ನಿವೃತ್ತ ನ್ಯಾಯಮೂರ್ತಿ ಎಚ್.ಎನ್. ನಾಗಮೋಹನ್‌ ದಾಸ್  
ರಾಜ್ಯ

ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಮೀಕ್ಷೆಯ ಅವಧಿ ಮತ್ತೆ ವಿಸ್ತರಣೆ, ಸಮೀಕ್ಷೆಯಲ್ಲಿ ಭಾಗವಹಿಸದವರು B1-K1 ಕೇಂದ್ರಗಳಿಗೆ ಭೇಟಿ ನೀಡಲು ಅವಕಾಶ!

ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.10ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.22ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಬೆಂಗಳೂರು: ನಿವೃತ್ತ ನ್ಯಾ. ಎಚ್.ಎನ್.ನಾಗಮೋಹನ್ ದಾಸ್ ಏಕಸದಸ್ಯ ವಿಚಾರಣಾ ಆಯೋಗದ ನೇತೃತ್ವದಲ್ಲಿ ನಡೆಯುತ್ತಿರುವ ಒಳ ಮೀಸಲಾತಿಗಾಗಿ ಪರಿಶಿಷ್ಟ ಜಾತಿಗಳ ಸಮಗ್ರ ಸಮೀಕ್ಷೆಯ ಅವಧಿಯನ್ನು ಮತ್ತೆ ವಿಸ್ತರಣೆ ಮಾಡಲಾಗಿದೆ.

ಈಗಾಗಲೇ ಜೂ.6ರ ವರೆಗೆ ರಾಜ್ಯಾದ್ಯಂತ ನಡೆಸಲಾದ ಸಮೀಕ್ಷೆಯಲ್ಲಿ ಶೇ.90ರಷ್ಟು ಪ್ರಗತಿಯನ್ನು ಸಾಧಿಸಲಾಗಿದೆ. ಉಳಿದಂತೆ ಸುಮಾರು ಶೇ.10ರಷ್ಟು ಪ್ರಗತಿಯನ್ನು ಸಾಧಿಸಬೇಕಾಗಿದೆ. ಆದ್ದರಿಂದ ಸಮೀಕ್ಷೆಯ ಅವಧಿಯನ್ನು ಜೂ.22ರ ವರೆಗೆ ವಿಸ್ತರಣೆ ಮಾಡಲಾಗಿದೆ.

ಕೆಲವು ಪರಿಶಿಷ್ಟ ಜಾತಿಗೆ ಸೇರಿದ ಸಂಘ ಸಂಸ್ಥೆಗಳು ಸಮೀಕ್ಷೆಯ ಅವಧಿಯನ್ನು ಪುನಃ ವಿಸ್ತರಿಸಬೇಕೆಂದು ಮನವಿಯನ್ನು ಸಲ್ಲಿಸಿದ್ದಾರೆ. ಆದರೆ, ರಾಜ್ಯದಲ್ಲಿ ಶಾಲೆಗಳು ಪ್ರಾರಂಭವಾಗಿರುವ ಹಿನ್ನೆಲೆಯಲ್ಲಿ ಸಮೀಕ್ಷೆಗೆ ಗಣತಿದಾರರನ್ನಾಗಿ ನೇಮಕ ಮಾಡಲಾಗಿದ್ದ ಶಿಕ್ಷಕರನ್ನು ಸಮೀಕ್ಷೆ ಕಾರ್ಯದಿಂದ ಬಿಡುಗಡೆಗೊಳಿಸಲಾಗಿದೆ. ಹೀಗಾಗಿ, ಪರಿಶಿಷ್ಟ ಜಾತಿ ಸಮೀಕ್ಷೆಯಲ್ಲಿ ಇವರೆಗೂ ಭಾಗವಹಿಸದೇ ಇರುವ ಕರ್ನಾಟಕ ರಾಜ್ಯಕ್ಕೆ ಸೇರಿದ ಪರಿಶಿಷ್ಟ ಜಾತಿ ಕುಟುಂಬದವರು 2025 ಜೂನ್ ರಿಂದ ರಾಜ್ಯದಲ್ಲಿನ ಒಟ್ಟು 9400 ನಾಗರಿಕ ಸೇವಾ ಕೇಂದ್ರಗಳಾದ, "ಕರ್ನಾಟಕ ಒನ್", 'ಬೆಂಗಳೂರು ಒನ್" ಹಾಗೂ 198 ಬಿಬಿಎಂಪಿ ವಾರ್ಡ್ ಕಚೇರಿ"ಗಳಿಗೆ ಭೇಟಿ ನೀಡಿ 2025ನೇ ಜೂನ್ 22ರ ವರೆಗೂ ತಮ್ಮ ಮಾಹಿತಿಯನ್ನು ಸಲ್ಲಿಸಲು ಅವಕಾಶವನ್ನು ಕಲ್ಪಿಸಲಾಗಿದೆ.

