ್ಟ ವೃದ್ಧೆ. ಚಿನ್ನಸ್ವಾಮಿ ಸ್ಟೇಡಿಯಂ ಕಾಲ್ತುಳಿತದಲ್ಲಿ ಸಾವನ್ನಪ್ಪಿದ್ದ 11 ಮಂದಿ ಆರ್‌ಸಿಬಿ ಅಭಿಮಾನಿಗಳ ಪೈಕಿ ತುಮಕೂರಿನ ಮನೋಜ್ ಕೂಡ ಮೃತ ಪಟ್ಟಿದ್ದರು.

ಬೆಂಗಳೂರಿನ ಹೆಬ್ಬಾಳ ಬಳಿಯ ಕೆಂಪಾಪುರದ ಕಾಲೇಜಿನಲ್ಲಿ ಬಿಬಿಎಂ ಓದುತ್ತಿದ್ದ ಮನೋಜ್ ಯಲಹಂಕದಲ್ಲಿ ತಂದೆ, ತಾಯಿ ಹಾಗೂ ತಂಗಿ ಜೊತೆ ವಾಸವಿದ್ದ. ಆರ್‌ಸಿಬಿ ವಿಜಯೋತ್ಸವ ದಿನ ಸ್ನೇಹಿತರೊಂದಿಗೆ ಚಿನ್ನಸ್ವಾಮಿ ಸ್ಟೇಡಿಯಂಗೆ ತೆರಳಿದ್ದ ಮನೋಜ್ ಕಾಲ್ತುಳಿತಕ್ಕೆ ಸಿಲುಕಿ ಮೃತಪಟ್ಟಿದ್ದ. ಇದೀಗ ಮೊಮ್ಮಗನ ಅಗಲಿಕೆ ನೋವಲ್ಲೇ ಅಜ್ಜಿ ಕೂಡ ನಿಧನರಾಗಿದ್ದಾರೆ.

ಇನ್ನು ಮೃತ ಮನೋಜ್ ಕುಟುಂಬಕ್ಕೆ ಡಿಸಿ ಶುಭಕಲ್ಯಾಣ್ ಭಾನುವಾರ 25 ಲಕ್ಷ ರೂ ಪರಿಹಾರದ ಚೆಕ್ ನೀಡಿದ್ದಾರೆ. ಬಳಿಕ ಮಾಧ್ಯಮಗಳೊಂದಿಗೆ ಮಾತನಾಡಿದ ಮನೋಜ್ ತಂದೆ ದೇವರಾಜ್, ಚೆಕ್ ಕೊಟ್ಟಿದ್ದಾರೆ. ಚೆಕ್ ಕೊಟ್ಟರೆ ಮಗಾ ಬರ್ತಾನಾ? ಎಂದು ಗೋಳಾಡಿದ್ದಾರೆ.

Follow KannadaPrabha channel on WhatsApp

  

KannadaPrabha News app ಡೌನ್‌ಲೋಡ್ ಮಾಡಿ, ಇತ್ತೀಚಿನ ಸುದ್ದಿಗಳ ಅಪ್ಡೇಟ್ಸ್ ಪಡೆಯಿರಿ

 

Subscribe to KannadaPrabha YouTube Channel and watch Videos

ಅಮೆರಿಕ ನಿಯೋಜಿತ ರಾಯಭಾರಿ ಸೆರ್ಗಿಯೊ ಗೋರ್- ಮೋದಿ, ಜೈಶಂಕರ್ ಭೇಟಿ; Tariff ಒತ್ತಡದ ನಡುವೆ ಭಾರತ-ಅಮೆರಿಕ ಸಂಬಂಧ ಸುಧಾರಣೆಯ ಸೂಚನೆ?

ಅಫ್ಘಾನಿಸ್ತಾನ ನಮ್ಮೊಂದಿಗೆ ಗಡಿ ಹಂಚಿಕೊಂಡಿರುವ ನೆರೆ ರಾಷ್ಟ್ರ- S Jaishankar; ಭಾರತದೊಂದಿಗೆ POK ವಿಲೀನದ ಸುಳಿವು; ಚೀನಾಗೂ ಶಾಕ್!

ಅಬ್ಬಬ್ಬಾ ರೋಮಾಂಚನ: ಅದ್ಭುತ ಸೃಷ್ಟಿಸಿದ ರಿಷಬ್ ಶೆಟ್ಟಿಗೆ ರಾಷ್ಟ್ರಪ್ರಶಸ್ತಿ ಕೊಡಲೇಬೇಕು - ತಮಿಳು ನಿರ್ದೇಶಕ ಅಟ್ಲೀ

Pakistan: ಇಸ್ರೇಲ್ ವಿರೋಧಿ ಪ್ರತಿಭಟನಾ ಜಾಥಾ, ಪೋಲೀಸರ ಗುಂಡೇಟಿಗೆ 11 ಮಂದಿ ಬಲಿ! Video

ಉತ್ತರ ಪ್ರದೇಶಕ್ಕೆ ಭೇಟಿ ನೀಡಿದ ತಾಲಿಬಾನ್ ಸಚಿವನಿಗೆ ಅದ್ಧೂರಿ ಸ್ವಾಗತ, ಸರ್ಕಾರದ ಭದ್ರತೆ; ಯೋಗಿಗೆ ನಾಚಿಕೆಯಾಗಬೇಕು- SP ಸಂಸದ ಶಫೀಕರ್

SCROLL FOR NEXT