ಇದಲ್ಲದೆ ಬಾಪೂಜಿ ಸೇವಾ ಕೇಂದ್ರಗಳಲ್ಲಿಯೂ ಸಹ ಸದರಿ ಅವಕಾಶವನ್ನು ಕಲ್ಪಿಸಲಾಗುವುದು. ಸದರಿ ಮಾಹಿತಿಯನ್ನು ನಮೂದಿಸಲು ಸಾರ್ವಜನಿಕರಿಗೆ, ತಮ್ಮ ಆಧಾರ್ ಕಾರ್ಡ್ ಅಥವಾ ಪಡಿತರ ಚೀಟಿ ಸಂಖ್ಯೆಯ ಅವಶ್ಯಕತೆಯಿರುತ್ತದೆ. ಜೊತೆಗೆ ಆನ್ ಲೈನ್ ನಲ್ಲಿ ಪರಿಶಿಷ್ಟ ಜಾತಿ ಕುಟುಂಬದವರು ಸ್ವಯಂ ಘೋಷಣೆ ಮಾಡಿಕೊಳ್ಳಲು https://schedulecastesurvey.karnataka.gov.in/selfdeclaration ಲಿಂಕ್ ಮೂಲಕ 2025ನೇ ಜೂನ್ 22ರ ವರೆಗೆ ತಮ್ಮ ವಿವರಗಳನ್ನು ನೀಡಬಹುದು ಎಂದು ಆಯೋಗ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ.

Follow KannadaPrabha channel on WhatsApp

  

Download the KannadaPrabha News app to follow the latest news updates

  

Subscribe and Receive exclusive content and updates on your favorite topics

  

Subscribe to KannadaPrabha YouTube Channel and watch Videos

'ಇಸ್ರೇಲ್‌ ಜೊತೆ ನಮ್ಮ ಸಂಬಂಧ 'ರಕ್ತ ಮತ್ತು ತ್ಯಾಗ'ದಲ್ಲಿ ಬರೆಯಲ್ಪಟ್ಟಿದೆ, ನಾನು ಹುಟ್ಟಿದ ವರ್ಷ ಭಾರತ ಇಸ್ರೇಲ್ ಗೆ ಮಾನ್ಯತೆ ನೀಡಿತು': ಪ್ರಧಾನಿ ಮೋದಿ-Video

ಹಗರಣ ರಹಿತ ಹುದ್ದೆ ಭರ್ತಿಗೆ ಕ್ರಮ: ಯುವಕರು ಧೈರ್ಯವಾಗಿರಿ, ನಿಮ್ಮ ಸಮಸ್ಯೆ ಬಗೆಹರಿಸುತ್ತೇವೆ, ಸದ್ಯದಲ್ಲೇ ಸಂದೇಶ ನೀಡುತ್ತೇವೆ; ಡಿ ಕೆ ಶಿವಕುಮಾರ್

Gold Rate Today: ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟಿದೆ? ಇಲ್ಲಿದೆ ವಿವರ...

ವಿದೇಶಿ ಮಹಿಳೆಗೆ ಪತ್ರ ಬರೆದು ಅಂಬೇಡ್ಕರ್ ಸೋಲನ್ನು ನೆಹರು ಸಂಭ್ರಮಿಸಿದ್ದು ನಿಜವಲ್ಲವೇ? 'ಗೂಗಲ್ ಬೇಬಿ'ಯಂತೆ ವರ್ತಿಸಬೇಡಿ!

ಪ್ರಧಾನಿ ನರೇಂದ್ರ ಮೋದಿ ಮತ್ತೊಂದು ದಾಖಲೆ: Instagramನಲ್ಲಿ 100 ಮಿ. ಫಾಲೋವರ್ಸ್ ದಾಟಿದ ಮೊದಲ ವಿಶ್ವ ನಾಯಕ

SCROLL FOR NEXT